ಪಾಲಕರನ್ನು ಸುಲಿಯುತ್ತಿರುವ ಶಿಕ್ಷಣ ಸಂಸ್ಥೆಗಳು

ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಅನ್ನುವುದು ಕೇಂದ್ರ ಸರ್ಕಾರದ ಉದ್ಯೋಗದಲ್ಲಿರುವ, ನಿರಂತರ ವರ್ಗಾವಣೆಗೊಳಪಡುವ ಕೆಲಸದಲ್ಲಿರುವವರ ಮಕ್ಕಳಿಗಾಗಿ ರೂಪಿತಗೊಂಡ ಶಿಕ್ಷಣ ವ್ಯವಸ್ಥೆ, ಆದರೆ ಅದನ್ನು ಹಣ ಮಾಡುವ ಸಾಧನಗಳಾಗಿ ಬದಲಾಯಿಸಿಕೊಂಡು ಪಾಲಕರನ್ನು ಸುಲಿಯುತ್ತಿರುವ ಈ ಸಂಸ್ಥೆಗಳನ್ನು ಹದ್ದುಬಸ್ತಿಗೆ ತರಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳಬೇಕು.
ಶಿಕ್ಷಣ ಸಂವಿಧಾನದ ಪ್ರಕಾರ ಕನ್ಕರಂಟ್ ಪಟ್ಟಿಗೆ ಬರುತ್ತೆ. ಅಲ್ಲಿ ಕೇಂದ್ರ, ರಾಜ್ಯ ಎರಡಕ್ಕೂ ಸಮಾನ ಹಕ್ಕಿದೆ. ಆದರೆ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಅನ್ನುವ ಹಾದಿಯ ಮೂಲಕ ಕೇಂದ್ರ ಸರ್ಕಾರ ಶಿಕ್ಷಣವನ್ನು ಪೂರ್ತಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹವಣಿಸುತ್ತಿದೆ. ನ್ಯಾಯವಾಗಿ ಶಿಕ್ಷಣದ ಪೂರ್ತಿ ಅಧಿಕಾರ ರಾಜ್ಯ ಸರ್ಕಾರಕ್ಕೆ ಸೇರಬೇಕಾದದ್ದು. ಅದನ್ನು ಅಕ್ರಮ ಮಾರ್ಗ ಬಳಸಿ ತನ್ನ ತೆಕ್ಕೆಗೆ ಎಳೆದುಕೊಳ್ಳುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ಬಗೆಯುತ್ತಿರುವ ಅಪಚಾರವಾಗಿದೆ.
ಈ ತೀರ್ಪು ಬಂದಿರುವ ಇದೇ ಸಂದರ್ಭದಲ್ಲಿ ಸರ್ಕಾರ ಎಲ್ಲ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುವ ವ್ಯವಸ್ಥೆ ಮಾಡಬೇಕು. ಈ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಇಲ್ಲದಿರುವುದರಿಂದ ಅಲ್ಲಿ ಕಲಿಯುವ ಕನ್ನಡದ ಮಕ್ಕಳು, ಕನ್ನಡೇತರರು ಎಂದಿಗೂ ಕನ್ನಡ ಮುಖ್ಯ ವಾಹಿನಿ ಸೇರದಂತೆ ವ್ಯವಸ್ಥೆ ನಿರ್ಮಾಣವಾಗುತ್ತಿದೆ. ಇದು ನಾಳೆಯ ಕನ್ನಡದ ಭವಿಷ್ಯಕ್ಕೆ ನಿಜಕ್ಕೂ ಮಾರಕ. ಉದಾಹರಣೆಗೆ ಈ ಶಾಲೆಗಳಲ್ಲಿ ಕಲಿಸುವ ಸಮಾಜ ಶಾಸ್ತ್ರದಲ್ಲಿ ಕನ್ನಡ ನಾಡಿನ ಇತಿಹಾಸ, ಸಮಾಜದ ಬಗ್ಗೆ ಯಾವ ಮಾಹಿತಿಯೂ ಇಲ್ಲ.
ಹೀಗಾಗಿ ಕನ್ನಡ ನಾಡಿನ ಅಮೋಘ ಇತಿಹಾಸದ ಜ್ಞಾನದಿಂದ ಮಕ್ಕಳನ್ನು ವಂಚಿತಗೊಳಿಸುತ್ತಿರುವ ಇಂತಹ ಶಾಲೆಗಳ ಪಠ್ಯ ಪುಸ್ತಕವನ್ನು ಬದಲಾಯಿಸಿ ಸರಿಯಾದ ಮಾಹಿತಿ ನೀಡುವಂತಹ ಪಠ್ಯ ರೂಪಿಸುವತ್ತ ಸರ್ಕಾರ ಆದ್ಯ ಗಮನಹರಿಸಬೇಕು. ಆದ್ದರಿಂದ ಈ ಕೂಡಲೇ ಈ ನಿಟ್ಟಿನಲ್ಲಿ ಕಾನೂನು ರೂಪಿಸುವ ಕೆಲಸ ಸರ್ಕಾರ ಮಾಡಬೇಕು.
ಧನ್ಯವಾದಗಳು...
ಮಹೇಶ ಎಮ್. ರುದ್ರಗೌಡರ, ವಿಜಾಪುರ [ಶಿಕ್ಷಣ ವ್ಯವಸ್ಥೆ]
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications