ಕನ್ನಡ ನಾಮಫಲಕ ಎಲ್ಲಿದೆ ಹುಡುಕಿಕೊಡಿ

ಮೊದಲ ಆದ್ಯತೆ ಕನ್ನಡಕ್ಕೆ ನೀಡಬೇಕು ತದನಂತರ ಬೇರೆ ಭಾಷೆಗಳಿಗೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ಕಲಂ 26ಎ 'ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಕಾರ್ಯ ಸಂಸ್ಥೆಗಳ (ತಿದ್ದುಪಡಿ) ನಿಯಮ 2008'ರ ಅಡಿಯಲ್ಲಿ ರೂ. 10,000/- ಗಳ ದಂಡ ವಿಧಿಸಲಾಗುವುದು. ಈ ಥರದ ಒಂದು ಕಾನೂನನ್ನು ರಾಜ್ಯ ಸರಕಾರ 2008ರಲ್ಲೇ ಹೊರಡಿಸಿದ್ದರೂ ಅದರ ಅನುಷ್ಠಾನ ಮಾತ್ರ ಇನ್ನೂ ಮರೀಚಿಕೆಯಾಗಿದೆ.
ಅಂಗಡಿ ಮಾಲೀಕರ ಜಾಣ ಕುರುಡುತನ, ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮವಾಗಿ ಇಂದು ಕನ್ನಡವನ್ನೇ ಬಿಂಬಿಸಬೇಕಾದ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ಸ್ಥಳಗಳಲ್ಲಿ ಈ ಕಾನೂನನ್ನು ಉಲ್ಲಂಘಿಸಲಾಗಿದೆ. ನಾಮಫಲಕಗಳಲ್ಲಿ ಕನ್ನಡವಿದ್ದರೂ ಅದನ್ನು ಯಾವುದೋ ಮೂಲೆಯಲ್ಲಿ, ಸಣ್ಣ ಗಾತ್ರದ ಅಕ್ಷರಗಳಲ್ಲಿ ಕಾಟಾಚಾರಕ್ಕೆ ಸೇರಿಸಲಾಗಿರುತ್ತದೆ.
ಕನ್ನಡ ಅನುಷ್ಠಾನದ ಹೊಣೆ ಹೊರಬೇಕಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೂಡ ತನ್ನ ವ್ಯಾಪ್ತಿಗೆ ಬರುವ ಈ ಕಾನೂನನ್ನು ಜಾರಿಗೆ ತರುವುದರಲ್ಲಿ ವಿಫಲವಾಗಿದೆ. ಹೀಗಾಗಿ ಸರಕಾರ ಮಾಡಿದ ಕಾನೂನನ್ನು ಇಂದು ಕೇಳುವವರೇ ಇಲ್ಲವಾಗಿದೆ.
ಬದಲಾಗಿ, ಇದರ ಬಗ್ಗೆ ಧ್ವನಿಯೆತ್ತುವ ಕನ್ನಡ ಪರ ಹೋರಾಟಗಾರರ ಮೇಲೆ ಕ್ರಮ ಕೈಗೊಳ್ಳುವುದರ ಮೂಲಕ ಸರಕಾರ ತಾನೇ ಮಾಡಿದ ಕಾನೂನಿಗೆ ತೊಡಕಾಗಿ ಪರಿಣಮಿಸಿದೆ. ಒಂದು ರಾಜ್ಯದಲ್ಲಿ ಸಂಪರ್ಕ ಭಾಷೆಯಾಗಿ ಅಲ್ಲಿನ ಪ್ರಾದೇಶಿಕ ಭಾಷೆ ಬೆಳೆಯುವುದು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ನಾಮಫಲಕಗಳಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಒಂದು ಜನಜಾಗೃತಿಯ ಅಗತ್ಯವಿದೆ.
ಓದಲು ಮರೆಯದಿರಿ : ವೆಂಕಟಪ್ಪ ಅಲ್ಲ ಕನ್ನಡ ಸಂಕಟಪ್ಪ ಗ್ಯಾಲರಿ
ನೋಡಲು ಮರೆಯದಿರಿ : ತಮಾಷೆ ಗೋಡೆ ಬರಹಗಳು
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications