ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡವೇಕಿಲ್ಲ?
ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ಮಣಿದಿರುವ ಸರ್ಕಾರ ಕೊನೆಗೂ ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಮರು ನಾಮಕರಣ ಮಾಡಲು ಸಜ್ಜಾಗಿದೆ. ಡಿ.14ರಂದು ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ವಾಗಲಿವೆ. ಇದರೊಂದಿಗೆ ಕನ್ನಡಿಗರ ಮುಖ್ಯವಾಗಿ ಬೆಂಗಳೂರಿಗರ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರಿನೊಂದಿಗೆ ಅಲ್ಲಿನ ವಾತಾವರಣ ಕೂಡ ಬದಲಾವಣೆಯಾಬೇಕಾಗಿದೆ. ಏಕೆಂದರೆ ಸದ್ಯದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋದರೆ, ನಿಜವಾಗಿಯೂ ಅದು ಕರ್ನಾಟಕದಲ್ಲಿದೆಯಾ ಎಂದು ಸಂಶಯ ಉಂಟಾಗುತ್ತದೆ, ಏಕೆಂದರೆ ಅಲ್ಲಿ ಕನ್ನಡ ಸ್ಥಿತಿ ಹಾಗಿದೆ.

ವಿಮಾನ ನಿಲ್ದಾಣದ ಸುರಕ್ಷತೆ ಹೊಣೆ ಹೊತ್ತ ಭದ್ರತಾ ಸಿಬ್ಬಂದಿಗೆ ಕನ್ನಡ ಬರುವುದಿಲ್ಲ. ನಿಲ್ದಾಣದಲ್ಲಿರುವ ಎಲ್ಲಾ ಸೂಚನಾ ಫಲಕಗಳು ಇಂಗ್ಲೀಷ್ ಅಥವಾ ಹಿಂದಿಯಲ್ಲಿವೆ. ಕೆಲವು ಸೂಚನಾ ಪಲಕಗಳಲ್ಲಿ ಕನ್ನಡವನ್ನು ಬಳಸಲಾಗಿದೆ. ಆದರೆ, ಅದಕ್ಕೆ ಕೊನೆಯ ಸ್ಥಾನ ನೀಡಿರುವುದು ಕಾಟಾಚಾರಕ್ಕೆ ಎಂಬುದು ಸ್ಪಷ್ಟವಾಗುತ್ತದೆ. (ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು)
ಇನ್ನು ಬೆಂಗಳೂರಿನಿಂದ ಇತರ ರಾಜ್ಯದ ನಗರಗಳಿಗೆ-ಹೊರದೇಶಕ್ಕೆ ಹೋಗುವ ವಿಮಾನಗಳು ಹಾಗಿರಲಿ, ಬೆಂಗಳೂರು-ಮಂಗಳೂರು, ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ವಿಮಾನದಲ್ಲಿಯೂ ಕನ್ನಡ ಪತ್ರಿಕೆಗಳು, ಕನ್ನಡದಲ್ಲಿ ಗ್ರಾಹಕ ಸೇವೆ (ವಿಮಾನದಲ್ಲಿನ ಘೋಷಣೆ, ಸುರಕ್ಷತೆ ಮಾಹಿತಿ, ಇತ್ಯಾದಿ) ದೊರಕುತ್ತಿಲ್ಲ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹಣೆಪಟ್ಟಿ ಕಟ್ಟಿಕೊಂಡ ಮಾತ್ರಕ್ಕೆ ಇಂಗ್ಲೀಷ್ ಮಾತ್ರ ಇರಬೇಕು ಎಂದು ನಿಲ್ದಾಣದ ಅಧಿಕಾರಿಗಳು ತಪ್ಪು ತಿಳಿದುಕೊಂಡಂತಿದೆ. ಫ್ರಾನ್ಸ್, ಹಾಂಕಾಂಗ್ ಮತ್ತು ಜಪಾನ್ ನಿಲ್ದಾಣಗಳಲ್ಲಿ ಗ್ರಾಹಕ ಸೇವೆಯಿಂದ ಎಲ್ಲ ರೀತಿಯ ಮಾಹಿತಿಗಳು ಅವರವರ ಭಾಷೆಗಳಲ್ಲಿ ಮೊದಲು ದೊರೆಯುತ್ತದೆ. ನಾವೇಕೆ ಅವರಿಂದ ಇಂತಹ ಅಂಶಗಳನ್ನು ಕಲಿಯುವುದಿಲ್ಲ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಕನ್ನಡಕ್ಕೆ ಅಗತ್ಯ ಸ್ಥಾನಮಾನ ದೊರೆಯಬೇಕಾಗಿದೆ. ವಿಮಾನ ನಿಲ್ದಾಣದ ಹೆಸರು ಬದಲಾವಣೆ ಮಾಡುವ ಸರ್ಕಾರ ಅದರ ಅಲ್ಲಿ ಕನ್ನಡಕ್ಕೆ ಸೂಕ್ತ ಅವಕಾಶ ಕಲ್ಪಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕುರಿತು ಸರ್ಕಾರಕ್ಕೆ ಒತ್ತಾಯಿಸಬೇಕು.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications