ಶಿವರಾಜ ಪಾಟೀಲ ಯಾಕೆ ರಾಜೀನಾಮೆ ನೀಡಬೇಕು?

ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆಯಂಥ ಪ್ರಾಮಾಣಿಕರು ಆ ಸ್ಥಾನವನ್ನು ಅಲಂಕರಿಸಿದ್ದರಿಂದಲೇ ಭ್ರಷ್ಟ ರಾಜಕಾರಣಿಗಳ, ಅಧಿಕಾರಿಗಳ ಬುಡ ಗಡಗಡ ನಡುಗುವಂತಾಗಿರುವುದು. ಈಗ ಅದೇ ಸ್ಥಾನಕ್ಕೆ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಅವರು ಆಸೀನರಾಗಿದ್ದಾರೆ. ಭ್ರಷ್ಟರ ವಿರುದ್ಧ ಸಂತೋಷ್ ಹೆಗ್ಡೆ ಆರಂಭಿಸಿರುವ ಯುದ್ಧವನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯ ಈಗಿನ ಲೋಕಪಾಲರಲ್ಲಿದೆ. ಪಾಟೀಲರು ತಮ್ಮ ಸ್ಥಾನಕ್ಕೆ ನ್ಯಾಯ ಸಲ್ಲಿಸುತ್ತಾರೆಂಬ ನಂಬಿಕೆಯೂ ಇದೆ.
ಅವರು ಸಲ್ಲಿಸಿದ 2ಜಿ ತರಂಗಗುಚ್ಛ ಹಗರಣದ ವರದಿಯಿಂದಾಗಿ ಎ ರಾಜಾರಂಥ ಹಗಲು ದರೋಡೆಕೋರರು ಇಂದು ತಿಹಾರ್ ಜೈಲಿನಲ್ಲಿ ರಾಗಿ ಬೀಸುತ್ತಿದ್ದಾರೆ. ಪಾಟೀಲರ ದಕ್ಷತೆಯ ಬಗ್ಗೆ ಎರಡು ಮಾತೇ ಇಲ್ಲ. ಆ ಕಾರಣದಿಂದಾಗಿಯೇ ರಾಯಚೂರಿನ ಮಣ್ಣಿನ ಮಗ ಶಿವರಾಜ ಪಾಟೀಲರು ಲೋಕಾಯುಕ್ತರಾಗಿ ನೇಮಕವಾಗಿರುವುದು ಹಲ ರಾಜಕಾರಣಿಗಳಿಗೆ ನಡುಕ ತಂದಿರುವುದು ಸಹಜವೆ.
ಇಂಥ ನ್ಯಾ. ಶಿವರಾಜ ಪಾಟೀಲರು ಅಕ್ರಮವಾಗಿ ನಿವೇಶನ ಕೊಂಡಿರುವ ಆರೋಪಕ್ಕೆ ತುತ್ತಾಗಿದ್ದಾರೆ. ನ್ಯಾಯಾಂಗ ಇಲಾಖೆಯ ಬಡ ಕಾರ್ಮಿಕರಿಗೆ ನೀಡಬೇಕಾಗಿದ್ದ ಅಲ್ಲಾಳಸಂದ್ರದ ನಿವೇಶನವನ್ನು ಕೊಂಡಿರುವ, ತಮ್ಮ ಹೆಸರಿನಲ್ಲಿ ವಸಂತನಗರದಲ್ಲಿ ಒಂದು ನಿವೇಶನ ಇದ್ದಿದ್ದರೂ ಹೆಂಡತಿ ಹೆಸರಲ್ಲಿ ಮತ್ತೊಂದು ಹೌಸಿಂಗ್ ಬೋರ್ಡ್ ನಿವೇಶನ ಕೊಂಡ ಆರೋಪ ಅವರ ವಿರುದ್ಧ ಕೇಳಿಬರುತ್ತಿದೆ.
ಇಂಥ ನಿವೇಶನ ಪಡೆದ ನ್ಯಾಯಾಧೀಶ ತಾವೊಬ್ಬರೇ ಅಲ್ಲ, ಅನೇಕರಿಗೂ ಇದು ಸಿಕ್ಕಿದೆ. ಹೌಸಿಂಗ್ ಬೋರ್ಡ್ ನಿವೇಶನಕ್ಕೆ ಅಫಿಡವಿಡ್ ನೀಡಬೇಕಾಗಿಲ್ಲ ಎಂದೆಲ್ಲ ಅವರು ಸ್ಪಷ್ಟನೆ ನೀಡಿದ್ದಾರೆ. ಅವರು ನೀಡಿರುವ ಸ್ಪಷ್ಟನೆ ಕೆಲವರಿಗೆ ಸಮಂಜಸವೂ ಇರಬಹುದು ಹಲವರಿಗೆ ಅಸಮಂಜಸವೂ ಇರಬಹುದು. ಆದರೆ, ಅವರಂಥ ದಕ್ಷ ಅಧಿಕಾರಿಯ ವಿರುದ್ಧ ತಿರುಗಿಬೀಳಲು, ಅವರ ರಾಜೀನಾಮೆ ಪಡೆಯಲು ಇದು ಸಮಂಜಸವಾದ ಸಮಯವೆ?
ಇದು ಸರಿಪಡಿಸಿಕೊಳ್ಳಲಾಗದಂಥ ಮಹಾಪರಾಧವೇನೂ ಅಲ್ಲ. ನಿವೇಶನ ಪಡೆದಿರುವುದು ಅಕ್ರಮವೆಂದಾದರೆ ವಾಪಸ್ ನೀಡುವುದಾಗಿ ಪಾಟೀಲ್ ಹೇಳಿದ್ದಾರೆ. ಆದರೆ, ಬೆಟ್ಟದಷ್ಟು ಭ್ರಷ್ಟಾಚಾರದ ಸಮಸ್ಯೆಗಳು ನಮ್ಮ ಮುಂದೆ ಇರುವಾಗ, ಅದೇ ಬೆಟ್ಟವನ್ನು ಇಲಿಗಾಗಿ ಅಗಿಯುವುದು ಎಲ್ಲಿಯ ನ್ಯಾಯ? ತಪ್ಪಿನ ಪ್ರಮಾಣ ಎಷ್ಟೇ ಇರಲಿ, ತಪ್ಪು ತಪ್ಪೇ. ಅದನ್ನು ಸರಿಪಡಿಸಿಕೊಳ್ಳಲು ಅವಕಾಶವಿರುವಾಗ ಅದನ್ನೇ ಬೃಹದಾಕಾರ ಮಾಡಿಕೊಂಡು, ಮುಂದಿನ ದೊಡ್ಡ ಸಮಸ್ಯೆಗಳನ್ನು ಕುಬ್ಜವಾಗಿಸುವುದು ಸರಿಯೆ?
ಶಿವರಾಜ ಪಾಟೀಲರಿಗೆ ನಿವೇಶನ ನೀಡಿರುವುದು ಅಪರಾಧವಾದರೆ, ಉಳಿದೆಲ್ಲ 'ಶ್ರೀಮಂತ' ನ್ಯಾಯಾಧೀಶರಿಗೆ ನೀಡಿರುವ ನಿವೇಶನಗಳನ್ನೂ ವಾಪಸ್ ಮಾಡಲು ಪತ್ರಿಕೆಗಳು, ರಾಜಕಾರಣಿಗಳು ಒತ್ತಾಯಮಾಡಲಿ. ಪರಿಸ್ಥಿತಿ ಹೀಗಿರುವಾಗ, ತಮ್ಮನ್ನು ಆಯ್ಕೆ ಮಾಡಿರುವ ಮುಖ್ಯಮಂತ್ರಿಯ ವಿರುದ್ಧವೇ ತನಿಖೆ ನಡೆಸುತ್ತಿರುವ ನ್ಯಾ. ಶಿವರಾಜ ಪಾಟೀಲರು ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಬಾರದು. ಬದಲಿಗೆ, ತಾವು ಸಿಲುಕಿರುವ ಸಂಕೋಲೆ ಬಿಡಿಸಿಕೊಂಡು ಭ್ರಷ್ಟರ ವಿರುದ್ಧ ಮುಗಿಬೀಳಬೇಕು. ಇಲ್ಲದಿದ್ದರೆ, ಇಲಿಯನ್ನು ಹುಡುಕುತ್ತಿರುವ ಹಂತದಲ್ಲಿ ಉಳಿದ ಹೆಗ್ಗಣಗಳು ಬಿಲ ಸೇರಿಕೊಂಡುಬಿಡುತ್ತವೆ ಹುಷಾರ್!
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications