ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡ ಮೂರನೇ ದರ್ಜೆ

ಬೆಂಗಳೂರು ವಿಮಾನ ನಿಲ್ದಾಣದ ಕನ್ನಡ-ಕನ್ನಡಿಗ-ಕರ್ನಾಟಕ ವಿರೋಧಿ ಧೋರಣೆಯ ಕೆಲವು ಸ್ಯಾಂಪಲ್ ಗಳನ್ನು ಒಮ್ಮೆ ಗಮನಿಸಿ.
1. ವಿಮಾನ ನಿಲ್ದಾಣದಲ್ಲಿನ ಪಾರ್ಕಿಂಗ್ ಸ್ಟಿಕ್ಕರ್ ಗಳು ಕೇವಲ ಇಂಗ್ಲಿಷ್ನಲ್ಲಿವೆ.
2. ಸೂಚನಾ ಫಲಕಗಳಲ್ಲಿ ಕನ್ನಡವನ್ನು ಬಳಸಿದ್ದರೂ, ಕನ್ನಡಕ್ಕೆ ಕೊನೆಯ ಸ್ತಾನ ನೀಡಲಾಗಿದ್ದು, ಎಷ್ಟಾಗುತ್ತೋ ಅಷ್ಟು ಸಣ್ಣಕ್ಷರಗಳಲ್ಲಿ ಕಾಟಾಚಾರಕ್ಕೆ ಬರೆಸಿದ್ದಾರೆ.
3. ವಿಮಾನ ನಿಲ್ದಾಣದಲ್ಲಿರುವ ಕಾವಲುಗಾರರೊಡನೆ ಕನ್ನಡದಲ್ಲಿ ಮಾತನಾಡಿ ಅವರಿಂದ ಬೈಯಿಸಿಕೊಂಡ ಉದಾಹರಣೆಗಳಿವೆ.
4. ಹೊರಡುವ ಮತ್ತು ಬರುವ ವಿಮಾನಗಳ ಬಗ್ಗೆ ಟಿವಿಗಳಲ್ಲಿ ತೋರಿಸುವ ಮಾಹಿತಿ ಬರಿ ಇಂಗ್ಲಿಷ್ /ಹಿಂದಿಯಲ್ಲಿರುತ್ತದೆ.
5. ವಿಮಾನ ನಿಲ್ದಾಣದ ಒಳಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಸೂಚನೆಗಳನ್ನು ನೀಡಲಾಗುತ್ತಿದೆ.
6. ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳಗೆ ಇರುವ ಸ್ತಾನದ ಬಗ್ಗೆ ಹೇಳುವುದೇ ಬೇಡ.
ಹೀಗೆ ಇನ್ನೂ ಹಲವೆಡೆಗಳಲ್ಲಿ ಇಂಗ್ಲಿಷ್ ಮತ್ತು ಹಿಂದಿಗೆ ಮನ್ನಣೆ ನೀಡಿ ಕನ್ನಡ ಭಾಷೆವನ್ನು ಹಿಂದಕ್ಕೆ ತಳ್ಳಲಾಗಿದೆ.
ಒಟ್ಟಾರೆಯಾಗಿ ಗಮನಿಸಿದರೆ, ಕನ್ನಡ-ಕನ್ನಡಿಗ-ಕರ್ನಾಟಕವನ್ನು ವಿಮಾನ ನಿಲ್ದಾಣದಲ್ಲಿ ಮೂರನೇ ದರ್ಜೆಯಂತೆ ನೋಡಲಾಗುತ್ತಿದೆ. ಕನ್ನಡಕ್ಕೆ ಬರೆ ಹಾಕಿ ಪರ ಭಾಷೆಗೆ ಮನ್ನಣೆ ನೀಡಲಾಗಿರುವುದು ನಿಜಕ್ಕೂ ದುರಂತವೇ ರಿ. ಜಗತ್ತಿನ ಹಲವಾರು ದೇಶಗಳಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನೋಡಿದಾಗ ಅಲ್ಲೆಲ್ಲೂ ಅಂತಾರಾಷ್ಟ್ರೀಯ ಎಂದ ಮಾತ್ರಕ್ಕೆ ತಮ್ಮತನವನ್ನು ಮರೆತಿರುವುದು ಕಾಣುವುದಿಲ್ಲ. ಸ್ಥಳೀಯರಿಗೆ, ಸ್ಥಳೀಯ ಭಾಷೆಗೆ ಮನ್ನಣೆ ನೀಡುವುದರ ಮೂಲಕ ತಮ್ಮ ನಾಡಿನ ಜನರಿಗೆ ಉಪಯೋಗವಾಗುವಂತೆ ವ್ಯವಸ್ತೆಯನ್ನು ರೂಪಿಸಿದ್ದಾರೆ. ಆದರೆ, ನಮ್ಮ ವಿಮಾನ ನಿಲ್ದಾಣಕ್ಕೆ ನಮ್ಮ ನಾಡಿನ ಜನರು ಹೋಗಬೇಕೆಂದರೆ ಇಂಗ್ಲಿಷ್ ಅಥವಾ ಹಿಂದಿಯನ್ನು ಕಲಿತು ಹೋಗಬೇಕೆನ್ನುವ ಅನಿವಾರ್ಯತೆಯನ್ನು ನಿರ್ಮಿಸಿದ್ದಾರೆ. ಇದು ಏಕೆ ಎಂದು ಪ್ರಶ್ನಿಸುವ ಕನ್ನಡದ ಪ್ರಯಾಣಿಕರಿಗೆ ನಿಲ್ದಾಣದ ಅಧಿಕಾರಿಗಳು ಉದ್ದಟತನದ ಉತ್ತರಗಳನ್ನೂ ನೀಡಿರುವ ಉದಾಹರಣೆಗಳಿವೆ.
ಅಂತಾರಾಷ್ಟ್ರೀಯ ಅಂತ ಹೆಸರನ್ನು ಇಟ್ಟುಕೊಂಡ ಮಾತ್ರಕ್ಕೆ ನಮ್ಮತನವನ್ನು ಬಿಟ್ಟುಕೊಡುವುದು ಯಾತಕ್ಕಾಗಿ? ಅಂತಾರಾಷ್ಟ್ರೀಯವೇ ಆಗಿರಲಿ, ಮತ್ತೊಂದಾಗಲಿ ಕೊನೆಗೆ ವಿಮಾನ ನಿಲ್ದಾಣವಿರುವುದು ಕನ್ನಡದ ನೆಲದಲ್ಲೆ ಎನ್ನುವುದನ್ನು ಮರೆಯಬಾರದು. ಇದನ್ನು ಮರೆತಿರುವ ವಿಮಾನ ನಿಲ್ದಾಣಕ್ಕೆ ಮತ್ತು ಸರಕಾರದವರಿಗೆ ಪತ್ರ ಬರೆದು ಕನ್ನಡದ ನೆಲದಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಮೊದಲ ಸ್ತಾನ ಸಿಕ್ಕೇ ಸಿಗಬೇಕು ಎನ್ನುವುದನ್ನು ತಿಳಿಸೋಣ. ವಿಮಾನ ನಿಲ್ದಾಣದ ಮತ್ತು ಕರ್ನಾಟಕ ಸರಕಾರದ ಮುಕ್ಯಮಂತ್ರಿಗಳ ಮಿಂಚೆ- [email protected], [email protected].
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications