ಡಾ.ಬಿನಾಯಕ್ ಗೆ ನ್ಯಾಯ ಕೋರಿ ಮುಕ್ತ ಪತ್ರ

ರಾಷ್ಟ್ರಪತಿ ಭವನ
ನವದೆಹಲಿ
ವಿಷಯ : ಬಿನಾಯಕ್ ಸೇನ್ ಗೆ ನ್ಯಾಯ ಒದಗಿಸಲು ಭಾರತದ ನ್ಯಾಯಾಂಗ ವಿಫಲವಾಗಿದೆ.
ಪ್ರಸಿದ್ಧ ಸಾರ್ವಜನಿಕ ವೈದ್ಯರೂ, ಮಾನವ ಹಕ್ಕುಗಳ ಹೋರಾಟಗಾರರೂ ಆದ ಡಾ. ಬಿನಾಯಕ್ ಸೇನ್ ಅವರನ್ನು ದೋಷಿ ಎಂದು ತೀರ್ಮಾನಿಸಿ ಶಿಕ್ಷೆಗೆ ಒಳಪಪಡಿಸಿರುವುದು ನಮಗೆಲ್ಲರಿಗೂ ಆಘಾತಕಾರಿಯಾಗಿದೆ. ರಾಯ್ಪುರದ ವಿಚಾರಣಾ ನ್ಯಾಯಾಲಯವು ಸೆನ್ ಅವರನ್ನು ರಾಜದ್ರೋಹ ಮತ್ತು ಪ್ರಭುತ್ವದ ವಿರುದ್ಧ ಸಮರ ಸಾರುವ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಒಳಪಡಿಸಿರುವುದು ಆತಂಕಕಾರಿ ಸಂಗತಿಯಾಗಿದೆ.
ಭಾರತದ ಪ್ರಬುದ್ಧ ಮಾನವ ಹಕ್ಕುಗಳ ಹೋರಾಟಗಾರನಿಗೆ ಈ ಶಿಕ್ಷೆ ನೀಡಿರುವುದು ನ್ಯಾಯದ ವಿಡಂಬನೆಯೇ ಆಗಿದೆ. ಈ ನಿಟ್ಟಿನಲ್ಲಿ ಭಾರತೀಯ ಸಂವಿಧಾನದಲ್ಲಿ ಅಳವಡಿಸಲಾಗಿರುವ ಕಾನೂನು, ನ್ಯಾಯ ಮತ್ತು ಹಕ್ಕುಗಳ ಮೂಲ ತತ್ವಗಳನ್ನು ಎತ್ತಿಹಿಡಿದು, ಈ ನ್ಯಾಯಾಲಯದ ತೀರ್ಪಿನ ಮೂಲಕ ಭಾರತದ ನ್ಯಾಯಾಂಗಕ್ಕೆ ಉಂಟಾಗಿರುವ ಧಕ್ಕೆಯನ್ನು ಸರಿಪಡಿಸಲು ಭಾರತದ ಉನ್ನತ ನ್ಯಾಯ ವ್ಯವಸ್ಥೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.
ಛತ್ತಿಸ್ ಘಡದ ಮಾವೋವಾದಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಡಾ. ಸೆನ್ ಅವರ ಮೇಲಿನ ಆರೋಪ ನಿರಾಧಾರವಾಗಿದ್ದು, ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲೂ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಸೊರಗಿದೆ. ಸರ್ಕಾರಿ ವಕೀಲರು ತಮ್ಮ ವಾದವನ್ನು ಸಮರ್ಥಿಸಿಕೊಳ್ಳಲು ಕಪೋಲ ಕಲ್ಪಿತ ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ. ಸರ್ಕಾರಿ ವಕೀಲರು ಒದಗಿಸಿರುವ ಸಾಕ್ಷ್ಯಾಧಾರಗಳೂ ವಿರೋಧಾಭಾಸಗಳಿಂದ ಕೂಡಿರುವುದು ಸ್ಪಷ್ಟವಾಗಿದೆ.
ಕರಾಳ ಭಯೋತ್ಪಾದಕ ವಿರೋಧಿ ಕಾಯ್ದೆಗಳಡಿ ಡಾ.ಸೆನ್ ಅವರ ವಿರುದ್ಧ ಮಾಡಲಾಗಿರುವ ಆರೋಪಗಳೆಲ್ಲ ಸೃಷ್ಟಿಸಲ್ಪಟಿದ್ದು, ಆದಿವಾಸಿಗಳ ವಿರುದ್ಧ ಛತ್ತಿಸ್ ಘಡ ಸರ್ಕಾರ ನಡೆಸುತ್ತಿರುವ ಆಕ್ರಮಣಗಳನ್ನು ಕಟುವಾಗಿ ಟೀಕಿಸಿದ ಕಾರಣಕ್ಕಾಗಿ ಸೆನ್ ಅವರನ್ನು ಆರೋಪಗಳಿಗೆ ಗುರಿಮಾಡಲಾಗಿದೆ. ಹೃದೋಗಿಯಾದ ಡಾ. ಸೆನ್ ಈಗಾಗಲೇ ಮೇ 2007 ರಿಂದ ಮೇ 2009ರವರೆಗೆ ಎರಡು ವರ್ಷಗಳ ಜೈಲು ವಾಸ ಅನುಭವಿಸಿದ್ದು ಸರ್ವೋಚ್ಚ ನ್ಯಾಯಾಲಯವು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಪ್ರಜಾತಂತ್ರಕ್ಕೇ ಮಾರಕ: ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ರ್ಟವಾಗಿ ಭಾರತ ಸರ್ಕಾರವು ಟೀಕೆಗಳನ್ನು ಮತ್ತು ಅಹಿಂಸಾತ್ಮಕ ಮಾನವ ಹಕ್ಕುಗಳ ಹೋರಾಟವನ್ನು ಸಹಿಸಿಕೊಳ್ಳದಿರುವುದು ನಿಜಕ್ಕೂ ಭಾರತೀಯ ಜನತೆಗೆ ಅಪಮಾನ ಮಾಡಿದಂತಾಗುತ್ತದೆ. ಈ ಅಸಹಿಷ್ಣುತೆಯ ಪ್ರವೃತ್ತಿ ಖಂಡಿಸಬೇಕಾಗುತ್ತದೆ. ನ್ಯಾಯಾಲಯಗಳಲ್ಲಿ ನೀಡಲಾಗುವ ಈ ರೀತಿಯ ತೀರ್ಪುಗಳು ಭಾರತದ ಪ್ರಜಾತಂತ್ರಕ್ಕೇ ಮಾರಕವಾಗಿರುತ್ತದೆ.
ಸೆನ್ ಅವರನ್ನುತಕಣವೇ ಬಿಡುಗಡೆ ಮಾಡುವುದೇ ಅಲ್ಲದೆ ಅವರ ವಿರುದ್ಧ ಹೂಡಲಾಗಿರುವ ಆರೋಪಗಳನ್ನೂ ಹಿಂದೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಡಾ. ಸೆನ್ ಅವರನ್ನು ಈ ಆರೋಪಕ್ಕೆ ಸಿಲುಕಿಸಿರುವ ಎಲ್ಲರನ್ನೂ ತನಿಖೆಗೆ ಒಳಪಡಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇವೆ. ಹಾಗೆಯೇ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿತರಾಗಿರುವ ಡಾ. ಸೆನ್ ಅವರಿಗೆ ಅವರ ಕುಟುಂಬವನ್ನು ಅನಗತ್ಯ ಮಾನಸಿಕ ಕ್ಷೋಭೆಗೊಳಪಡಿಸಿ ಶೋಷಣೆ ಮಾಡುತ್ತಿರುವುದನ್ನು ಪರಿಗಣಿಸಿ ಸೂಕ್ತ ಪರಿಹಾರ ನೀಡುವಂತೆ ನಾವು ಆಗ್ರಹಿಸುತ್ತೇವೆ.
ಮಾನವ ಹಕ್ಕುಗಳ ಕಾನೂನು ಜಾಲ(Human Rights Legal Network), ನವದೆಹಲಿ. [ಮಾವೋವಾದಿ]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications