ಸ್ವಾಮಿ ಸದಾನಂದರೇ ಹೀಗೇಕೆ ತದ್ವಿರುದ್ಧ ಹೇಳಿಕೆ ನೀಡುತ್ತಿದ್ದೀರಿ?

ನಿವೃತ್ತ ಲೋಕಾಯುಕ್ತ ನ್ಯಾ ಹೆಗ್ಡೆ ಅವರು 'ಭ್ರಷ್ಟಾಚಾರವಿಲ್ಲದ ಸಂಸ್ಥೆಯೇ ಇಲ್ಲ' ಎಂದು ವಾಸ್ತವದ ಮೇಲೆ ಬೆಳಕು ಚೆಲ್ಲುತ್ತಿದ್ದಂತೆ ಪಾಪ ಸದಾನಂದರು ಎಲ್ಲಿ ಮುಟ್ಟಿ ನೋಡಿಕೊಂಡರೋ ನ್ಯಾ ಹೆಗ್ಡೆ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
'ನ್ಯಾ. ಸಂತೋಷ್ ಹೆಗ್ಡೆ ಅವರ ಬಗ್ಗೆ ಅಪಾರ ಗೌರವವಿದೆ. ಆದರೆ ಭ್ರಷ್ಟಾಚಾರವಿಲ್ಲದ ಸಂಸ್ಥೆಯೇ ಇಲ್ಲ ಎನ್ನುವ ಹೆಗ್ಡೆ ಹೇಳಿಕೆಯಿಂದ ತುಂಬಾ ಬೇಸರವಾಗಿದೆ. ಪ್ರಚಾರಕ್ಕಾಗಿ ಮಾಧ್ಯಮದ ಮುಂದೆ ಪದೇ ಪದೇ ಹೇಳಿಕೆ ನೀಡುವುದು ಸಂಪ್ರದಾಯವಲ್ಲ. ತಮ್ಮ ವಿರುದ್ಧದ ಟೀಕೆಗಳಿಗೆ ಈ ರೀತಿ ಆವೇಶಭರಿತವಾಗಿ ಮಾಧ್ಯಮದ ಮುಂದೆ ಬಂದು ಉತ್ತರಿಸುವುದು ಸರಿಯಲ್ಲ' ಎಂದೂ ಅಪ್ಪಣೆ ಕೊಡಿಸಿದ್ದಾರೆ.
ಸ್ವಾಮಿ ಸದಾನಂದರೇ ಯಾಕೆ ತದ್ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನ್ಯಾ. ಸಂತೋಷ್ ಹೆಗ್ಡೆ ಅವರು ಲೋಕಾಯುಕ್ತ ಹುದ್ದಯಿಂದ ಎದ್ದು ಹೋದ ಮೇಲೆ ಆ ಸ್ಥಾನವನ್ನು ಅರ್ಹರಿಗೆ ನೀಡಲು ನೀವು ಹೇಗೆ ವಿಫಲರಾಗುತ್ತಿದ್ದೀರಿ ಎಂಬುದು ನಾಡಿನ ಜನತೆಗೆ ಗೊತ್ತಿದೆ. ಒಂದು ಹಂತದಲ್ಲಿ ಹತಾರಾಶರಾಗಿ 'ನೂರಕ್ಕೆ ನೂರರಷ್ಟು ಯಾರೂ ಪರಿಪೂರ್ಣರಾಗಿರುವುದಿಲ್ಲ' ಎಂದು ನೀವೇ ಹೇಳಿದ್ದನ್ನು ಮರೆತುಹೋದಿರಾ.
ವ್ಯಕ್ತಿಯಾದರೇನೂ, ಸಂಸ್ಥೆಯಾದರೇನೂ? ನೂರಕ್ಕೆ ನೂರರಷ್ಟು ಪರಿಪೂರ್ಣರಾಗಿರುವ ವ್ಯಕ್ತಿಯೇ ನಿಮಗೆ ಸಿಗೊಲ್ಲ ಅಂತಾದರೆ ಇನ್ನು ಸಂಸ್ಥೆಗಳು ಎಲ್ಲಿಂದ ಸಿಗಬೇಕು? ಅದನ್ನೇ ನ್ಯಾ ಸಂತೋಷ್ ಹೆಗ್ಡೆ ಅವರು ಹೇಳಿದ್ದು 'ಭ್ರಷ್ಟಾಚಾರ ಇಲ್ಲದ ಸಂಸ್ಥೆಯೇ ಇಲ್ಲ' ಎಂದು. ಅದಕ್ಕೆ ನೀವೂ ಆವೇಶಭರಿತವಾಗಿ ಮಾಧ್ಯಮದ ಮುಂದೆ ಬಂದು ಉತ್ತರಿಸುವ ಅಗತ್ಯವಿಲ್ಲ.
ಅಷ್ಟಕ್ಕೂ ಯಾರನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ನೀವು ಇಂತಹ ಅಪ್ಪಣೆ ಕೊಡಿಸಿದಿರಿ? ಸ್ವಲ್ಪ ಯೋಚಿಸಿ ನೋಡಿ. ನ್ಯಾಯ-ಅನ್ಯಾಯದ ಮತ್ತೊಂದು ಮುಖ ನಿಮಗೇ ಪರಿಚಯವಾದೀತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications