ಗೋಹತ್ಯೆ, ಬಹುಪತ್ನಿತ್ವ ನಿಷೇಧಿಸಿ:ರಾಮಾ ಜೋಯಿಸ್

ಈ ದೇಶದ ಅತಿ ಹೆಚ್ಚು ಸಂಖ್ಯೆಯ ಜನರು ಗೋಮಾತೆಯನ್ನು ಅತಿ ಪವಿತ್ರ ಎಂದು ಭಾವಿಸಿದ್ದು ಆಕೆಯನ್ನು ತಾಯಿಯ ಮಟ್ಟಕ್ಕೆ ಏರಿಸಿ ಪೂಜಿಸುತ್ತಿದ್ದಾರೆ. ಯುವಕರು ಮದ್ಯಪಾನದ ಚಟಕ್ಕೆ ಬೀಳುವುದನ್ನು ತಡೆಯಬೇಕು ಎಂಬ ಬೇಡಿಕೆಯೂ ಸಹ ಮಹಾತ್ಮ ಗಾಂಧಿಯವರ ನೇತೃತ್ವದ ಸ್ವಾತಂತ್ರ್ಯ ಚಳವಳಿಯ ಕಾಲದಿಂದಲೂ ಇದೆ. ಈ ದುಶ್ಚಟದ ಮೂಲೋತ್ಪಾಟನೆಯಾಗದ ಹೊರತು ಹಿಂದುಳಿದ ವರ್ಗಗಳ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನರ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗದು.
ಹಾಗಾಗಿ ಮದ್ಯಪಾನದ ಅಂಗಡಿಗಳ ಬಹಿಷ್ಕಾರ ಸ್ವಾತಂತ್ರ್ಯ ಚಳವಳಿಯ ಭಾಗವೂ ಆಗಿತ್ತು. ಈ ದೃಷ್ಟಿಯಿಂದ ಸಂವಿಧಾನದಲ್ಲಿ 48ನೇ ವಿಧಿಯನ್ನು ಪರಿಚಯಿಸಲಾಯಿತು. ಇದು ಗೋವು ಹಾಗೂ ಅದರ ಸಂತತಿಯ ಹತ್ಯೆಯನ್ನು ನಿಷೇಸಲು ಸೂಕ್ತ ಕಾನೂನು ರೂಪಿಸುವ ಅಧಿಕಾರವನ್ನು ಸರಕಾರಕ್ಕೆ ನೀಡುತ್ತದೆ. ಇದೇ ರೀತಿ, ಸಂವಿಧಾನದ 47 ನೇ ವಿಧಿ, ಔಷಧೀಯ ಉದ್ದೇಶದ ಹೊರತಾಗಿ ಮತ್ತು ಬರಿಸುವ ಪೇಯಗಳ ಉತ್ಪಾದನೆ ಹಾಗೂ ಮಾರಾಟವನ್ನು ನಿಷೇಧಿಸುವ ನಿರ್ದೇಶನವನ್ನು ಹೊರಡಿಸುವ ಅಧಿಕಾರವನ್ನು ಸರಕಾರಕ್ಕೆ ನೀಡುತ್ತದೆ.
ಇದೇ ರೀತಿ ಸಂವಿಧಾನ ನಿರ್ಮಾಪಕರು 14, 15 ಮತ್ತು 16 ನೇ ವಿಧಿಗಳ ಅನ್ವಯ, ಸಮಾನತೆಯ ಹಕ್ಕಿನ ಜತೆಗೆ ಜಾತಿ, ಧರ್ಮ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ತೋರುವುದರ ವಿರುದ್ಧ ನಿಷೇಧದ ಅಧಿಕಾರವನ್ನು ಸಹ ಒದಗಿಸಿದರು. ಈ ಸಮಾನತೆಯ ಹಕ್ಕು ಮತ್ತು ತಾರತಮ್ಯ ನಿಷೇಧ ಕೇವಲ ಲಿಂಗ ಮತ್ತು ಧರ್ಮದ ಆಧಾರದ ಮೇಲೆ ಮಾತ್ರ ಇದ್ದ ಕಾರಣ 44 ನೇ ವಿಧಿಯನ್ನು ಪರಿಚಯಿಸಲಾಯಿತು. ಇದು, ಎಲ್ಲ ನಾಗರಿಕರನ್ನು ಸಮಾನವಾಗಿ ಪರಿಗಣಿಸುವ ಮತ್ತು ವಿಶೇಷವಾಗಿ ವಿವಾಹ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದಂತೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲು ಸರಕಾರಕ್ಕೆ ನಿರ್ದೇಶನ ನೀಡಿತು.
ದುರದೃಷ್ಟವಶಾತ್ ಸಂವಿಧಾನದ 4ನೇ ಭಾಗದಲ್ಲಿ ಅಳವಡಿಕೆಯಾದ ಈ ಮೂರು ಕಲಮುಗಳು , ಈ ಪೈಕಿ 6ನೇ ಕಲಮುವಿನಲ್ಲಿ ನೀಡಲಾದ 37ನೇ ಕಲಮಿನ ಅನ್ವಯ ಇವು ದೇಶದ ಆಡಳಿತದಲ್ಲಿ ಮೂಲಭೂತವಾಗಿದ್ದರೂ ನ್ಯಾಯಾಲಯದಲ್ಲಿ ಜಾರಿಯಾಗುವಂತೆಯೇ ಇಲ್ಲ. ಇದರ ಪರಿಣಾಮವಾಗಿ ಕೇಂದ್ರ ಅಥವಾ ರಾಜ್ಯ ಸರಕಾರಗಳಲ್ಲಿ ಜನಪ್ರತಿನಿಧಿಗಳಾಗಿ ಆಯ್ಕೆಯಾಗುವ ವ್ಯಕ್ತಿಗಳು, ತಾವು ಸಂವಿಧಾನದ ನಿಯಮಗಳಿಗೆ ಬದ್ಧರಾಗಿರುವುದಾಗಿ ಪ್ರಮಾಣ ವಚನ ಸ್ವೀಕರಿಸಿದರೂ ಈ ವಿಧಿಗಳು ಜಾರಿಯಾಗಿಲ್ಲ.
ಹೀಗಾಗಿ ರಾಜ್ಯಸಭಾ ಸದಸ್ಯನಾಗಿರುವ ನಾನು ಈ ನಿರ್ದೇಶನಗಳನ್ನು ಸಂವಿಧಾನದ 15ಎ, 17ಎ ಮತ್ತು 17ಬಿ ವಿಧಿಗಳ ಅನ್ವಯ ಮೂಲಭೂತ ಹಕ್ಕುಗಳಾಗಿಸುವ ನಿಟ್ಟಿನಲ್ಲಿ ಡಿಸೆಂಬರ್ 12ರಂದು ಸಂವಿಧಾನ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದೇನೆ. ಉದ್ದೇಶಿತ ಸಂವಿಧಾನ ತಿದ್ದುಪಡಿ ವಿಧೇಯಕಕ್ಕೆ ಎಲ್ಲ ರಾಜಕೀಯ ಪಕ್ಷಗಳೂ ಬೆಂಬಲ ನೀಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications