ಪಂಚತಂತ್ರ ಆಗಿದೆ ಅತಂತ್ರ, ಫ್ರಾನ್ಸಿಸ್ ಆಸ್ತಿ, ಲೆಕ್ಕ ನಾಸ್ತಿ

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು, ಗ್ರಾಮಮಟ್ಟದಲ್ಲಿ ಆಸ್ತಿ ವಿವರ, ಇತರೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪಂಚಾಯತ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಮಾಹಿತಿ ಕೇಂದ್ರ(NIC) ಇವರು ಜಂಟಿಯಾಗಿ ಅಭಿವೃದ್ದಿ ಪಡಿಸಿರುವ ಈ ಸಾಫ್ಟ್ವೇರ್ http://stg1.kar.nic.in/panchatantra ಎಂಬ URL ನಲ್ಲಿ ಲಭ್ಯವಿದೆ. ಆದರೆ, ಈ ಪಂಚತಂತ್ರದಲ್ಲಿ ಎಲ್ಲವೂ ಅತಂತ್ರವಾಗಿದೆ. ಕನ್ನಡ ಪದಗಳ ವಾಕ್ಯ ಪದ ದೋಷ ಸಹಿಸಿಕೊಂಡರೂ, ಮಾಹಿತಿಯಲ್ಲಿ ಭಾರಿ ಲೋಪ ಕಂಡು ಬಂದಿದೆ.
ಆನ್ ಲೈನ್ ಮುಖಾಂತರ ಕಂದಾಯ ಪಾವತಿಸುವ ಸೌಲಭ್ಯವು ಕೂಡ ಈ ವೆಬ್ ಸೈಟ್ ನಲ್ಲಿ ದೊರೆಯಲಿದೆ. ಸದ್ಯ ಗ್ರಾ.ಪಂ.ಗಳಿಗೆ ಚುನಾವಣೆ ನಡೆದು ನೂತನ ಸಮಿತಿ ಆಸ್ತಿತ್ವಕ್ಕೆ ಬಂದಿರುವುದು ಮಾತ್ರವಲ್ಲದೇ, ಗ್ರಾ.ಪಂ.ಗಳಿಗೆ ನೂತನವಾಗಿ ಪಂಚಾಯಿತಿ ಅಭಿವೃದ್ಡಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಈ ಸಂದರ್ಭದಲ್ಲಿ ಪಂಚತಂತ್ರ ಆನ್ ಲೈನ್ ತಂತ್ರಾಂಶದಿಂದ ಗ್ರಾ.ಪಂ.ಗಳ ಶೇ.100ಕ್ಕೆ 100ರಷ್ಟು ಪಾರದರ್ಶಕ ಆಡಳಿತವನ್ನು ತಳಮಟ್ಟದಲ್ಲಿ ನೀಡುತ್ತದೆ ಎಂಬುದು ಸರ್ಕಾರದ ಉದ್ದೇಶವಾಗಿದೆ.
ಪಂಚತಂತ್ರ ಆನ್ ಲೈನ್ ತಂತ್ರಾಂಶದಿಂದ ಗ್ರಾ.ಪಂ.ಗಳ ಸಂಪೂರ್ಣ ಮಾಹಿತಿ ದೊರೆಯಲಿದೆ. ಇದಕ್ಕಾಗಿ ನೀವು http://stg2.kar.nic.in/gpportal/ ತಾಣವನ್ನು ಸಂಪರ್ಕಿಸಬಹುದು. ಸಮಸ್ಯೆಯತ್ತ ಗಮನ ಹರಿಸೋಣ:
* http://stg2.kar.nic.in/gpportal/ ಬ್ರೌಸ್ ಮಾಡಿ
* english ಅಥವಾ ಕನ್ನಡ ಅಯ್ಕೆ ಮಾಡಿಕೊಳ್ಳಿ
* ಕರ್ನಾಟಕ ನಕಾಶೆಯಲ್ಲಿರುವ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ, ತಾಲ್ಲೂಕು ವೀಕ್ಷಿಸಿ
* BANGALORE URBAN>>ಆನೇಕಲ್>>ವಣಕನಹಳ್ಳಿ(ಬಲಬದಿ ಸ್ಕ್ರೋಲ್)>>ಆಸ್ತಿ ತೆರಿಗೆಗಳು>>ಸಿಂಗಸಂದ್ರ(drop down menu) ಗೆ ಹೋಗಿ
* ಆಸ್ತಿ ಸಂಖ್ಯೆ CHR11 ರಿಂದ 84 ರವರೆಗೆ ಗಮಿನಿಸಿ
KT ಫ್ರಾನ್ಸಿಸ್ ಬಿನ್ KV ಥಾಮಸ್ ಎಂಬ ಒಂದೇ ಹೆಸರಿನಲ್ಲಿ ಖಾತೆ ಇರುತ್ತದೆ. ಅಲ್ಲದೆ ಕೆಲವು ಆಸ್ತಿ ಸಂಖ್ಯೆ51 ರಿಂದ 54ರವರೆಗೆ ಹಣ ಸಂದಾಯ ಕೂಡಾ ಆಗಿರುತ್ತದೆ. ಇಷ್ಟು ದೊಡ್ಡ ಆಸ್ತಿ ಆ ಹೆಸರಿನಲ್ಲಿಲ್ಲ ಹಾಗೂ ಈ ಲೋಪ ಇನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ಇದು ಕೇವಲ ಕಣ್ತಪ್ಪಿನ ಲೋಪವೋ ಅಥವಾ ತಂತ್ರಾಂಶ ದೋಷವೋ ಸ್ಪಷ್ಟವಾಗಿಲ್ಲ.
ಇತರೆ ಹಳ್ಳಿಗಳ ದಾಖಲೆಯಲ್ಲಿ ಈ ರೀತಿ ಯಾವುದೇ ದೋಷಗಳಿಲ್ಲ. ಕನ್ನಡ ಪದಗಳ ತಪ್ಪು ದಾಖಲೆಯನ್ನು ಕಷ್ಟಪಟ್ಟು ಸಹಿಸಿಕೊಂಡರೆ ಮಾಹಿತಿ ಪಡೆಯಲು ಈ ತಾಣ ಸೂಕ್ತವಾಗಿದೆ. ಆದರೆ. ಈ ಮೇಲ್ಕಂಡ ವಿವರಗಳ ಬಗ್ಗೆ ಸಂಬಂಧಪಟ್ಟವರು ಸೂಕ್ತವಾಗಿ ಪ್ರತಿಕ್ರಿಯಿಸಿ, ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಕೇಳಿಕೊಳ್ಳುತ್ತೇವೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications