ದುಡಿಯುವ ಕನ್ನಡ ಕೈಗಳಿಗೆ ಕೆಲ್ಸ ಕೊಡಿ

---------- Forwarded message ----------
From: Amarnath Shivashankar
Date: 2010/6/4
Subject: ಕರ್ನಾಟಕದಲ್ಲಿ ಬಂಡವಾಳ + ಉದ್ದಿಮೆ ===> ಕನ್ನಡಿಗರಿಗೆ ಕೆಲಸ
To: [email protected]
ಗೌರವಾನ್ವಿತರೇ,
ನಮಗೆಲ್ಲರಿಗೂ ತಿಳಿದಿರುವ ಹಾಗೆ ಜೂನ್ 3 ಮತ್ತು 4ರಂದು ಬೆಂಗಳೂರಿನಲ್ಲಿ "ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ" ನಡೀತು. ನಾನಾ ಕಂಪನಿಗಳು ಒಟ್ಟಾರೆಯಾಗಿ ಸುಮಾರು 5 ಲಕ್ಷ ಕೋಟಿ ರುಪಾಯಿಗಳಷ್ಟು ಬಂಡವಾಳ ಹಾಕ್ತಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಇದು ಅತ್ಯುತ್ತಮ ಬೆಳವಣಿಗೆ. ಇದಕ್ಕಾಗಿ ತುಂಬು ಹೃದಯದ ಅಭಿನಂದನೆಗಳು.
ಪ್ರತಿಯೊಬ್ಬ ಹೂಡಿಕೆದಾರನೂ ಸಾವಿರಾರು ಕೋಟಿಯಷ್ಟು ಬಂಡವಾಳ ಕರ್ನಾಟಕದಲ್ಲಿ ಹಾಕ್ತಿದ್ದಾರೆ ಅಂದರೆ ಅದರ ಅರ್ಥ, ನಮ್ಮ ಊರು, ನಮ್ಮ ಜನ, ನಮ್ಮ ನಿಸರ್ಗ, ನಮ್ಮ ವಾತಾವರಣ ಅತ್ಯಂತ ಶ್ರೇಷ್ಠ ಅಂತ ತಾನೆ?
ಇದು ಬೆಂಗಳೂರಿನ ಜೊತೆ ನಮ್ಮ ಇತರೆ ಜಿಲ್ಲೆಗಳನ್ನು, ಸಮಗ್ರ ಕರ್ನಾಟಕವನ್ನೂ ಇನ್ನಷ್ಟು ಎತ್ತರಕ್ಕೆ ಬೆಳೆಸುತ್ತೆ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಈ ಉದ್ದಿಮೆಗಳು ಕರ್ನಾಟಕದಲ್ಲಿ ಸ್ಥಾಪನೆ ಆಗುತ್ತಿರುವುದರಿಂದ ಕನ್ನಡಿಗರಿಗೆ, ಈ ಮಣ್ಣಿನ ಮಕ್ಕಳಿಗೆ ಅನುಕೂಲವಾಗಬೇಕು ಅನ್ನೋದು ಸಹಜ ಧರ್ಮವಲ್ವಾ?
ಹಾಗಾಗಿ ನಮ್ಮ ಸರ್ಕಾರಕ್ಕೆ ಇರುವ ದೊಡ್ಡ ಜವಾಬ್ದಾರಿ ಅಂದ್ರೆ "ಸರೋಜಿನಿ ಮಹಿಷಿ" ವರದೀನಾ ಅನುಷ್ಠಾನ ಮಾಡೋದು. ಕನ್ನಡಿಗರಿಗೆ ಕೆಲಸ, ಕರ್ನಾಟಕ ಸರ್ಕಾರಕ್ಕೆ ಆದಾಯ ಬರುವುದಿಂದ ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರ ಏಳಿಗೆ ಆಗುತ್ತದೆ.
ಇದು ಕನ್ನಡಪರ ಸರ್ಕಾರವಾಗಿರುವುದರಿಂದ ಕನ್ನಡಿಗರಿಗೆ ಆದ್ಯತೆ ಸಿಗುತ್ತದೆ ಎನ್ನುವ ಭರವಸೆ ನಮ್ಮಲ್ಲಿದೆ. ಇಲ್ಲದಿದ್ದರೆ ಸದ್ಯದ ಐ.ಟಿ ಕ್ಷೇತ್ರದಲ್ಲಿ ಆಗಿರೋ ತರಹ ವಲಸಿಗರ ಸಂಖ್ಯೆ ವಿಪರೀತ ಆಗುತ್ತದೆ. ಒಂದೊಳ್ಳೆ ವಲಸೆ ಕಾಯಿದೆನ ರೂಪಿಸೋದು ಹಾಗು ಸರೋಜಿನಿ ಮಹಿಷಿ ವರದಿಯ ಅನುಷ್ಠಾನ ತಕ್ಷಣ ಆಗಬೇಕು ಅನ್ನುವುದು ಪ್ರತಿಯೊಬ್ಬ ಕನ್ನಡಿಗನ ಮನದಾಳದ ಮಾತು.
ಇಂತಿ,
ಅಮರ, ಬೆಂಗಳೂರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications