ಇದು ಘನಘೋರ 'ನ್ಯಾಯ ದುರಂತ'!

ಹದಿನಾರು ಸಾವಿರ ಅಮಾಯಕರ ಸಾವಿಗೆ, ಆರು ಲಕ್ಷ ಜನರ ಶಾಶ್ವತ ಅಂಗವೈಕಲ್ಯಕ್ಕೆ ಮತ್ತು ಲಕ್ಷಾಂತರ ಕುಟುಂಬಗಳ ಭವಿಷ್ಯನಾಶಕ್ಕೆ ಕಾರಣರಾದವರಿಗೆ ಕೇವಲ ಎರಡು ವರ್ಷಗಳ ಶಿಕ್ಷೆ! ಈ ದೇಶದ ನ್ಯಾಯವ್ಯವಸ್ಥೆಯ ಅಣಕವಿದು. ತನಿಖಾ ವ್ಯವಸ್ಥೆಯ ಸಮಾಧಿ ಇದು. ಈ ಎರಡೂ ವ್ಯವಸ್ಥೆಗಳಮೇಲೆ ಜನರಿಗೆ ಈಗ ಎಳ್ಳಷ್ಟೂ ನಂಬಿಕೆ ಉಳಿದಿಲ್ಲ.
ಪ್ರಜೆಗಳ ಬಾಳುವ ಭರವಸೆಯನ್ನೇ ಕಸಿದ ತೀರ್ಪು ಇದು. ಇಂಥ ತನಿಖೆ ಮತ್ತು ಇಂಥ ತೀರ್ಪು ದೇಶವನ್ನು ಗಂಡಾಂತರದತ್ತ ಕೊಂಡೊಯ್ಯುವ ಸಾಧನ.
ಭಾರತಾಂಬೆಯ ಗರ್ಭಗುಡಿಗೇ ಬಾಂಬ್ ಹಾಕಿದವನನ್ನು ಗಲ್ಲಿಗೇರಿಸಲು ಮೀನಮೇಷ ಎಣಿಸುತ್ತಿರುವುದು, ನೂರಾರು ಜನರ ಹತ್ಯೆಗೈದವನನ್ನು ಜತನದಿಂದ ಸಾಕುತ್ತಿರುವುದು ಮತ್ತು ಇದೀಗ, ಸಾವಿರಾರು ಜನರ ಪ್ರಾಣಹರಣ, ಲಕ್ಷಾಂತರ ಜನರ ಅಂಗಾಂಗಹರಣ ಹಾಗೂ ಲಕ್ಷೆಪಲಕ್ಷ ಕುಟುಂಬಗಳ ಭವಿಷ್ಯನಾಶ ಮಾಡಿದವರನ್ನು ನೆಪಮಾತ್ರದ ಶಿಕ್ಷೆ ನೀಡಿ ಕೈಬಿಡುತ್ತಿರುವುದು ಇದು ಈ ದೇಶದ ಆಡಳಿತ ವ್ಯವಸ್ಥೆಯು ತನ್ನ ಪ್ರಜೆಗಳಿಗೆ ತೋರುತ್ತಿರುವ ಅಭದ್ರತೆಯ ಮಾರ್ಗ. ಮುಂದಿನ ಗಂಡಾಂತರಗಳಿಗೆ ಇದು ರಹದಾರಿ.
ಈ ಅನ್ಯಾಯಯುತ ಬೆಳವಣಿಗೆಯಿಂದಾಗಿ ಮುಂದೆ ಸಂಭವಿಸಬಹುದಾದ ಊಹಿಸಲೂ ಅಸಾಧ್ಯವಾದ ಗಂಡಾಂತರಗಳಿಗೆ ತಡೆಯೊಡ್ಡಬೇಕೆಂದರೆ, ಮತ್ತು, ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗಷ್ಟೇ ಅಲ್ಲ, ಈ ದೇಶದ ನೂರಹದಿನಾರು ಕೋಟಿ ಪ್ರಜೆಗಳಿಗೂ ನ್ಯಾಯ ಸಿಗಬೇಕೆಂದರೆ ಅನಿಲ ದುರಂತದ ಅಪರಾಧಿಗಳು ತಾವು ಸಾಯುವವರೆಗೂ ಜೈಲಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ಅನುಭವಿಸುತ್ತ ಕೊಳೆಯಬೇಕು. ಸರ್ಕಾರ, ತನಿಖಾ ಇಲಾಖೆಗಳು ಮತ್ತು ನ್ಯಾಯಾಲಯ ಈ ದಿಸೆಯಲ್ಲಿ ತಮ್ಮ ಪರಮಕರ್ತವ್ಯವನ್ನು ಲೋಪರಹಿತವಾಗಿ ಮಾಡಿ ತೋರಿಸಬೇಕು. ಇಲ್ಲವಾದಲ್ಲಿ, ಈ ಮೂರೂ ವಿಭಾಗಗಳೂ ಅನಿಲ ದುರಂತದ ಅಪರಾಧಿಗಳಷ್ಟೇ ಘೋರ ಅಪರಾಧಿಗಳೆನಿಸಿಕೊಳ್ಳುತ್ತವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications