ಕನ್ನಡಿಗರಿಗೇ ಉದ್ಯೋಗ, ಆನ್ ಲೈನ್ ಆಂದೋಲನ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಸಿಗಬೇಕು ಅನ್ನುವ ಸಾಮಾನ್ಯ ಕನ್ನಡಿಗರ ಬಯಕೆಗೆ ಪೂರಕವಾಗಿರೋ ವರದಿ ಅಂದರೆ "ಸರೋಜಿನಿ ಮಹಿಷಿ ವರದಿ" .
1983ರಲ್ಲಿ ರಚಿಸಿದ ಡಾ.ಸರೋಜಿನಿ ಮಹಿಷಿ ಸಮಿತಿಯು ಕರ್ನಾಟಕದಲ್ಲಿನ ಎಲ್ಲಾ ಖಾಸಗಿ, ಸರ್ಕಾರಿ ವಲಯದ ಎಲ್ಲಾ ಹಂತಗಳ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಕೊಡಿಸುವತ್ತ ಹಲವಾರು ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ 1986ರಲ್ಲೇ ಸಲ್ಲಿಸಿದೆ. ನೋವಿನ ಸಂಗತಿಯೆಂದರೆ ವರದಿ ಬಂದು 26 ವರ್ಷವಾದರೂ ಅದು ಪೂರ್ತಿ ಜಾರಿಯಾಗಿಲ್ಲ.
ಬೆಂಗಳೂರಿನಲ್ಲಿ ಹಿರಿಯ ನಾಗರೀಕರಾದ ಶ್ರೀಮತಿ ವಿನುತಾ ರವರು ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕೆಂದು ಅನ್ನುವ ನಿಟ್ಟಿನಲ್ಲಿ ದುಡಿಯುತ್ತಿದ್ದಾರೆ. ಹಲವಾರು ಸಂಘಸಂಸ್ಥೆಗಳನ್ನು ಭೇಟಿ ಮಾಡಿ, ಜನಾಭಿಪ್ರಾಯ ಮೂಡಿಸಿ ಈ ವರದಿ ಕಾಯ್ದೆಯಾಗಬೇಕ್ಕೆನ್ನುವ ಬಯಕೆ ವಿನುತಾ ರವರದು. ನಿಜಕ್ಕೂ ಇಂಥವರು ಕನ್ನಡ ಯುವ ಪೀಳಿಗೆಗೆ ಆದರ್ಶವೇ ಸರಿ.
ಈ ಹಿಂದೆ ಅವರು ಮೊಬೈಲ್ ಎಸ್.ಎಂ.ಎಸ್ ಅಭಯಾನ ನಡೆಸಿ ಸುಮಾರು 10,000ಕ್ಕೂ ಹೆಚ್ಚು ಎಸ್.ಎಂ.ಎಸ್ ಗಳನ್ನು ಸಂಗ್ರಹಿಸಿದ್ದಾರೆ. ಇದೀಗ ಅಂತರ್ಜಾಲದಲ್ಲಿ ಆನ್ಲೈನ್ ಸಹಿ ಸಂಗ್ರಹದ ಮೂಲಕ ತಮ್ಮ ಈ ಅಭಿಯಾನಕ್ಕೆ ಇನ್ನಷ್ಟು ಬಲ ದಕ್ಕಿಸಿಕೊಳ್ಳಬೇಕೆನ್ನುವ ಹಂಬಲ ಅವರದಾಗಿದೆ.
ಈ ಆನ್ಲೈನ್ ಸಹಿ ಸಂಗ್ರಹದ ಮೂಲಕ ಮಾಡುವ ಮೂರು ಹಕ್ಕೊತ್ತಾಯಗಳು ಈ ರೀತಿಯಾಗಿವೆ:
1) ಇಂದಿಗೆ ಹೊಂದುವಂತೆ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಲು ತಜ್ಞರ ಸಮಿತಿ ರಚಿಸಬೇಕು.
2) ಹೊಸ ಸಮಿತಿಯ ಶಿಫಾರಸ್ಸಿನನ್ವಯ ಪರಿಷ್ಕರಿಸಿದ ಸರೋಜಿನಿ ಮಹಿಷಿ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಕಾನೂನಿನ ಮಾನ್ಯತೆ ಒದಗಿಸಬೇಕು.
3) ಹೊಸ ವರದಿಯ ಅನ್ವಯ ಕರ್ನಾಟಕದಲ್ಲಿನ ಎಲ್ಲಾ ಉದ್ಯೋಗಗಳಲ್ಲಿ ಸಿಂಹಪಾಲು ಕನ್ನಡಿಗರಿಗೆ ಸಿಗುವಂತೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.
ಸಾಮಾನ್ಯ ಕನ್ನಡಿಗರಿಗೆ ವಿನುತಾ ರವರಿಗಿಂತ ಬೇರೆ ಸ್ಪೂರ್ತಿ ಬೇಕಿದೆಯೇ? ನಮಗೆ ನಿಜವಾಗಿಯೂ ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಕೆಲಸ ಸಿಗಬೇಕು ಅನ್ನುವ ಅಭಿಮಾನವಿದ್ದರೇ, ನಾವು ಈ ಸಹಿ ಸಂಗ್ರಹಕ್ಕೆ ನಮ್ಮ ಕೈ ಜೋಡಿಸಬೇಕು. ನಮ್ಮ ಗೆಳೆಯರು, ನೆಂಟರಿಷ್ಟರು, ಪರಿಚಯಸ್ತರಿಗೆ ಇದರ ಬಗ್ಗೆ ಹೇಳಿ ಅವರೂ ಸಹಿ ಹಾಕುವಂತೆ ಮಾಡಬೇಕು.
ಈ ಕೊಂಡಿಯಲ್ಲಿ ಆನ್ಲೈನ್ ಪಿಟಿಶನ್ ಇದೆ. ಇಲ್ಲಿ ಸಹಿ ಹಾಕಿ, ಹಾಕಿಸಿ ಕರ್ನಾಟಕದ ಪರವಾದ, ಕನ್ನಡಿಗರಿಗೋಸ್ಕರ ನಮ್ಮ ಅಳಿಲು ಸೇವೆಯನ್ನು ಸಲ್ಲಿಸೋಣ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications