ಬೆಅಂವಿ ನಿಲ್ದಾಣಕ್ಕೆ ಗಂಗಜ್ಜಿ ಹೆಸರಿಡಿ

ಗಂಗೂಬಾಯಿ ಅವರ ನಿಧಕ್ಕೆ ಸರಕಾರ ತೀವ್ರ ಶೋಕ ವ್ಯಕ್ತಪಡಿಸಿದೆ. ಜೊತೆಗೆ ಹುಬ್ಬಳ್ಳಿಯಲ್ಲಿ ನೂತನವಾಗಿ ಸ್ಥಾಪಿಸಲಾಗುವ ಸಂಗೀತ ವಿಶ್ವವಿದ್ಯಾಲಯಕ್ಕೆ ಗಂಗೂಬಾಯಿ ಅವರ ಹೆಸರಿಡುವ ಕುರಿತು ಚಿಂತನೆ ನಡೆಸಲಾಗಿದೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿ ಶಿಕ್ಷಣ ಸಂಸ್ಥೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಎರಡು ದಿನ ಶೋಕಾಚರಣೆ ಆಚರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಗಂಗೂಬಾಯಿ ಹಾನಗಲ್ ಎಂದ ತಕ್ಷಣ ಕರ್ನಾಟಕದ ಹೆಸರು ಬೆನ್ನಹಿಂದೆ ಬಂದು ನಿಲ್ಲಲಿದೆ. ದೇಶ ವಿದೇಶಗಳಲ್ಲಿ ಕನ್ನಡದ ಕಂಪನ್ನು ತಮ್ಮ ಗಾಯನದ ಮೂಲಕ ಹರಿಯುವಂತೆ ಮಾಡಿರುವ ಗಂಗೂಬಾಯಿ ಹಾನಗಲ್ ಅವರ ಹೆಸರನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಸಂಗೀತ ವಿವಿಗೆ ಹೆಸರಿಟ್ಟರೆ ಸಾಲದು. ಅವರು ಒಂದು ಪ್ರದೇಶಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ರಾಜ್ಯ ಹಾಗೂ ದೇಶ ಕಂಡ ಅಪರೂಪದ ಕಲಾವಿದೆ. ಇಂತಹ ಕಲಾವಿದೆಗೆ ಸೂಕ್ತ ಮಾನ ಸನ್ಮಾನಗಳನ್ನು ಮಾಡುವುದು ಸರಕಾರದ ಕರ್ತವ್ಯ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗಂಗೂಬಾಯಿ ಹಾನಗಲ್ ಅವರ ಹೆಸರಿಡುವುದು ಅತ್ಯಂತ ಸೂಕ್ತ. ನಾಡಿನ ಸಮಸ್ತ ನಾಗರಿಕರೂ ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಕೆಲಸಕ್ಕೆ ಮುಂದಾದರೆ, ಸಂಗೀತ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡಿದ ಮೇರು ಸಾಧಕಿಗೆ ಅಷ್ಟರ ಮಟ್ಟಿಗೆ ಗೌರವಿಸಿದಂತಾಗುತ್ತದೆ. ಪ್ರತಿಪಕ್ಷಗಳು ಈಗಾಗಲೇ ಗಂಗೂಬಾಯಿಗೆ ಭಾರತರತ್ನ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಿ ಎಂದು ದುಂಬಾಲು ಬಿದ್ದಿವೆ. ಇದರ ಜೊತೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಗಂಗೂಬಾಯಿ ಹಾನಗಲ್ ಅವರ ಹೆಸರಿಡಿ ಎಂದು ಒತ್ತಡ ಹೇರುವುದು ಸಕಾಲ.
ಸಿನಿಮಾ ನಟನಟಿಯರು ಎದ್ರು ಒಂದ್ ಹಾಡು, ಬಿದ್ರು ಒಂದ್ ಹಾಡು ಪ್ರಸಾರ ಮಾಡುವ ಕನ್ನಡ ಎಫ್ಎಂಗಳು ಹಿಂದೂಸ್ತಾನಿ ಸಂಗೀತದ ಮೇರು ಶಿಖರದ ಸಂಗೀತಗಳಿಗೆ ಆದ್ಯತೆ ನೀಡಬೇಕಿದೆ. ಅವರ ಗೌರವಾರ್ಥವಾಗಿ ಒಂದು ದಿನದ ಮಟ್ಟಿಗಾದರೂ ಹಿಂದೂಸ್ತಾನಿ ಸಂಗೀತ ರಸದೌತಣವನ್ನು ಅಭಿಮಾನಿಗಳಿಗೆ ನೀಡಬೇಕಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications