ಎಸೆಸ್ಸೆಲಿ ಮರು ಪರೀಕ್ಷೆ, ಮಕ್ಕಳಿಗೆ ಮತ್ತೆ ಹೊರೆ?

ಮೈಸೂರು ಜಿಲ್ಲೆಯ ಸುಮಾರು 14 ಕೇಂದ್ರಗಳಲ್ಲಿ ಎಸ್ಎಸ್ ಎಲ್ ಸಿ ಹಿಂದಿ ಭಾಷೆ ಪರೀಕ್ಷೆ ಬರೆದಿದ್ದ ಈಗ ಮತ್ತೆ ಪರೀಕ್ಷೆ ಬರೆಯಬೇಕಾಗಿದೆ. ಶಿವಮೊಗ್ಗ ನಗರದ ಬಸವೇಶ್ವರ ಸರ್ಕಾರಿ ಶಾಲೆಯಲ್ಲಿ ಕಿಟಕಿ ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಬೆಂಕಿ ಕಿಡಿ ಸಿಡಿದ ಪರಿಣಾಮ 100 ಕ್ಕೂ ಹೆಚ್ಚು ಹಿಂದಿ ಉತ್ತರಪತ್ರಿಕೆಗಳ ಬಂಡಲ್ಗಳು ಬೆಂಕಿಗೆ ಆಹುತಿಯಾಗಿತ್ತು. ಪೊಲೀಸರ ಕಾವಲಿನಲ್ಲಿ ಸುರಕ್ಷಿತವಾಗಿದ್ದ ಕೇಂದ್ರದಲ್ಲಿ ಈ ಅಚಾತುರ್ಯ ನಡೆದಿದ್ದು, ಪ್ರಶ್ನೆಗೆ ಅರ್ಹವಾಗಿದೆ.
ಇದು ಭಾಷಾ ವಿಷಯವಾಗಿರುವುದರಿಂದ ಪರವಾಗಿಲ್ಲ ಎಂದು ಕೆಲ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆಗೆ ಅಣಿಯಾಗುತ್ತಿದ್ದಾರೆ. ರಜೆ ಕಳೆಯಲು ದೂರದ ಊರುಗಳಿಗೆ ತೆರಳಿರುವ ಇನ್ನೂ ಅನೇಕ ವಿದ್ಯಾರ್ಥಿಗಳಿಗೂ ಹಾಗೂ ಹೀಗೂ ಸುದ್ದಿ ಮುಟ್ಟಿ,ಮತ್ತೆ ಮನೆ ಕಡೆಗೆ ನಡೆದಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಬೇಜಾಬ್ದಾರಿತನಕ್ಕೆ ವಿದ್ಯಾರ್ಥಿಗಳು ಬೆಲೆ ತೆರಬೇಕಾಗಿದೆ.
ಸರ್ಕಾರ ಅಥವಾ ಪರೀಕ್ಷಾ ಮಂಡಳಿ ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನಾದರೂ ನೀಡಬೇಕು. ಮೌಲ್ಯಮಾಪನದಲ್ಲಿ ಕೊಂಚ ಸಡಿಲತೆ ನೀಡಬೇಕು. ಮೊದಲು ಪರೀಕ್ಷೆ ಬರೆದಂತೆ ಮತ್ತೆ ಮತ್ತೆ ಬರೆಯಲು ಎಲ್ಲಾ ವಿದ್ಯಾರ್ಥಿಗಳು ಬುದ್ಧಿವಂತರು ಎನ್ನಲು ಬರುವುದಿಲ್ಲ. ಪರೀಕ್ಷೆ ಸಿದ್ಧತೆ ಸಮಯ, ರಜೆ ವ್ಯರ್ಥವಾದ ಸಮಯವನ್ನು ಯಾರು ಕಟ್ಟಿಕೊಡುತ್ತಾರೆ ಗೊತ್ತಿಲ್ಲ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜಾಗರೂಕತೆಯಿಂದ ವರ್ತಿಸುವುದು ಒಳಿತು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications