ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡ ಮೂರನೇ ದರ್ಜೆ

ಬೆಂಗಳೂರು ವಿಮಾನ ನಿಲ್ದಾಣದ ಕನ್ನಡ-ಕನ್ನಡಿಗ-ಕರ್ನಾಟಕ ವಿರೋಧಿ ಧೋರಣೆಯ ಕೆಲವು ಸ್ಯಾಂಪಲ್ ಗಳನ್ನು ಒಮ್ಮೆ ಗಮನಿಸಿ.
1. ವಿಮಾನ ನಿಲ್ದಾಣದಲ್ಲಿನ ಪಾರ್ಕಿಂಗ್ ಸ್ಟಿಕ್ಕರ್ ಗಳು ಕೇವಲ ಇಂಗ್ಲಿಷ್ನಲ್ಲಿವೆ.
2. ಸೂಚನಾ ಫಲಕಗಳಲ್ಲಿ ಕನ್ನಡವನ್ನು ಬಳಸಿದ್ದರೂ, ಕನ್ನಡಕ್ಕೆ ಕೊನೆಯ ಸ್ತಾನ ನೀಡಲಾಗಿದ್ದು, ಎಷ್ಟಾಗುತ್ತೋ ಅಷ್ಟು ಸಣ್ಣಕ್ಷರಗಳಲ್ಲಿ ಕಾಟಾಚಾರಕ್ಕೆ ಬರೆಸಿದ್ದಾರೆ.
3. ವಿಮಾನ ನಿಲ್ದಾಣದಲ್ಲಿರುವ ಕಾವಲುಗಾರರೊಡನೆ ಕನ್ನಡದಲ್ಲಿ ಮಾತನಾಡಿ ಅವರಿಂದ ಬೈಯಿಸಿಕೊಂಡ ಉದಾಹರಣೆಗಳಿವೆ.
4. ಹೊರಡುವ ಮತ್ತು ಬರುವ ವಿಮಾನಗಳ ಬಗ್ಗೆ ಟಿವಿಗಳಲ್ಲಿ ತೋರಿಸುವ ಮಾಹಿತಿ ಬರಿ ಇಂಗ್ಲಿಷ್ /ಹಿಂದಿಯಲ್ಲಿರುತ್ತದೆ.
5. ವಿಮಾನ ನಿಲ್ದಾಣದ ಒಳಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಸೂಚನೆಗಳನ್ನು ನೀಡಲಾಗುತ್ತಿದೆ.
6. ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳಗೆ ಇರುವ ಸ್ತಾನದ ಬಗ್ಗೆ ಹೇಳುವುದೇ ಬೇಡ.
ಹೀಗೆ ಇನ್ನೂ ಹಲವೆಡೆಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿಗೆ ಮನ್ನಣೆ ನೀಡಿ ಕನ್ನಡ ಭಾಷೆವನ್ನು ಹಿಂದಕ್ಕೆ ತಳ್ಳಲಾಗಿದೆ.
ಒಟ್ಟಾರೆಯಾಗಿ ಗಮನಿಸಿದರೆ, ಕನ್ನಡ-ಕನ್ನಡಿಗ-ಕರ್ನಾಟಕವನ್ನು ವಿಮಾನ ನಿಲ್ದಾಣದಲ್ಲಿ ಮೂರನೇ ದರ್ಜೆಯಂತೆ ನೋಡಲಾಗುತ್ತಿದೆ. ಕನ್ನಡಕ್ಕೆ ಬರೆ ಹಾಕಿ ಪರ ಭಾಷೆಗೆ ಮನ್ನಣೆ ನೀಡಲಾಗಿರುವುದು ನಿಜಕ್ಕೂ ದುರಂತವೇ ರಿ. ಜಗತ್ತಿನ ಹಲವಾರು ದೇಶಗಳಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನೋಡಿದಾಗ ಅಲ್ಲೆಲ್ಲೂ ಅಂತಾರಾಷ್ಟ್ರೀಯ ಎಂದ ಮಾತ್ರಕ್ಕೆ ತಮ್ಮತನವನ್ನು ಮರೆತಿರುವುದು ಕಾಣುವುದಿಲ್ಲ. ಸ್ಥಳೀಯರಿಗೆ, ಸ್ಥಳೀಯ ಭಾಷೆಗೆ ಮನ್ನಣೆ ನೀಡುವುದರ ಮೂಲಕ ತಮ್ಮ ನಾಡಿನ ಜನರಿಗೆ ಉಪಯೋಗವಾಗುವಂತೆ ವ್ಯವಸ್ತೆಯನ್ನು ರೂಪಿಸಿದ್ದಾರೆ. ಆದರೆ, ನಮ್ಮ ವಿಮಾನ ನಿಲ್ದಾಣಕ್ಕೆ ನಮ್ಮ ನಾಡಿನ ಜನರು ಹೋಗಬೇಕೆಂದರೆ ಇಂಗ್ಲಿಷ್ ಅಥವಾ ಹಿಂದಿಯನ್ನು ಕಲಿತು ಹೋಗಬೇಕೆನ್ನುವ ಅನಿವಾರ್ಯತೆಯನ್ನು ನಿರ್ಮಿಸಿದ್ದಾರೆ. ಇದು ಏಕೆ ಎಂದು ಪ್ರಶ್ನಿಸುವ ಕನ್ನಡದ ಪ್ರಯಾಣಿಕರಿಗೆ ನಿಲ್ದಾಣದ ಅಧಿಕಾರಿಗಳು ಉದ್ದಟತನದ ಉತ್ತರಗಳನ್ನೂ ನೀಡಿರುವ ಉದಾಹರಣೆಗಳಿವೆ.
ಅಂತಾರಾಷ್ಟ್ರೀಯ ಅಂತ ಹೆಸರನ್ನು ಇಟ್ಟುಕೊಂಡ ಮಾತ್ರಕ್ಕೆ ನಮ್ಮತನವನ್ನು ಬಿಟ್ಟುಕೊಡುವುದು ಯಾತಕ್ಕಾಗಿ? ಅಂತಾರಾಷ್ಟ್ರೀಯವೇ ಆಗಿರಲಿ, ಮತ್ತೊಂದಾಗಲಿ ಕೊನೆಗೆ ವಿಮಾನ ನಿಲ್ದಾಣವಿರುವುದು ಕನ್ನಡದ ನೆಲದಲ್ಲೆ ಎನ್ನುವುದನ್ನು ಮರೆಯಬಾರದು. ಇದನ್ನು ಮರೆತಿರುವ ವಿಮಾನ ನಿಲ್ದಾಣಕ್ಕೆ ಮತ್ತು ಸರಕಾರದವರಿಗೆ ಪತ್ರ ಬರೆದು ಕನ್ನಡದ ನೆಲದಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಮೊದಲ ಸ್ತಾನ ಸಿಕ್ಕೇ ಸಿಗಬೇಕು ಎನ್ನುವುದನ್ನು ತಿಳಿಸೋಣ. ವಿಮಾನ ನಿಲ್ದಾಣದ ಮತ್ತು ಕರ್ನಾಟಕ ಸರಕಾರದ ಮುಕ್ಯಮಂತ್ರಿಗಳ ಮಿಂಚೆ- [email protected], [email protected].
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications