ವರ್ಷಾರಂಭ ಜ.1 ರಂದು ಸಾರ್ವತ್ರಿಕ ರಜೆ ನೀಡಿ

ಇದಕ್ಕೆ ಪೂರಕವಾಗಿ ಕಳೆದ ವರ್ಷ ಕನಕದಾಸ ಜಯಂತಿಗೆ ಮತ್ತು ಇತ್ತೀಚಿಗೆ ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ ಅಸುಇ 07 ಎಚ್ಎಡಿಎಲ್ 2009 (ಭಾಗ) ಕರ್ನಾಟಕ ಸರ್ಕಾರ ದಿನಾಂಕ 13.10.2010ರ ಆದೇಶದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಗೆ ಸಾರ್ವತ್ರಿಕ ರಜಾದಿನವೆಂದು ಘೋಷಿಸಲಾಗಿದೆ.
ಕೆಲವು ವರ್ಷಗಳ ಮೊದಲು ನೂತನ ವರ್ಷಾರಂಭದ ದಿನ ಸಹ ಸಾರ್ವತ್ರಿಕ ರಜಾದಿನವೆಂದು ಅಧಿಸೂಚನೆಯಲ್ಲೇ ಸೇರ್ಪಡೆಗೊಂಡಿತ್ತು. ಸುಮಾರು ಎರಡು ದಶಕಗಳ ಹಿಂದೆ ರಾಜ್ಯ ಸರ್ಕಾರ ನವೆಂಬರ್ 1ರಂದು ರಾಜ್ಯೋತ್ಸವ ದಿನವನ್ನು ಸಾರ್ವತ್ರಿಕ ರಜಾದಿನವೆಂದು ಘೋಷಿಸಿ ಇದರ ಬದಲಾಗಿ ನೂತನ ವರ್ಷಾರಂಭದ ಸಾರ್ವತ್ರಿಕ ರಜೆಯನ್ನು ರದ್ದುಪಡಿಸಿದೆ. ಆದರೆ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯ ಸೇರಿದಂತೆ ಬಹುತೇಕ ಜನರು ವರ್ಷಾರಂಭದ ದಿನವನ್ನು ವಿಶೇಷ ಹಬ್ಬವನ್ನಾಗಿ ಆಚರಿಸುತ್ತಾರೆ.
ಪ್ರತಿ ಡಿಸೆಂಬರ್ 31ನೇ ದಿನವನ್ನು ಹಳೆ ವರ್ಷದ ಕೊನೆ ದಿನ ಹಾಗೂ ನೂತನ ವರ್ಷಾರಂಭದ ಜನವರಿ 1ನೇ ದಿನವನ್ನು ಪ್ರಾರ್ಥನಾ ಪೂರ್ವಕವಾಗಿ ಹೊಸ ವರ್ಷವನ್ನು ಆಹ್ವಾನಿಸಲಾಗುತ್ತದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಜನತೆಗೆ ಚಾಂದ್ರಮಾನ ಯುಗಾದಿಯಿಂದ ಹಾಗೂ ಉತ್ತರ ಭಾರತೀಯರಿಗೆ ದೀಪಾವಳಿಯಿಂದ ಹೊಸ ವರ್ಷ ಪ್ರಾರಂಭವಾಗುತ್ತದೆ. ಈ ಎರಡೂ ಹಬ್ಬಗಳು ಹೊಸ ವರ್ಷದ ಫಲವಾಗಿ ಸಾರ್ವತ್ರಿಕ ರಜೆಯನ್ನು ಸರ್ಕಾರ ನೀಡಿರುತ್ತದೆ.
ಅದರಂತೆ ಸಮಸ್ತ ಭಾರತೀಯ ಕ್ರೈಸ್ತ ಬಾಂಧವರು ಡಿಸೆಂಬರ್ 25ರಂದು ಕ್ರಿಸ್ ಮಸ್ ಹಬ್ಬವನ್ನು ಆಚರಿಸುತ್ತಾರೆ. ಅಲ್ಲಿಂದ ಪ್ರಾರಂಭವಾದ ಈ ಹಬ್ಬವು ಜನವರಿ ತಿಂಗಳ ಮೊದಲನೆ ದಿನದಂದು ಕ್ರೈಸ್ತ ವರ್ಷಾರಂಭವಾಗಿರುತ್ತದೆ. ಆದ್ದರಿಂದ ಈ ಹಿಂದೆ ಸರ್ಕಾರ ನೀಡಿದ್ದ ಜನವರಿ 1ನೇ ತಾರೀಖನ್ನು ಕ್ರೈಸ್ತರ ವರ್ಷಾರಂಭದ ದಿನವೆಂದು ಪರಿಗಣಿಸಿ ಸಾರ್ವತ್ರಿಕ ರಜೆ ನೀಡಿರುತ್ತದೆ.
ಆದರೆ, ಇತ್ತೀಚಿನ ವರ್ಷಗಳಲ್ಲಿ ಸರ್ಕಾರ ಸಾರ್ವತ್ರಿಕ ರಜೆಯನ್ನು ರದ್ದು ಪಡಿಸಿ ಪರಿಮಿತ ರಜೆಯನ್ನಾಗಿ ಘೋಷಿಸಿರುತ್ತದೆ. ಇದೇ ರೀತಿ ಉಳಿದ (ವಾಲ್ಮೀಕಿ ಜಯಂತಿ, ಕನಕ ಜಯಂತಿ, ಮಹಾಶಿವರಾತ್ರಿ, ಮೊಹರಂ ಕಡೆ ದಿನ, ಅಂಬೇಡ್ಕರ್ ಜಯಂತಿ, ಮಹಾಲಯ ಅಮಾವಾಸ್ಯೆ ಇತ್ಯಾದಿ ಸುಮಾರು ಹತ್ತು) ಸಾರ್ವತ್ರಿಕ ರಜಾ ದಿನಗಳನ್ನೂ ರದ್ದುಪಡಿಸಿ, ಪರಿಮಿತ ರಜೆಯನ್ನಾಗಿ ಘೋಷಿಸಬೇಕಾಗಿ ನಮ್ಮ ಕಳಕಳಿಯ ವಿನಂತಿ.
ಇದರ ಪರಿಹಾರಾತ್ಮಕವಾಗಿ ಪ್ರತಿ ನೌಕರನ ಸಾಂದರ್ಭಿಕ ರಜೆ (ಸಿ.ಎಲ್.)ಗಳನ್ನು ಪ್ರಸಕ್ತ 15ರಿಂದ ಇನ್ನೂ ಹೆಚ್ಚಳ ಮಾಡಲು ಪರಿಶೀಲಿಸಬಹುದು. ಈ ರೀತಿ ಮಾಡುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಕೆಲಸವೂ ಸಾಗುತ್ತದೆ. ಮತ್ತು ಸಂಬಂಧಿತ ವ್ಯಕ್ತಿಗಳು ಹಬ್ಬವನ್ನೂ ಆಚರಿಸಲು ಸಾಧ್ಯವಾಗುವುದು. ಅದು ಸಾಧ್ಯವಿಲ್ಲದೇ ಇದ್ದಲ್ಲಿ ದಯವಿಟ್ಟು ಕ್ರೈಸ್ತ ಮತಬಾಂಧವರು ಘನ ಸರ್ಕಾರದಲ್ಲಿ ಭಿನ್ನವಿಸಿಕೊಳ್ಳುವುದೇನೆಂದರೆ ಜನವರಿ 1ನೇ ತಾರೀಖಿನಂದು ಹೊಸ ವರ್ಷವನ್ನು ಸಂತೋಷದಿಂದ ಆಚರಿಸಲು ಸಾರ್ವತ್ರಿಕ ರಜೆಯನ್ನಾಗಿ ಘೋಷಿಸಲು ವಿನಂತಿಸಿಕೊಳ್ಳುತ್ತೇವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications