ಕನ್ನಡ ಶೀರ್ಷಿಕೆ ಚಿತ್ರಕ್ಕೆ ಮಾತ್ರ ತೆರಿಗೆ ವಿನಾಯತಿ ಕೊಡಿ
ಇಂಗ್ಲೀಷ್ ಶೀರ್ಷಿಕೆಯಲ್ಲಿ ನಿರ್ಮಾಣಗೊಳ್ಳುವ ಹಾಗೂ ಭಾಷಾ ಗುಣಮಟ್ಟ ಕಾಯ್ದುಕೊಳ್ಳದ ಕನ್ನಡ ಚಲನಚಿತ್ರಗಳಿಗೆ ಸಹಾಯಧನ ಹಾಗೂ ತೆರಿಗೆ ರಿಯಾಯಿತಿ ನೀಡದಂತೆ ಆಗ್ರಹಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಪತ್ರ ಬರೆದಿರುವುದು ಉತ್ತಮ ಬೆಳವಣಿಗೆ. ಪಕ್ಕದ ತಮಿಳುನಾಡು ರಾಜ್ಯದಲ್ಲಿ ಚಿತ್ರಕರ್ಮಿಗಳು ಇಂಗ್ಲೀಷ್ ಶೀರ್ಷಿಕೆಗಳನ್ನು ಚಿತ್ರಗಳಿಗೆ ಇಡುವುದನ್ನು ಬಿಟ್ಟಿದ್ದಾರೆ. ಇದರಿಂದ ಅವರಿಗೆ ಅಂತಾರಾಷ್ಟ್ತೀಯ ಮಾರುಕಟ್ಟೆಯಲ್ಲಿ ನಷ್ಟವೇನು ಆಗಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಅಂಬರೀಷ್ ಹಾಗೂ ವಾರ್ತಾ ಸಚಿವ ಸಂತೋಷ್ ಲಾಡ್ ಅವರಿಗೆ ಮುಖ್ಯಮಂತ್ರಿ ಚಂದ್ರು ಅವರು ಬರೆದಿರುವ ಪತ್ರದಲ್ಲಿ "ಅನ್ಯ ಭಾಷೆಯ ಶಬ್ದದ ಶೀರ್ಷಿಕೆಗಳನ್ನು ಇಡುವುದು ಹಾಗೂ ಕನ್ನಡ ಭಾಷಾ ಗುಣಮಟ್ಟವನ್ನು ಕಾಯ್ದುಕೊಳ್ಳದೇ ಇರುವುದು ಕನ್ನಡ ವಿರೋಧಿ ನೀತಿಯೆಂದೇ ಪರಿಗಣಿಸಬೇಕು. ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಚಲನಚಿತ್ರ ಅಕಾಡೆಮಿಯೂ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಅಂಥ ಚಿತ್ರಗಳಿಗೆ ಸರ್ಕಾರ ನೀಡುವ ಸೌಲಭ್ಯ, ತೆರಿಗೆ ವಿನಾಯಿತಿ ಹಾಗೂ ಚಲಚಿತ್ರ ಪ್ರಶಸ್ತಿಯನ್ನು ಸರ್ಕಾರ ನೀಡಬಾರದು ಎಂದು ಒತ್ತಾಯಿಸಿದ್ದಾರೆ"

ತಮಿಳುನಾಡಿನಲ್ಲಿ ಕೂಡಾ ಆರಂಭದಲ್ಲಿ ತಮಿಳು ಶೀರ್ಷಿಕೆ ಇಟ್ಟರೆ ನಗರ ಕೇಂದ್ರಿತ ಪ್ರೇಕ್ಷಕರಿಗೆ ತಿಳಿಯುವುದಿಲ್ಲ, ವಿತರಕರು ಒಪ್ಪುವುದಿಲ್ಲ ಎಂಬ ಕೂಗೆದ್ದಿತ್ತು. ಆದರೆ, ತಮಿಳು ಶೀರ್ಷಿಕೆ ಇದ್ದರೆ ಮಾತ್ರ ಸರ್ಕಾರ ಅನುದಾನವನ್ನು ನೀಡುತ್ತದೆ ಇಲ್ಲದಿದ್ದರೆ ಇಲ್ಲ ಎಂದು ಕಡ್ಡಾಯವಾಗಿ ಅಲ್ಲಿನ ಸರ್ಕಾರ ನೀತಿ ರೂಪಿಸಿತು. ಅಲ್ಲದೆ, ಪಾರಂಪರಿಕ ಕಟ್ಟಡಗಳು ಹಾಗೂ ಪ್ರಮುಖ ತಾಣಗಳಲ್ಲಿ ಬೇಕಾಬಿಟ್ಟಿ ಚಿತ್ರೀಕರಣ ನಡೆಸಲು ಆಗದಂತೆ ನೋಡಿಕೊಳ್ಳಲಾಯಿತು. ಆದರೆ, ಕರ್ನಾಟಕದಲ್ಲಿ ವಿಶ್ವ ಪಾರಂಪರಿಕಾ ಪಟ್ಟಿಯಲ್ಲಿರುವ ಹಂಪಿಯಲ್ಲಿ ಅನುಮತಿ ಇಲ್ಲದೆ ಚಿತ್ರೀಕರಣವೊಂದು ನಡೆದಿರುವ ಬಗ್ಗೆ ಪತ್ರಿಕೆಯೊಂದು ವರದಿ ಮಾಡಿದೆ.
ತಮಿಳುನಾಡಿನಲ್ಲಿ ಇನ್ನೂ ಒಂದು ನಿಯಮ ಪಾಲಿಸಲಾಗುತ್ತಿದೆ. ಸೆನ್ಸಾರ್ ನಿಂದ 'ಯು' ಪ್ರಮಾಣಪತ್ರ ಪಡೆದ ಚಿತ್ರಗಳನ್ನು ಮಾತ್ರ ಅನುದಾನಕ್ಕೆ ಪರಿಗಣಿಸಲಾಗುತ್ತಿದೆ. ದೊಡ್ಡ ಸ್ಟಾರ್ ಗಳಿದ್ದರೂ 'ಎ' ಪ್ರಮಾಣ ಪತ್ರ ಚಿತ್ರವಾದರೆ ಸರ್ಕಾರದ ಸೌಲಭ್ಯಗಳು, ತೆರಿಗೆ ವಿನಾಯತಿ ಸಿಗುವುದಿಲ್ಲ. ನಮ್ಮಲ್ಲೂ ಈ ನಿಯಮ ಪಾಲಿಸಲು ಸಾಧ್ಯವೇ?
ಪ್ರಶಸ್ತಿ ವಿವಾದ: ಚಲನಚಿತ್ರ ಪ್ರಶಸ್ತಿ ವಿವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ನಂತರ ಸರ್ಕಾರಕ್ಕೆ ಈ ಪತ್ರ ತಲುಪಿದ್ದು, ಭಾಷಾ ಮೌಲ್ಯವನ್ನು ಕಾಪಾಡುವ ಹಾಗೂ ಸೃಜನಶೀಲತೆಯನ್ನು ಕಾಯ್ದುಕೊಳ್ಳುವ ಚಿತ್ರಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.
ಅದೇ ರೀತಿ ಟಿವಿ ಧಾರಾವಾಹಿಗಳ ಮೇಲೂ ನಿಯಂತ್ರಣ ಅಗತ್ಯ. ಟಿವಿ ಕಲಾವಿದರ ಅಸೋಸಿಯೇಶನ್ ಗೆ ಸರ್ಕಾರ ಈಗಾಗಲೇ 2 ಕೋಟಿ ಸಹಾಯಧನ ನೀಡಿದ್ದು ಅದು ಸದ್ಬಳಕೆಯಾಗುತ್ತಿದೆಯೇ? ಎಂಬ ಬಗ್ಗೆ ನಿಗಾ ವಹಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಒಬ್ಬ ಕಲಾವಿದನಾಗಿಯೂ ನಾನು ಈ ಬಗ್ಗೆ ಸ್ಪಂದಿಸಬೇಕಿದೆ. ಸಂದರ್ಭ ಬಂದರೆ ಇಂಗ್ಲಿಷ್ ಹಾಗೂ ಅನ್ಯ ಭಾಷಾ ಶೀರ್ಷಿಕೆ, ಸದಭಿರುಚಿ ಇಲ್ಲದ ಚಿತ್ರಗಳಲ್ಲಿ ಅಭಿನಯಿಸದೇ ಇರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ ಎಂಬ ದಿಟ್ಟ ನಿಲುವು ತಾಳೆದಿರುವುದು ಸ್ವಾಗತಾರ್ಹ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications