ಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!

ಸಾಮಾಜಿಕ ಕಾರ್ಯಗಳಿಗಾಗಿ ಊರೂರು-ಗಲ್ಲಿಗಲ್ಲಿ ಸುತ್ತುವ ನಾನು ಚಿಕುನ್ ಗುನ್ಯಾ ಪೀಡಿತ ಬಡ ಸಂಸಾರಸ್ಥರನ್ನು ಸಾಕಷ್ಟು ನೋಡಿದ್ದೇನೆ. ಕುಟುಂಬ ಸದಸ್ಯರ ಚಿಕುನ್ ಗುನ್ಯಾ ಮರಣದಿಂದಾಗಿ ಎಷ್ಟೋ ಬಡಸಂಸಾರಗಳು ದಿಕ್ಕೆಟ್ಟುಹೋಗಿರುವುದು ನನ್ನ ಗಮನಕ್ಕೆ ಬಂದಿದೆ. ಎಚ್1ಎನ್1 ("ಹಂದಿಜ್ವರ") ಕಾಯಿಲೆಯ ಘೋರಸ್ವರೂಪವಂತೂ ಇಡೀ ಜಗತ್ತಿಗೇ ವೇದ್ಯವಾಗಿದೆ. ಬೆಂಗಳೂರಿನಲ್ಲಿ ಅದು ಯುವಕ ಯುವತಿಯರನ್ನು ಬಲಿತೆಗೆದುಕೊಳ್ಳತೊಡಗಿದೆ.
ನಮ್ಮ ಆರೋಗ್ಯ ಮಂತ್ರಿಗಳು ತಾನು ಗಂಟೆಗೊಮ್ಮೆ ಎಲ್ಲ ಜಿಲ್ಲೆಗಳನ್ನೂ ಸಂಪರ್ಕಿಸುತ್ತಿದ್ದೇನೆಂದು ಹೇಳುತ್ತಾರೆ. ಇದೆಲ್ಲಾದರೂ ಸಾಧ್ಯವೆ? ಸಾಧ್ಯವಾದರೂ, ಒಂದೊಂದು ಜಿಲ್ಲೆಯ ಅಧಿಕಾರಿಗಳೊಡನೆ ಕೇವಲ ಒಂದೋ ಎರಡೋ ನಿಮಿಷ ಮಾತನಾಡಿ ನಮ್ಮ ಆರೋಗ್ಯ ಸಚಿವರು ಅದೇನು ಉಸ್ತುವಾರಿ ಮಾಡಿಯಾರು? ಇಷ್ಟು ದಿನಗಳೂ ಅಹರ್ನಿಶಿ ಅವರು ದೂರವಾಣಿಯಲ್ಲಿ ಮಾತಾಡುತ್ತಲೇ ಇದ್ದರೇ?! ಇಷ್ಟಾಗಿಯೂ "ಹಂದಿಜ್ವರ" ಶಂಕಿತರ ತಪಾಸಣಾ ವರದಿ ಹೊರಬೀಳುವಲ್ಲಿ ವಿಳಂಬ ಏಕೆ? ವರದಿ ವಿಳಂಬವಾದ (ದುರ್)ದೆಸೆಯಿಂದಲೇ ಬೆಂಗಳೂರಿನಲ್ಲಿ ಒಂದು ಸಾವು ಸಂಭವಿಸಲಿಲ್ಲವೆ?
ಬೆಂಗಳೂರು ಇಂದು ಅಕ್ಷರಶಃ ತಿಪ್ಪೆಗುಂಡಿಯಾಗಿದೆ. ಎಲ್ಲ ರಸ್ತೆಗಳಲ್ಲೂ ಎಲ್ಲ ಬಡಾವಣೆಗಳಲ್ಲೂ ಕೊಳೆತ ಕಸದ ರಾಶಿ ಎಲ್ಲೆಂದರಲ್ಲಿ ಕಣ್ಣಿಗೆ ರಾಚುತ್ತಿದೆ. ಮಧ್ಯಮ ದರ್ಜೆಯ ಬಹುಪಾಲು ಹೋಟೆಲ್ಗಳು ಜನರನ್ನು ಬೀದಿಯಲ್ಲಿ ನಿಲ್ಲಿಸಿ ತಿಂಡಿ ತಿನ್ನಿಸುತ್ತಿವೆ. ಕಳೆದ ವರ್ಷ ನಾಯಿಗಳ ಉಪಟಳದ ಬಗ್ಗೆ ಬೆಂಗಳೂರು ಮಹಾನಗರಪಾಲಿಕೆಯೊಡನೆ ಏರ್ಪಟ್ಟಿದ್ದ ಸಮಾಲೋಚನೆಯೊಂದರಲ್ಲಿ ಪಾಲಿಕೆಯು ನನಗೆ ಒಂದು ತಿಂಗಳೊಳಗೆ ಮರುಸಭೆ ಕರೆಯುವ ಆಶ್ವಾಸನೆ ನೀಡಿತ್ತು. ವರ್ಷ ಕಳೆದರೂ ಇನ್ನೂ ಸಭೆಯ ಸುಳಿವೇ ಇಲ್ಲ! ಕಸ ವಿಲೇವಾರಿಗೆ ಜಿಪಿಎಸ್ ತಂತ್ರಜ್ಞಾನ ಬಳಸುವ ಆಶ್ವಾಸನೆಯೂ ಅಂದಿನ ಸಮಾಲೋಚನೆಯಲ್ಲಿ ಬಂದರೂ ಇದುವರೆಗೂ ಅದೂ ಕಾರ್ಯಗತವಾಗಿಲ್ಲ. ಪಾಲಿಕೆಯ ಆರೋಗ್ಯಾಧಿಕಾರಿಣಿಯವರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆಂಬುದೇ ಗೊತ್ತಾಗುತ್ತಿಲ್ಲ. ರಾಜ್ಯದ ಇತರೆಡೆಗಳ ಸ್ಥಿತಿಯೂ ಭಿನ್ನವೇನಲ್ಲ.
ಮಂತ್ರಿಗಳು ಬರಿದೆ ಮಾತಾಡಬಾರದು. ಕೆಲಸ ಮಾಡಿ ತೋರಿಸಬೇಕು. ಮಾತಿಗೆ ಮರುಳಾಗುವಷ್ಟು ದಡ್ಡರಲ್ಲ ಜನತೆ ಎಂಬುದನ್ನು ಸದಾಕಾಲ ಅವರು ನೆನಪಿಟ್ಟುಕೊಳ್ಳಬೇಕು. ಜನತೆ ಅಂತಿಮವಾಗಿ ಪರಿಗಣಿಸುವುದು ಸರ್ಕಾರದ ಕಾರ್ಯಚಟುವಟಿಕೆಗಳ ಫಲಿತಾಂಶವನ್ನೇ ಹೊರತು ಸರ್ಕಾರವು ನೀಡುವ ಸಮರ್ಥನೆಗಳನ್ನಲ್ಲ. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಬಗ್ಗೆ ನಾಲಕ್ಕು ಮಾತು ಹೇಳಬೇಕಾಗಿದೆ.
ವರ್ಷಗಳ ಕಾಲ ಬಳ್ಳಾರಿಯಲ್ಲಿದ್ದ ನಾನು ಶ್ರೀರಾಮುಲು ಅವರನ್ನೂ ಮತ್ತು ರೆಡ್ಡಿ ಸೋದರರನ್ನೂ ಹತ್ತಿರದಿಂದ ಗಮನಿಸಿ ಬಲ್ಲೆ. ಶ್ರೀರಾಮುಲು ಓರ್ವ ಮಹತ್ವಾಕಾಂಕ್ಷಿ. ಆದರೆ ತಿಳಿವಳಿಕೆ ಕೊಂಚ ಕಮ್ಮಿ. ಕಾರ್ಯಸಾಧನೆಗಾಗಿ ಏನೂ ಮಾಡಬಲ್ಲ ಧೈರ್ಯ ಮತ್ತು ಉಮೇದು ಆತನದು. ಬಳ್ಳಾರಿಯಲ್ಲಿ ಮತ್ತು ಸುತ್ತಮುತ್ತ ಆತ ಮೊದಲಿನಿಂದಲೂ ಜನಪ್ರಿಯ. ಆತನ ಈ ಗುಣಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡವರು ಹಾಗೂ ಬಳಸಿಕೊಳ್ಳುತ್ತಿರುವವರು ಗಣಿರೆಡ್ಡಿ ಸೋದರರು. ಆದ್ದರಿಂದಲೇ ಅವರು ಸದಾಕಾಲ ಶ್ರೀರಾಮುಲುವಿನ ಸಮರ್ಥನೆಯಲ್ಲಿ ತೊಡಗಿರುತ್ತಾರೆ. ಶ್ರೀರಾಮುಲುವಿನ ನೆರವಿಲ್ಲದಿರುತ್ತಿದ್ದರೆ ರೆಡ್ಡಿ ಸೋದರರು ರಾಜಕೀಯ ಕ್ಷೇತ್ರದಲ್ಲಿ ಮಿಂಚಲು ಸರ್ವಥಾ ಸಾಧ್ಯವಾಗುತ್ತಿರಲಿಲ್ಲ. ಇನ್ನಾದರೂ ಈ ಸೋದರರಿಗೆ ಶ್ರೀರಾಮುಲು ಹೆಸರೇ ಶ್ರೀರಕ್ಷೆ.
ಹೀಗಿರುವಾಗ ಯಡಿಯೂರಪ್ಪನವರು ರೆಡ್ಡಿಗಳ ತೆಕ್ಕೆಯಿಂದ ಶ್ರೀರಾಮುಲುವನ್ನು ಬಿಡಿಸಬೇಕು. ಆದರೆ ಅದು ಸಾಧ್ಯವಾಗದಂತೆ ರೆಡ್ಡಿಗಳು ಶ್ರೀರಾಮುಲುವನ್ನು ತಮ್ಮ ಗಣಿ (ಅ)ವ್ಯವಹಾರದ ಪಾಲುದಾರನನ್ನಾಗಿ ಮಾಡಿಕೊಂಡುಬಿಟ್ಟಿದ್ದಾರೆ! ಜೊತೆಗೆ, ನಾಡಿನ ಖನಿಜಸಂಪತ್ತನ್ನು ಲೂಟಿಮಾಡಿ ಗಳಿಸಿದ ಹಣದಲ್ಲಿ ಒಂದಂಶವನ್ನು ಯಡಿಯೂರಪ್ಪನವರ ಸರ್ಕಾರದ ಭದ್ರತೆಗಾಗಿ ಖರ್ಚುಮಾಡಿ ಯಡಿಯೂರಪ್ಪನವರನ್ನೂ ದಾಕ್ಷಿಣ್ಯದಲ್ಲಿ ಸಿಕ್ಕಿಸಿದ್ದಾರೆ.
ಆದಾಗ್ಗ್ಯೂ, ಯಡಿಯೂರಪ್ಪ ಓರ್ವ ಸಮರ್ಥ ರಾಜಕಾರಣಿ ಮತ್ತು ಮುತ್ಸದ್ಧಿ ಆಗಿದ್ದಲ್ಲಿ ಯಾವ ದಾಕ್ಷಿಣ್ಯವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ರೆಡ್ಡಿ ಸೋದರರನ್ನೂ ಮತ್ತು ಶ್ರೀರಾಮುಲುವನ್ನೂ ಎಲ್ಲಿಡಬೇಕೋ ಅಲ್ಲಿಡಬೇಕು. ಆಗ ಮಾತ್ರ ರಾಜ್ಯದ ಏಳಿಗೆ ಸಾಧ್ಯ. ಇಂಥ ಧೈರ್ಯದ ನಡೆಯನ್ನು ನಾವು ಯಡಿಯೂರಪ್ಪನವರಿಂದ ನಿರೀಕ್ಷಿಸಬಹುದೇ? ಇದು ಈಗ ಮಿಲಿಯನ್ ಡಾಲರ್ ಪ್ರಶ್ನೆ!
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications