ಸೀರೆ ಹಂಚುತ್ತಾ ಹೋಗುವುದು ಅಭಿವೃದ್ಧಿಯೇ ?

ಭಾಗ್ಯಲಕ್ಷ್ಮೀ ಯೋಜನೆಯ ಬಾಂಡ್ ಪಡೆಯಲು ರಾಜ್ಯದಲ್ಲಿ 10 ಲಕ್ಷ ಮಂದಿ ಹೆಸರು ನೋಂದಾಯಿಸಿದ್ದಾರೆ. ಇವರಲ್ಲಿ ಇನ್ನೂ 2.5 ಲಕ್ಷ ಮಂದಿಗೆ ಬಾಂಡ್ ದೊರಕಿಲ್ಲ. ಇಂಥ ಸಂದರ್ಭದಲ್ಲಿ ಬಾಂಡ್ ನೀಡುವ ಮುನ್ನ ಸೀರೆ ನೀಡಬೇಕಿತ್ತೇ? ಇದು ಅಭಿವೃದ್ಧಿಯೇ? ಸುಮಾರು 10 ಲಕ್ಷ ತಾಯಂದಿರಿಗೆ 26 ಕೋಟಿ ರೂಪಾಯಿ ವೆಚ್ಚ ಮಾಡಿ ಸೀರೆ ನೀಡಲಾಗಿದೆ.
ಸರಿ, ಯೋಜನೆಯಡಿ ವಿತರಿಸಲು 250-300 ರೂಪಾಯಿ ಮೌಲ್ಯದ ಸೀರೆಗಳನ್ನು ಸೂರತ್ನಿಂದ ತರಿಸಲಾಗಿದೆ. ಇಷ್ಟು ಸೀರೆಗಳನ್ನು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮದಿಂದಕೊಂಡಿದ್ದರೆ ನಮ್ಮ ನೇಕಾರರ ಬದುಕು ಒಂದಷ್ಟು ಹಸನಾಗುತ್ತಿತ್ತು. ಸಾಗಾಣಿಕೆ ವೆಚ್ಚ , ಮಾರಾಟ ತೆರಿಗೆ ರಾಜ್ಯಕ್ಕೆ ಸಲ್ಲುತಿತು. ಬೇರೆ ಯಾವುದೋ ರಾಜ್ಯಕ್ಕೆ, ಯಾರೋ ಉದ್ಯಮಿಗೆ ಲಾಭ ಆಯಿತಷ್ಟೆ. ಇದು ಅಭಿವೃದ್ಧಿಯೇ?
ಸಂಕಷ್ಟದಲ್ಲಿ ಯಾವ ರಾಜ್ಯದ ನೇಕಾರರಿಗೆ ನೆರವಿನ ಹಸ್ತ ಚಾಚಿದ್ದ ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ(ಕೆಹೆಚ್ಡಿಸಿ) ವಿವಿಧೆಡೆ ಎರಡು ಸಾವಿರ ಮನೆಗಳನ್ನು ಹುಡ್ಕೊ ನೆರವಿನಿಂದ ಕಟ್ಟಿಕೊಟ್ಟಿತ್ತು. ಇಂದಿಗೂ ಈ ಮನೆಗಳು ನೇಕಾರರ ಹೆಸರಿಗೆ ಖಾತೆ ಆಗಿಲ್ಲ. ಈ ಯೋಜನೆಯಡಿ ಸಾಲಗಾರರಾದ ನೇಕಾರರ 4.5 ಕೋಟಿ ರೂಪಾಯಿ ಮನ್ನಾ ಮಾಡುವ ಭರವಸೆ ಇನ್ನೂ ಈಡೇರಿಲ್ಲ.
ಸೀರೆ ಹಂಚಲು 26 ಕೋಟಿ ವ್ಯಯ ಮಾಡುವ ಬದಲು ಈ ಸಾಲ ಮನ್ನಾ ಮಾಡಿದ್ದರೆ ನೇಕಾರರ ಬದುಕಿಗೊಂದು ಸ್ವಂತ ಸೂರು ಸಿಗುತ್ತಿತು. ಇದರ ಬದಲು, ಒಂದು ದಿನ ಆಯಾ ಜಿಲ್ಲೆಯ ಸಾರಿಗೆ ವ್ಯವಸ್ಥೆ ಹದಗೆಡಿಸಿ, ಒಂದು ದಿನದ ದುಡಿಮೆಯನ್ನು ಕಿತ್ತುಕೊಂಡು 300 ರೂಪಾಯಿ ಮೌಲ್ಯದ ಸೀರೆ ನೀಡುವುದು ಅಭಿವೃದ್ಧಿ? ತವರುಮನೆ ಲೆಕ್ಕದಲ್ಲಿ ಈ ಸೀರೆಗಳನ್ನು ವಿತರಣೆ ಮಾಡಲಾಗಿದೆಯಂತೆ. ಮುಂದೆ ಭಾಗ್ಯಲಕ್ಷ್ಮೀ ಯೋಜನೆಯ ಅಪ್ಪಂದಿರಿಗೆ ಪಂಚೆ ವಿತರಿಸುವ ಯೋಜನೆ ಹಮ್ಮಿಕೊಳ್ಳಬಹುದು. ಸೀರೆ ಹಂಚುವುದು ಅಭಿವೃದ್ಧಿಯಾದರೆ, ಪಂಚೆ ಹಂಚುವುದೂ ಅದೇ ತಾನೇ?
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications