478630letter to the editorಮತದಾನ ನಿರಾಶೆ! ಮತದಾರರ ಹತಾಶೆ!/response/2009/0424-letter-to-the-editor-lok-sabha-election-2009.htmlನನ್ನ ಭಯ ನಿಜವಾಗಿದೆ. ಕರ್ನಾಟಕದಲ್ಲಿ ಮೊದಲ ಸುತ್ತಿನ ಮತದಾನದ ಪ್ರಮಾಣ ಅತ್ಯಂತ ಕಳಪೆಯಾಗಿದೆ. ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಶೇಕಡಾ 51ರಷ್ಟು ಮಾತ್ರ ಮತದಾನವಾಗಿದೆ. ವಿದ್ಯಾವಂತರು ಬಹುಸಂಖ್ಯೆಯಲ್ಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 50ರಷ್ಟು ಮಾತ್ರ ಮತದಾನವಾದರೆ ಬೆಂಗಳೂರು ಸೆಂಟ್ರಲ್ ಮತ್ತು ಉತ್ತರ ಕ್ಷೇತ್ರಗಳಲ್ಲಿ ಶೇಕಡಾ 45ರಷ್ಟು ಕಳಪೆ ಪ್ರಮಾಣದ ಮತದಾನವಾಗಿದೆ!ಹೀಗೇಕೆ ಎಂದು ಆಲೋಚಿಸಿದಾಗ ನನಗೆ ಅನ್ನಿಸುವ ಕಾರಣಗಳು 36193http://kannada.oneindia.com/img/2009/04/24-anandram-shastri2.jpg478630letter to the editorನಮ್ಮನ್ಯಾಕೆ ಹಿಂಗೆ ದೂರ ಮಾಡ್ತೀರ?/response/2009/0627-letter-to-the-editor-by-vallisha-shastry.htmlಮೃತ್ಯುಂಜಯ ಕಲ್ಮಠರ 'ಅನಿವಾಸಿಗಳಿಗ್ಯಾಕೆ ಮಣೆ ಮುಖ್ಯಮಂತ್ರಿಗಳೇ?' ಅನ್ನುವ ಲೇಖನ ಓದಿ ಬಹಳಷ್ಟು ಅನಿವಾಸಿ ಕನ್ನಡಿಗರ ಮನಸ್ಸಿಗೆ ಖೇದವಾಗಿದೆ. ಅನಿವಾಸಿಗಳ ಬಗ್ಗೆ ಮೂಲ ಅರಿವೆಯೇ ಇಲ್ಲದ ಕಲ್ಮಠರಿಗೆ ಅರಿವು ಮೂಡಲಿ ಎಂದು ಈ ಲೇಖನ.ಯಾಕರಪ್ಪಾ ನಮಗೆಲ್ಲಾ ಹಿಂಗೆ ಗೋಳ್ಹುಯ್ಕೋತೀರಾ? ಮೊದಲೇ ಹೊಟ್ಟೆಪಾಡಿಗೆ ಊರ ಬಿಟ್ಟು, ಮನೆ ಬಿಟ್ಟು ಬಂದಿದೀವಿ. ನಮ್ಮ ಅಪ್ಪ ಅಮ್ಮ ಹಣವಂತರಾಗಿದ್ದಿದ್ರೆ ನಾವ್ಯಾಕೆ ಇಲ್ಲಿಗೆ ಬರ್ತಾ 37623http://kannada.oneindia.com/img/2009/06/27-mavasu2.jpg478630letter to the editorಸರಬ್ಜಿತ್ ಗೆ ಕ್ಷಮಾದಾನ ಕೇಳಬೇಕೆ ಬೇಡವೆ?/response/2009/0629-letter-to-the-editor-bharat-sastry.html'ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ' ಕುರಿತ ಆನಂದರಾಮ ಶಾಸ್ತ್ರಿ ಲೇಖನ ಓದಿದೆ. ನನ್ನ ಕೆಲವು ಅನಿಸಿಕೆಗಳನ್ನು ವಾಚಕರ ಜತೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಶಾಸ್ತ್ರೀ ಅವರ ಲೇಖನದ ಆಶಯವನ್ನು ನಾನು ಅಲ್ಲಗಳೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಲೇಖನ ಯಾವುದೇ ನಿಖರ ಸಂದೇಶ ನೀಡುತ್ತಿಲ್ಲವಲ್ಲ ಎಂಬ ವಿಷಾದವಿದೆ.* ಭರತ್ ಶಾಸ್ತ್ರಿಸರಬ್ಜಿತ್ ಮತ್ತು ಅಫ್ಜಲ್ ಗುರು ಇಬ್ಬರ ಪ್ರಕರಣಗಳ 37641http://kannada.oneindia.com/img/2009/06/29-bharat-sastry1.jpg478630letter to the editorಮುಂಬಯಿ ಸಮುದ್ರ ಸೇತು ರಾಜೀವ್ ನೇಮ್ ಪ್ಲೇಟು!/response/2009/0701-mumbai-sea-bridge-too-named-after-rajiv.htmlಅಂತೂ ಇಂತೂ ಸುಮಾರು 10 ವರ್ಷದಿಂದ ಕುಂಟುತ್ತ ಸಾಗಿದ್ದ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸೇತುವೆ ಜೂನ್ 30ಕ್ಕೆ ದೇಶಕ್ಕೆ ಸಮರ್ಪಣೆಗೊಂಡಿದ್ದು ತುಂಬ ಸಂತೋಷ. ನೂರಾರು ಅಡೆತಡೆ, ಸ್ಟೇ ಇತ್ಯಾದಿಗಳನ್ನು ಬದಿಗೊತ್ತಿ ಒಂದು ಸುಂದರ ಸುಸಜ್ಜಿತ ಸೇತುವೆ ನಿರ್ಮಾಣವಾಗಿದೆ. 'ಮುಂಬೈ-ಕರ್' ಗಳಿಗೆ 40 ನಿಮಿಷದ ದಾರಿಯನ್ನು 7-8 ನಿಮಿಷದಲ್ಲಿ ಪೂರೈಸುವ ಭಾಗ್ಯ ಒದಗಿ ಬಂದಿದೆ.ಆದರೆ ಯಥಾಪ್ರಕಾರ ಸೋನಿಯಾ ಗಾಂಧಿಯವರು 37707http://kannada.oneindia.com/img/2009/07/01-ajit-hegde1.jpg478630letter to the editorಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg378925aravind limbavaliಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg378925aravind limbavaliಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg378925aravind limbavaliಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg378925aravind limbavaliಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg378925aravind limbavaliವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ/cj/mathur-raghu/2009/0909-education-dept-illegal-transfers-limbavali.htmlಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ 39086http://kannada.oneindia.com/img/2009/09/09-mathur-raghu2.jpg276965ಅರವಿಂದ ಲಿಂಬಾವಳಿಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg276965ಅರವಿಂದ ಲಿಂಬಾವಳಿಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg276965ಅರವಿಂದ ಲಿಂಬಾವಳಿಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg276965ಅರವಿಂದ ಲಿಂಬಾವಳಿಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg276965ಅರವಿಂದ ಲಿಂಬಾವಳಿಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpgnews"> ಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ | Mysore university | Combined PG course | Physics | Basic science - ಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ - Kannada Oneindia

ಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ

Mysuru university
ಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ ಎಲ್ಲ ವಿದ್ಯಾರ್ಥಿಗಳಿಗೂ ಸಿಕ್ಕಿದೆ. ಇದು ಆ ಕೋರ್ಸಿನ ಯಶಸ್ಸಿಗೆ ಸಾಕ್ಷಿ.

ಪ್ರೊ. ಶಶಿಧರ್ ಕುಲಪತಿಗಳಾಗಿದ್ದಾಗ ಆರಂಭಿಸಲಾಗಿದ್ದ ಈ ಕೋರ್ಸ್ ಅವರು ನಿವೃತ್ತರಾಗುತ್ತಿದ್ದಂತೆಯೇ ನಿರ್ಲಕ್ಷ್ಯಗೊಳಗಾಗಿದ್ದು ಇದೀಗ ಶಾಶ್ವತವಾಗಿ ಕಣ್ಮುಚ್ಚಿದೆ. ಈ ವರ್ಷದಿಂದ ಆ ಹೆಮ್ಮೆಯ ಕೋರ್ಸ್ ಇಲ್ಲ. ಆಸಕ್ತ ವಿದ್ಯಾರ್ಥಿಗಳಿಗೆ ಬಾಗಿಲು ಶಾಶ್ವತವಾಗಿ ಮುಚ್ಚಿದೆ. ಈ ಹೆಮ್ಮೆಯ ಕಾರ್ಯ ಎಸಗಿದ ನಮ್ಮ ಉನ್ನತ ಶಿಕ್ಷಣ ಸಚಿವರು, ವಿಶ್ವವಿದ್ಯಾಲಯದ ಕುಲಪತಿಗಳು, ಕೋರ್ಸ್ ಕೋ-ಆರ್ಡಿನೇಟರ್‌ಗಳು ಮತ್ತು ಸಂಬಂಧಪಟ್ಟ ಎಲ್ಲರಿಗೂ ಜೈಹೋ!

ಐದು ವರ್ಷಗಳ ಭೌತವಿಜ್ಞಾನದ ಇಂಟಿಗ್ರೇಟೆಡ್ ಎಂ.ಎಸ್‌ಸಿ. ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ನಿವೃತ್ತ ಕುಲಪತಿಗಳು, ವಿಜ್ಞಾನದ ಪರಿಣತರು, ವಿಜ್ಞಾನಿಗಳು, ವಿಶೇಷವಾಗಿ ಚೆನ್ನೈನ ಇನ್ಸ್ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸಸ್‌ನ ಪ್ರೊ. ಜಿ. ರಾಜಶೇಖರನ್, ಪ್ರೊ. ಎಚ್.ಎಸ್. ಮಣಿ, ಪ್ರೊ. ಎಂ.ವಿ.ಎನ್. ಮೂರ್ತಿ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ. ಎಸ್.ವಿ. ಸುಬ್ರಹ್ಮಣ್ಯಂ, ಪ್ರೊ. ಎಚ್.ಎಲ್. ಭಟ್, ಪ್ರೊ. ಹರಿದಾಸ್, ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್‌ನ ಪ್ರೊ. ಆರ್. ಶ್ರೀನಿವಾಸನ್ ಈ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದು ಎರಡನೇ ವರ್ಷದಿಂದಲೇ ಸಂಶೋಧನೆಗೆ ಅವಕಾಶ ಕಲ್ಪಿಸಲಾಗಿತ್ತು. ಇಲ್ಲಿ ತರಬೇತಿ ಪಡೆದವರಿಗೆ ಮುಂದೆ ಡಿ.ಆರ್.ಡಿ.ಒ.ದಂತಹ ಉನ್ನತ ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆ ಮತ್ತು ಉದ್ಯೋಗ ಅವಕಾಶ ಗ್ಯಾರಂಟಿ. ಕೇವಲ 18 ಮಂದಿಗೆ ಮಾತ್ರ ಅವಕಾಶ ಇರುವ ಈ ಕೋರ್ಸ್ ಒಟ್ಟು 10 ಸೆಮಿಸ್ಟರ್‌ಗಳದ್ದಾಗಿದ್ದು ಪ್ರತಿ ಸೆಮಿಸ್ಟರ್‌ನಲ್ಲಿ ಥಿಯರಿ, ಪ್ರಾಕ್ಟಿಕಲ್ ಮತ್ತು ಇಂಟರ್‌ನಲ್ ಅಸೆಸ್‌ಮೆಂಟ್ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.

(ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿರಿ: www.uni-mysore.ac.in/unity/course/)

ಈ ಕೋರ್ಸ್‌ಗೆ ಸಂಬಂಧಿಸಿದಂತೆ ನಮ್ಮ ಶಾಸಕರು, ಸಂಸದರು ಮತ್ತು ಕೆಲವು ಸಚಿವರನ್ನು ಸಂಪರ್ಕಿಸಿದಾಗ ತೀರಾ ನಿರಾಶಾಜನಕ ಉತ್ತರ ದೊರೆತಿದೆ. ಇಚ್ಛಾಶಕ್ತಿಯೇ ಇಲ್ಲದ ಇಂತಹ ಜನನಾಯಕರಿಂದ ವಿಜ್ಞಾನಕ್ಕೆ ಸಿಕ್ಕುವುದು ಇಷ್ಟೇ. ಅವೈಜ್ಞಾನಿಕ ವಿಷಯಗಳನ್ನು ಗಂಟಾಘೋಷವಾಗಿ ಒದರುತ್ತಿರುವ ಆರ್ಟ್‌ಆಫ್ ಲಿವಿಂಗ್‌ನಂತಹ ಸಂಸ್ಥೆಗಳನ್ನು ಉನ್ನತ ಶಿಕ್ಷಣಕ್ಕೆ ಅಡ್ವೈಸರ್ ಆಗಿ ನೇಮಿಸಿದರೆ ಆಗುವುದು ಇಂಥದ್ದೇ.

ಈಗಲೂ ಕಾಲ ಮಿಂಚಿಲ್ಲ ಮೈಸೂರು ವಿಶ್ವವಿದ್ಯಾಲಯ ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯವರು ಕೂಡಲೇ ಕಾರ್ಯಪ್ರವೃತ್ತರಾಗಿ ಈ ವಿಶೇಷ ಕೋರ್ಸ್ ಬಗ್ಗೆ ರಾಜ್ಯದ ಎಲ್ಲ ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ, ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು ಮತ್ತು ನಿರ್ಲಕ್ಷ್ಯ ಧೋರಣೆ ತಳೆದಿರುವ ಕೋರ್ಸ್ ಕೊ-ಆರ್ಡಿನೇಟರ್ ಮತ್ತು ವಿಭಾಗ ಮುಖ್ಯಸ್ಥರನ್ನು ಕೂಡಲೇ ಬದಲಿಸಿ, ಹೊಸಬರನ್ನು ನೇಮಿಸಿ, ಹೊಸ ಹುರುಪಿನ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು.

ಈಗಾಗಲೇ ಮುಚ್ಚಿರುವ ಫೈಲ್ ತೆಗೆಸಿ, ಸಂಶೋಧನೆಗೆ ಅವಕಾಶ ಕಲ್ಪಿಸುವ ಅಪರೂಪದ ಈ ಕೋರ್ಸ್‌ನ್ನು ಮತ್ತೆ ಆರಂಭಿಸಲು ನಮ್ಮ ಶಿಕ್ಷಣ ಸಚಿವರಿಗೆ ಸಾಧ್ಯವೇ? ಅಂತಹ ಇಚ್ಛಾಶಕ್ತಿ ನಮ್ಮ ಮುಖ್ಯಮಂತ್ರಿಗಳಿಗಿದೆಯೇ? ವಿಜ್ಞಾನದ ಹೆಸರಿನಲ್ಲಿ ತೌಡುಕುಟ್ಟುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕರ್ನಾಟಕ ವಿಜ್ಞಾನ ಪರಿಷತ್ತು, ವಿವಿಧ ವಿಜ್ಞಾನ ಸಂಘ-ಸಂಸ್ಥೆಗಳು ಏನು ಮಾಡುತ್ತಿವೆ? ನಮ್ಮ ಪತ್ರಿಕಾ ಸಂಪಾದಕರುಗಳು ಏಕೆ ಸುಮ್ಮನಿದ್ದಾರೆ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಯಾವಾಗ? ನೀವೇ ಹೇಳಿ.

ವಂದನೆಗಳೊಂದಿಗೆ ತಮ್ಮ ವಿಶ್ವಾಸಿ,

ಬೇದ್ರೆ ಎನ್. ಮಂಜುನಾಥ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+