ಕರ್ನಾಟಕ ಮಠಾಧೀಶರಿಗೆ ಒಂದು ಓಲೆ ಗರಿ

ಇದೇ ನಾಟಕದ ಇನ್ನೊಬ್ಬ ಪ್ರಮುಖ ಪಾತ್ರಧಾರಿ ಎಚ್. ಡಿ. ಕುಮಾರಸ್ವಾಮಿ ತಮ್ಮ ನಿಲುವಿಗೆ ಅಂಟಿಕೊಂಡು ಮಂಜುನಾಥನ ಮುಂದೆ ನಿಂತು "ನಾನು ಹೇಳುವುದು ಸತ್ಯ ಸತ್ಯ ಸತ್ಯ" ಎಂದು ಪ್ರಮಾಣ ಮಾಡಿದ್ದಾರೆ. ಒಟ್ಟಿನಲ್ಲಿ ಈ ರಾಜಕೀಯ ನಾಟಕದಲ್ಲಿ ಕೊಟ್ಟ ಮಾತಿನಂತೆ ನಡೆಯದ ಶಿವಶರಣ ಯಡಿಯೂರಪ್ಪ ಸೋತರೆ, ಕುಮಾರಸ್ವಾಮಿ ಜಯಭೇರಿ ಬಾರಿಸಿದ್ದಾರೆ. ಗ್ರಾಫ್ ನಲ್ಲಿ ಅವರ ಪಾಪ್ಯುಲಾರಿಟಿ ಪಾಯಿಂಟುಗಳು ಸೋಮವಾರ ಸಂಜೆ ವೇಳೆಗೆ 20ರಿಂದ 32ಕ್ಕೆ ಎರಿದೆ! ಬಿಎಸ್ ವೈ ಪಾಪ್ಯುಲಾರಿಟಿ ಸೂಚ್ಯಂಕ 42ರಿಂದ 39ಕ್ಕೆ ಇಳಿಮುಖವಾಗಿದೆ.
ನಮ್ಮ ಸಿಎಂಗೆ ಮಠ, ಸ್ವಾಮೀಜಿಗಳ ಮೇಲೆ ಇನ್ನಿಲ್ಲದ ಭಕ್ತಿ. ಲಿಂಗಾಯಿತ ಮಠಕ್ಕೆ ತೋರುತ್ತಿರುವ ಪ್ರೀತಿ ಬೇರೆ ಮಠಕ್ಕೆ ತೋರುತ್ತಿಲ್ಲ ಎನ್ನುವ ಕೂಗು ಕೆಲವು ಕಡೆ ಕೇಳಿ ಬಂದರೂ, ಈ ವಿಷಯದಲ್ಲಿ ಸಮತೋಲನ ಕಾಯ್ದುಕೊಳ್ಳುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆನ್ನುವುದು ಎಲ್ಲರೂ ಒಪ್ಪಿಕೊಳ್ಳಬೇಕಾದ ಸತ್ಯ. ಹೀಗಿರುವಾಗ, ರಾಜ್ಯದಲ್ಲಿರುವ ಹೆಚ್ಚುಕಮ್ಮಿ 3500 ಮಠಾಧಿಪತಿಗಳಿಗೆ ಕೆಲವೊಂದು ಪ್ರಶ್ನೆಗಳು (ವಿಶೇಷವಾಗಿ ವೀರಶೈವ ಮಠಾಧೀಶರಿಗೆ).
1. ಅಂದಾಜು ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಿಂದ ಪ್ರಕಾಶಿತಗೊಳ್ಳುವ ಎಲ್ಲಾ ದಿನಪತ್ರಿಕೆಗಳಲ್ಲಿ ಆಣೆ ಪ್ರಮಾಣಕ್ಕೆ ಸಂಬಂಧಿಸಿದಂತೆ ಜಾಹೀರಾತು ನೀಡುವ ಮೊದಲು ಸಿಎಂ ನಿಮ್ಮ ಅನುಮತಿ ಪಡೆದುಕೊಂಡಿದ್ದರೆ?
2. ಕ್ಷುಲ್ಲಕ ರಾಜಕೀಯ ಜಿದ್ದು ಸಾಧಿಸಲು ಜಾಹೀರಾತಿಗೆ ವಿನಿಯೋಗಿಸಿದ ಹಣವನ್ನು (ಅದು ಪಕ್ಷದ ಹಣವಾಗಲಿ ಅಥವಾ ಸಾರ್ವಜನಿಕರ ಹಣವಾಗಲಿ) ಬಡ ವಿದ್ಯಾರ್ಥಿಗಳಿಗೆ, ಇನ್ನೂ ನೆಲೆ ಕಾಣದ ನೆರೆ ಸಂತ್ರಸ್ತರಿಗೆ ನೀಡಬಹುದಾಗಿತ್ತಲ್ಲವೇ? ಹಾಗಂತ ನೀವು ಸಿಎಂ ಅವರ ಎರಡೂ ಕಿವಿ ಹಿಂಡಬಹುದಾಗಿತ್ತಲ್ಲವೇ?
3. ನಿಮ್ಮ ಆಜ್ಞೆಗೆ ಬೆಲೆಕೊಟ್ಟು ಸಿಎಂ ಆಣೆ ಪ್ರಮಾಣದಿಂದ ಹಿಂದಕ್ಕೆ ಸರಿದರೇ ಅಥವಾ ಮಂಜುನಾಥನ ಮೇಲಿನ ಭಯದಿಂದಲೋ? ಅಥವಾ ಹೈ ಕಮಾಂಡ್ ಆದೇಶದಿಂದಲೋ?
4. ಆಣೆ ಪ್ರಮಾಣ ವಿಚಾರದಲ್ಲಿ ಮುಖ್ಯಮಂತ್ರಿಗಳ ವರ್ತನೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೈವಾಂಶ ಸಂಭೂತರಾದ ತಮಗೆ ಅನಿಸುವುದಿಲ್ಲವೋ?
5. ಧರ್ಮಸ್ಥಳದಲ್ಲಿ ಇಂದು "ಆರ್ಡಿನರಿ" ಭಕ್ತಾದಿಗಳು ಯಡಿಯೂರಪ್ಪ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಗ್ಗೆ ನಿಮ್ಮ ಅನಿಸಿಕೆ ಏನು?
6. ದಿನ ಬೆಳಗಾದರೆ ಮುಖ್ಯಮಂತ್ರಿಗಳ ಒಂದೊಂದು ಹಗರಣಗಳು ಹೊರಬರುತ್ತಿರಬೇಕಾದರೆ ಅವರನ್ನು ಸಮರ್ಥಿಸಿಕೊಳ್ಳಲು ನಿಮಗೆ ಇನ್ನೂ ಉಳಿದಿರುವ ದಾರಿ ಯಾವುದು?
7. ಧಾರ್ಮಿಕ ಭಾವನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವವರನ್ನು ಮಠದೊಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ತಾವುಗಳೆಲ್ಲ ಸೇರಿ, ಚರ್ಚಿಸಿ, ಆಣೆ ಪ್ರಮಾಣ ಮಾಡುವುದು ಯಾವಾಗ?
8. ಮುಖ್ಯಮಂತ್ರಿಗಳಿಂದ ಅನುದಾನ ಅಥವಾ ಇತರ ಸಹಾಯವನ್ನು ಒಂದು ವೇಳೆ ನೀವು ಅಪೇಕ್ಷಿಸುತ್ತಿದ್ದರೆ ಈ ಮೇಲಿನ ಪ್ರಶ್ನಾವಳಿಯಲ್ಲಿ ಭಾಗವಹಿಸುವ ಅಗತ್ಯವಿಲ್ಲ ಎಂಬ ನನ್ನ ನಿಲವು ಸರಿಯೇ?
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications