ಭ್ರಷ್ಟಾಚಾರ : ಎಲ್ಲಾ ಪಕ್ಷಗಳು ಒಂದೇ, ಪೇಜಾವರ ಶ್ರೀ

ಭ್ರಷ್ಟಾಚಾರವನ್ನು ಹತ್ತಿಕ್ಕಲು ಕಟ್ಟುನಿಟ್ಟಾದ ತ್ವರಿತಗತಿಯ ವ್ಯವಸ್ಥೆಯಾಗಬೇಕೆಂಬುದೇ ನನ್ನ ಆಗ್ರಹವಾಗಿದೆ. ಭ್ರಷ್ಟಾಚಾರದ ಆರೋಪಗಳು ಬಂದಾಗ ಅದನ್ನು ನಿರ್ಣಯಿಸುವವನು ನಾನಲ್ಲ. ಪ್ರಜಾಪ್ರಭುತ್ವದಲ್ಲಿ ಪಕ್ಷದ ಹೈಕಮಾಂಡ್, ಲೋಕಾಯುಕ್ತರು, ನ್ಯಾಯಾಲಯಗಳು ನಿರ್ಧರಿಸಬೇಕು. ಅದು ತ್ವರಿತಗತಿಯಿಂದಾಗಬೇಕೆಂದು ಮಾತ್ರ ನಾನು ಹೇಳಬಯಸುತ್ತೇನೆ. ನಾನು ಪಕ್ಷಪಾತವನ್ನು ತೋರಿರುವ ಒಂದೇ ಒಂದು ಉದಾಹರಣೆಯನ್ನು ತೋರಿಸುವಂತೆ ಆಹ್ವಾನಿಸುತ್ತಿದ್ದೇನೆ.
ಭ್ರಷ್ಟಾಚಾರದ ಆರೋಪಗಳು ಬಂದಾಗ ಸಂಬಂಧಪಟ್ಟವರು ಕೂಡಲೇ ಪರಿಶೀಲಿಸಿ ವಿಳಂಬವಿಲ್ಲದೇ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದೇನೆಯೇ ಹೊರತು ಯಾರನ್ನೂ ಬೆಂಬಲಿಸಿಲ್ಲ ಮತ್ತು ವಿರೋಧಿಸಿಯೂ ಇಲ್ಲ. ನಾನು ಎಲ್ಲಾ ರಾಜಕೀಯ ಪಕ್ಷಗಳನ್ನೂ ಸಮಾನವಾಗಿ ನೊಡುತ್ತೇನೆ. ಎಲ್ಲಾ ಪಕ್ಷದ ಪ್ರಮುಖರೊಂದಿಗೆ ಒಳ್ಳೆಯ ಸಂಪರ್ಕವನ್ನು ಇಟ್ಟುಕೊಂಡಿದ್ದರೂ ಪಕ್ಷ ರಾಜಕೀಯದಿಂದ ನಾನು ದೂರವೇ ಇದ್ದೇನೆ.
ನನ್ನ ಪಾಡಿಗೆ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಕೊಂಡಿದ್ದೇನೆ. ಹಿಂದೂ ಧರ್ಮದ ರಕ್ಷಣೆಗಾಗಿ, ಪರಿಸರ ಮಾಲಿನ್ಯ, ಅಸ್ಪೃಶ್ಯತೆ, ಭ್ರಷ್ಟಾಚಾರ ಮುಂತಾದ ಪಿಡುಗುಗಳ ವಿರುದ್ಧವಾಗಿ ನಡೆಯುವ ಹೋರಾಟಗಳಲ್ಲಿಯೂ ಭಾಗವಹಿಸುತ್ತೇನೆ. ಆದರೆ ಪಕ್ಷ ರಾಜಕೀಯದಿಂದ ಮಾತ್ರ ದೂರವಾಗಿಯೇ ಇರುತ್ತೇನೆ. ಬಾಬಾ ರಾಮದೇವರ ಸತ್ಯಾಗ್ರಹವೂ ಪಕ್ಷಾತೀತವಾಗಿತ್ತು. ಎಲ್ಲಾ ಧರ್ಮಗಳ ಸಂತರೂ ಅಲ್ಲಿ ಭಾಗವಹಿಸಿದ್ದರು.
ಆದ್ದರಿಂದ ಒಂದು ದಿನದ ಮಟ್ಟಿಗೆ ಆ ಸತ್ಯಾಗ್ರಹದಲ್ಲಿ ಭಾಗವಹಿಸಿ ಅದಕ್ಕೆ ನೈತಿಕ ಬೆಂಬಲ ನೀಡಿದ್ದೇನೆ. ಇದನ್ನೂ ತಪ್ಪೆಂದು ಕೆಲವರು ದೂರಿದ್ದಾರೆ. ಪಕ್ಷಾತೀತವಾದ ಇಂತಹ ಎಲ್ಲಾ ಹೋರಾಟಗಳಿಗೂ ನನ್ನ ಬೆಂಬಲವಿದೆ. ಸರಿಯಾಗಿ ಪರಿಶೀಲಿಸದೆ ರಾಜಕಾರಣಿಗಳು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ನನ್ನೊಡನೆ ಒಳ್ಳೆಯ ರೀತಿಯ ಸಂಪರ್ಕವನ್ನು ಇಟ್ಟುಕೊಳ್ಳಬೇಕೆಂದು ಹೇಳಬಯಸುತ್ತೇನೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications