ಬೆಅಂವಿ ನಿಲ್ದಾಣಕ್ಕೆ ಗಂಗಜ್ಜಿ ಹೆಸರಿಡಿ

ಗಂಗೂಬಾಯಿ ಅವರ ನಿಧಕ್ಕೆ ಸರಕಾರ ತೀವ್ರ ಶೋಕ ವ್ಯಕ್ತಪಡಿಸಿದೆ. ಜೊತೆಗೆ ಹುಬ್ಬಳ್ಳಿಯಲ್ಲಿ ನೂತನವಾಗಿ ಸ್ಥಾಪಿಸಲಾಗುವ ಸಂಗೀತ ವಿಶ್ವವಿದ್ಯಾಲಯಕ್ಕೆ ಗಂಗೂಬಾಯಿ ಅವರ ಹೆಸರಿಡುವ ಕುರಿತು ಚಿಂತನೆ ನಡೆಸಲಾಗಿದೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿ ಶಿಕ್ಷಣ ಸಂಸ್ಥೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಎರಡು ದಿನ ಶೋಕಾಚರಣೆ ಆಚರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಗಂಗೂಬಾಯಿ ಹಾನಗಲ್ ಎಂದ ತಕ್ಷಣ ಕರ್ನಾಟಕದ ಹೆಸರು ಬೆನ್ನಹಿಂದೆ ಬಂದು ನಿಲ್ಲಲಿದೆ. ದೇಶ ವಿದೇಶಗಳಲ್ಲಿ ಕನ್ನಡದ ಕಂಪನ್ನು ತಮ್ಮ ಗಾಯನದ ಮೂಲಕ ಹರಿಯುವಂತೆ ಮಾಡಿರುವ ಗಂಗೂಬಾಯಿ ಹಾನಗಲ್ ಅವರ ಹೆಸರನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಸಂಗೀತ ವಿವಿಗೆ ಹೆಸರಿಟ್ಟರೆ ಸಾಲದು. ಅವರು ಒಂದು ಪ್ರದೇಶಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ರಾಜ್ಯ ಹಾಗೂ ದೇಶ ಕಂಡ ಅಪರೂಪದ ಕಲಾವಿದೆ. ಇಂತಹ ಕಲಾವಿದೆಗೆ ಸೂಕ್ತ ಮಾನ ಸನ್ಮಾನಗಳನ್ನು ಮಾಡುವುದು ಸರಕಾರದ ಕರ್ತವ್ಯ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗಂಗೂಬಾಯಿ ಹಾನಗಲ್ ಅವರ ಹೆಸರಿಡುವುದು ಅತ್ಯಂತ ಸೂಕ್ತ. ನಾಡಿನ ಸಮಸ್ತ ನಾಗರಿಕರೂ ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಕೆಲಸಕ್ಕೆ ಮುಂದಾದರೆ, ಸಂಗೀತ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡಿದ ಮೇರು ಸಾಧಕಿಗೆ ಅಷ್ಟರ ಮಟ್ಟಿಗೆ ಗೌರವಿಸಿದಂತಾಗುತ್ತದೆ. ಪ್ರತಿಪಕ್ಷಗಳು ಈಗಾಗಲೇ ಗಂಗೂಬಾಯಿಗೆ ಭಾರತರತ್ನ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಿ ಎಂದು ದುಂಬಾಲು ಬಿದ್ದಿವೆ. ಇದರ ಜೊತೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಗಂಗೂಬಾಯಿ ಹಾನಗಲ್ ಅವರ ಹೆಸರಿಡಿ ಎಂದು ಒತ್ತಡ ಹೇರುವುದು ಸಕಾಲ.
ಸಿನಿಮಾ ನಟನಟಿಯರು ಎದ್ರು ಒಂದ್ ಹಾಡು, ಬಿದ್ರು ಒಂದ್ ಹಾಡು ಪ್ರಸಾರ ಮಾಡುವ ಕನ್ನಡ ಎಫ್ಎಂಗಳು ಹಿಂದೂಸ್ತಾನಿ ಸಂಗೀತದ ಮೇರು ಶಿಖರದ ಸಂಗೀತಗಳಿಗೆ ಆದ್ಯತೆ ನೀಡಬೇಕಿದೆ. ಅವರ ಗೌರವಾರ್ಥವಾಗಿ ಒಂದು ದಿನದ ಮಟ್ಟಿಗಾದರೂ ಹಿಂದೂಸ್ತಾನಿ ಸಂಗೀತ ರಸದೌತಣವನ್ನು ಅಭಿಮಾನಿಗಳಿಗೆ ನೀಡಬೇಕಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications