ಕನ್ನಡಿಗರಿಗೇ ಉದ್ಯೋಗ, ಆನ್ ಲೈನ್ ಆಂದೋಲನ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಸಿಗಬೇಕು ಅನ್ನುವ ಸಾಮಾನ್ಯ ಕನ್ನಡಿಗರ ಬಯಕೆಗೆ ಪೂರಕವಾಗಿರೋ ವರದಿ ಅಂದರೆ "ಸರೋಜಿನಿ ಮಹಿಷಿ ವರದಿ" .
1983ರಲ್ಲಿ ರಚಿಸಿದ ಡಾ.ಸರೋಜಿನಿ ಮಹಿಷಿ ಸಮಿತಿಯು ಕರ್ನಾಟಕದಲ್ಲಿನ ಎಲ್ಲಾ ಖಾಸಗಿ, ಸರ್ಕಾರಿ ವಲಯದ ಎಲ್ಲಾ ಹಂತಗಳ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಕೊಡಿಸುವತ್ತ ಹಲವಾರು ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ 1986ರಲ್ಲೇ ಸಲ್ಲಿಸಿದೆ. ನೋವಿನ ಸಂಗತಿಯೆಂದರೆ ವರದಿ ಬಂದು 26 ವರ್ಷವಾದರೂ ಅದು ಪೂರ್ತಿ ಜಾರಿಯಾಗಿಲ್ಲ.
ಬೆಂಗಳೂರಿನಲ್ಲಿ ಹಿರಿಯ ನಾಗರೀಕರಾದ ಶ್ರೀಮತಿ ವಿನುತಾ ರವರು ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕೆಂದು ಅನ್ನುವ ನಿಟ್ಟಿನಲ್ಲಿ ದುಡಿಯುತ್ತಿದ್ದಾರೆ. ಹಲವಾರು ಸಂಘಸಂಸ್ಥೆಗಳನ್ನು ಭೇಟಿ ಮಾಡಿ, ಜನಾಭಿಪ್ರಾಯ ಮೂಡಿಸಿ ಈ ವರದಿ ಕಾಯ್ದೆಯಾಗಬೇಕ್ಕೆನ್ನುವ ಬಯಕೆ ವಿನುತಾ ರವರದು. ನಿಜಕ್ಕೂ ಇಂಥವರು ಕನ್ನಡ ಯುವ ಪೀಳಿಗೆಗೆ ಆದರ್ಶವೇ ಸರಿ.
ಈ ಹಿಂದೆ ಅವರು ಮೊಬೈಲ್ ಎಸ್.ಎಂ.ಎಸ್ ಅಭಯಾನ ನಡೆಸಿ ಸುಮಾರು 10,000ಕ್ಕೂ ಹೆಚ್ಚು ಎಸ್.ಎಂ.ಎಸ್ ಗಳನ್ನು ಸಂಗ್ರಹಿಸಿದ್ದಾರೆ. ಇದೀಗ ಅಂತರ್ಜಾಲದಲ್ಲಿ ಆನ್ಲೈನ್ ಸಹಿ ಸಂಗ್ರಹದ ಮೂಲಕ ತಮ್ಮ ಈ ಅಭಿಯಾನಕ್ಕೆ ಇನ್ನಷ್ಟು ಬಲ ದಕ್ಕಿಸಿಕೊಳ್ಳಬೇಕೆನ್ನುವ ಹಂಬಲ ಅವರದಾಗಿದೆ.
ಈ ಆನ್ಲೈನ್ ಸಹಿ ಸಂಗ್ರಹದ ಮೂಲಕ ಮಾಡುವ ಮೂರು ಹಕ್ಕೊತ್ತಾಯಗಳು ಈ ರೀತಿಯಾಗಿವೆ:
1) ಇಂದಿಗೆ ಹೊಂದುವಂತೆ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಲು ತಜ್ಞರ ಸಮಿತಿ ರಚಿಸಬೇಕು.
2) ಹೊಸ ಸಮಿತಿಯ ಶಿಫಾರಸ್ಸಿನನ್ವಯ ಪರಿಷ್ಕರಿಸಿದ ಸರೋಜಿನಿ ಮಹಿಷಿ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಕಾನೂನಿನ ಮಾನ್ಯತೆ ಒದಗಿಸಬೇಕು.
3) ಹೊಸ ವರದಿಯ ಅನ್ವಯ ಕರ್ನಾಟಕದಲ್ಲಿನ ಎಲ್ಲಾ ಉದ್ಯೋಗಗಳಲ್ಲಿ ಸಿಂಹಪಾಲು ಕನ್ನಡಿಗರಿಗೆ ಸಿಗುವಂತೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
ಸಾಮಾನ್ಯ ಕನ್ನಡಿಗರಿಗೆ ವಿನುತಾ ರವರಿಗಿಂತ ಬೇರೆ ಸ್ಪೂರ್ತಿ ಬೇಕಿದೆಯೇ? ನಮಗೆ ನಿಜವಾಗಿಯೂ ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಕೆಲಸ ಸಿಗಬೇಕು ಅನ್ನುವ ಅಭಿಮಾನವಿದ್ದರೇ, ನಾವು ಈ ಸಹಿ ಸಂಗ್ರಹಕ್ಕೆ ನಮ್ಮ ಕೈ ಜೋಡಿಸಬೇಕು. ನಮ್ಮ ಗೆಳೆಯರು, ನೆಂಟರಿಷ್ಟರು, ಪರಿಚಯಸ್ತರಿಗೆ ಇದರ ಬಗ್ಗೆ ಹೇಳಿ ಅವರೂ ಸಹಿ ಹಾಕುವಂತೆ ಮಾಡಬೇಕು.
ಈ ಕೊಂಡಿಯಲ್ಲಿ ಆನ್ಲೈನ್ ಪಿಟಿಶನ್ ಇದೆ. ಇಲ್ಲಿ ಸಹಿ ಹಾಕಿ, ಹಾಕಿಸಿ ಕರ್ನಾಟಕದ ಪರವಾದ, ಕನ್ನಡಿಗರಿಗೋಸ್ಕರ ನಮ್ಮ ಅಳಿಲು ಸೇವೆಯನ್ನು ಸಲ್ಲಿಸೋಣ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications