ರಾಜ್ಯಸಭೆಗೆ ಕನ್ನಡಿಗರ ಬದಲು ಕನಸಿನ ಕನ್ಯೆ ಏಕೆ?
ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷವು ಕರ್ನಾಟಕದಲ್ಲಿ ನೂರಾರು ಶಾಸಕರನ್ನೂ, ಹತ್ತಾರು ಸಂಸದರನ್ನೂ, ಲಕ್ಷಾಂತರ ಕಾರ್ಯಕರ್ತರನ್ನೂ ಹೊಂದಿದ್ದೂ ... ಪಾಪಾ, ರಾಜ್ಯಸಭೆಗೆ ಕಳಿಸೋಕೆ ಒಬ್ಬ ಯೋಗ್ಯ ಅಭ್ಯರ್ಥೀನಾ ಹೊಂದಿಲ್ಲಾ ಅಂತಾ ಇವತ್ತಿನ ಸುದ್ದಿ ನೋಡುದ್ರೆ ಗೊತ್ತಾಗುತ್ತೆ.
ರಾಜ್ಯಸಭೆಗೆ ಹೊರಗಿನವರನ್ನು ಆರಿಸೋ ಕೆಟ್ಟಚಾಳಿ
ಯಾಕ್ರೀ ಹೀಗ್ಮಾಡ್ತಾ ಇದೀರಾ ಅಂತಾ ಯಾರಾದ್ರೂ ಬಿಜೆಪಿಯೋರುನ್ನಾ ಕೇಳುದ್ರೆ.... ಕಾಂಗ್ರೆಸ್ ಅವ್ರು ಮಾಡಿಲ್ವಾ? ದಳದೋರು ಮಾಡಿಲ್ವಾ? ಅನ್ನೋದ್ರಲ್ಲಿ ಅನುಮಾನಾನೇ ಇಲ್ಲಾ ಬಿಡಿ. ಈ ವ್ಯಾಧಿ ನಮ್ಮ ನಾಡಲ್ಲಿರೋ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇರೋದೆ. ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಕಳಿಸೋವಾಗ ನಮ್ಮ ರಾಜಕೀಯ ಪಕ್ಷಗಳು ಇಲ್ಲಿ ಚುನಾವಣೆ ಎದುರಿಸಿ ಗೆಲ್ಲೋಕೆ ಆಗದೇ ಇರೋ ಹೊರ ರಾಜ್ಯದವರನ್ನೇ ಕಳಿಸೋ ಪರಿಪಾಠಾನ ಇಟ್ಕೊಂಡಿದೆ. ಕರ್ನಾಟಕದ ಹಿತ ಕಾಪಾಡೋಕ್ಕೆ ಅಂತಾನೆ ಸಂಸದರನ್ನು ರಾಜ್ಯಸಭೆಗೆ ಆರಿಸಿಕಳಿಸೋದಲ್ವಾ? ಅದುನ್ನೇ ಮರೆತು ಕನ್ನಡ ಕನ್ನಡಿಗ ಕರ್ನಾಟಕ ಅಂದ್ರೇನು ಅಂತಾನೇ ಅರಿಯದೋರುನ್ನಾ, ಅರಿತರೂ ನಮಗಾಗಿ ಮಿಡಿಯದೋರುನ್ನ ಕಣಕ್ಕಿಳಿಸಿ, ಗೆಲ್ಲಿಸೋ ಈ ಘನಂದಾರಿ ಕೆಲಸಾನಾ ಕಾಂಗ್ರೆಸ್ಸು, ಜನತಾದಳ ಮತ್ತು ಭಾರತೀಯ ಜನತಾಪಕ್ಷಗಳೆಲ್ಲಾ ಮಾಡ್ತಾನೆ ಬಂದಿವೆ.
ಕರ್ನಾಟಕದಿಂದ ಸರಿಯಾದ ಪ್ರಾತಿನಿಧ್ಯ ಹೋಗಬೇಕು!
ಕರ್ನಾಟಕದಿಂದ ರಾಜ್ಯಸಭೆಗೆ ನಿಜವಾಗಿ ಕರ್ನಾಟಕವನ್ನು ಪ್ರತಿನಿಧಿಸಬಲ್ಲವರನ್ನು ಕಳಿಸೋಕೆ ನಮ್ಮ ರಾಜಕೀಯ ಪಕ್ಷಗಳು ಮುಂದಾಗಬೇಕು. ಅಲ್ಲೀ ತನಕ ನಮ್ಮ ರಾಜಕೀಯ ಪಕ್ಷಗಳು ರಾಷ್ಟ್ರೀಯ ನಾಯಕರನ್ನು ರಾಜ್ಯಸಭೆಗೆ ಕಳಿಸೋದು, ಆ ಮಹಾನ್ ನಾಯಕರುಗಳು ಎರಡೂ ಮೂರೂ ಸಾರಿ ಇಲ್ಲಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋದಮೇಲೂ ಕನ್ನಡದ ಅ, ಆ, ಇ, ಈ ಕಲೀದೆ ಇರೋದು, ಕರ್ನಾಟಕಕ್ಕೆ ಸಂಬಂಧಿಸಿದ ಸಮಸ್ಯೆಗಳೆಲ್ಲಕ್ಕೂ ಕಮಕ್ ಕಿಮಕ್ ಅನ್ನದೇ ಇರೋದು, ಸಂಸತ್ತಿನಲ್ಲಿ ಚಿಲ್ಲರೆ ರಾಜ್ಯಗಳ ವಿಷಯ ಮಾತಾಡಕ್ಕೆ ನಾವು ಬಂದಿಲ್ಲಾ, ನಮ್ದೇನಿದ್ರೂ ನ್ಯಾಸನಲ್ಲು, ಇಂಟರ್ ನ್ಯಾಸನಲ್ಲು ಲೆವೆಲ್ಲಿನ ಸಮಸ್ಯೆಗಳ ಬಗ್ಗೆ ದನಿ ಎತ್ತೋ ಕೆಲಸಾ ಅನ್ನೋದೂ... ಇವನ್ನೆಲ್ಲಾ ಕನ್ನಡಿಗರು ನೋಡಿ, ಅನುಭವಿಸಿ, ಆನಂದಿಸೋದೂ... ತಪ್ಪೋ ಹಂಗಿಲ್ಲಾ ಗುರೂ!
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion













Click it and Unblock the Notifications