ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡವೇಕಿಲ್ಲ?
ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ಮಣಿದಿರುವ ಸರ್ಕಾರ ಕೊನೆಗೂ ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಮರು ನಾಮಕರಣ ಮಾಡಲು ಸಜ್ಜಾಗಿದೆ. ಡಿ.14ರಂದು ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ವಾಗಲಿವೆ. ಇದರೊಂದಿಗೆ ಕನ್ನಡಿಗರ ಮುಖ್ಯವಾಗಿ ಬೆಂಗಳೂರಿಗರ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಸರಿನೊಂದಿಗೆ ಅಲ್ಲಿನ ವಾತಾವರಣ ಕೂಡ ಬದಲಾವಣೆಯಾಬೇಕಾಗಿದೆ. ಏಕೆಂದರೆ ಸದ್ಯದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋದರೆ, ನಿಜವಾಗಿಯೂ ಅದು ಕರ್ನಾಟಕದಲ್ಲಿದೆಯಾ ಎಂದು ಸಂಶಯ ಉಂಟಾಗುತ್ತದೆ, ಏಕೆಂದರೆ ಅಲ್ಲಿ ಕನ್ನಡ ಸ್ಥಿತಿ ಹಾಗಿದೆ.

ವಿಮಾನ ನಿಲ್ದಾಣದ ಸುರಕ್ಷತೆ ಹೊಣೆ ಹೊತ್ತ ಭದ್ರತಾ ಸಿಬ್ಬಂದಿಗೆ ಕನ್ನಡ ಬರುವುದಿಲ್ಲ. ನಿಲ್ದಾಣದಲ್ಲಿರುವ ಎಲ್ಲಾ ಸೂಚನಾ ಫಲಕಗಳು ಇಂಗ್ಲೀಷ್ ಅಥವಾ ಹಿಂದಿಯಲ್ಲಿವೆ. ಕೆಲವು ಸೂಚನಾ ಪಲಕಗಳಲ್ಲಿ ಕನ್ನಡವನ್ನು ಬಳಸಲಾಗಿದೆ. ಆದರೆ, ಅದಕ್ಕೆ ಕೊನೆಯ ಸ್ಥಾನ ನೀಡಿರುವುದು ಕಾಟಾಚಾರಕ್ಕೆ ಎಂಬುದು ಸ್ಪಷ್ಟವಾಗುತ್ತದೆ. (ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು)
ಇನ್ನು ಬೆಂಗಳೂರಿನಿಂದ ಇತರ ರಾಜ್ಯದ ನಗರಗಳಿಗೆ-ಹೊರದೇಶಕ್ಕೆ ಹೋಗುವ ವಿಮಾನಗಳು ಹಾಗಿರಲಿ, ಬೆಂಗಳೂರು-ಮಂಗಳೂರು, ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ವಿಮಾನದಲ್ಲಿಯೂ ಕನ್ನಡ ಪತ್ರಿಕೆಗಳು, ಕನ್ನಡದಲ್ಲಿ ಗ್ರಾಹಕ ಸೇವೆ (ವಿಮಾನದಲ್ಲಿನ ಘೋಷಣೆ, ಸುರಕ್ಷತೆ ಮಾಹಿತಿ, ಇತ್ಯಾದಿ) ದೊರಕುತ್ತಿಲ್ಲ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹಣೆಪಟ್ಟಿ ಕಟ್ಟಿಕೊಂಡ ಮಾತ್ರಕ್ಕೆ ಇಂಗ್ಲೀಷ್ ಮಾತ್ರ ಇರಬೇಕು ಎಂದು ನಿಲ್ದಾಣದ ಅಧಿಕಾರಿಗಳು ತಪ್ಪು ತಿಳಿದುಕೊಂಡಂತಿದೆ. ಫ್ರಾನ್ಸ್, ಹಾಂಕಾಂಗ್ ಮತ್ತು ಜಪಾನ್ ನಿಲ್ದಾಣಗಳಲ್ಲಿ ಗ್ರಾಹಕ ಸೇವೆಯಿಂದ ಎಲ್ಲ ರೀತಿಯ ಮಾಹಿತಿಗಳು ಅವರವರ ಭಾಷೆಗಳಲ್ಲಿ ಮೊದಲು ದೊರೆಯುತ್ತದೆ. ನಾವೇಕೆ ಅವರಿಂದ ಇಂತಹ ಅಂಶಗಳನ್ನು ಕಲಿಯುವುದಿಲ್ಲ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಕನ್ನಡಕ್ಕೆ ಅಗತ್ಯ ಸ್ಥಾನಮಾನ ದೊರೆಯಬೇಕಾಗಿದೆ. ವಿಮಾನ ನಿಲ್ದಾಣದ ಹೆಸರು ಬದಲಾವಣೆ ಮಾಡುವ ಸರ್ಕಾರ ಅದರ ಅಲ್ಲಿ ಕನ್ನಡಕ್ಕೆ ಸೂಕ್ತ ಅವಕಾಶ ಕಲ್ಪಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕುರಿತು ಸರ್ಕಾರಕ್ಕೆ ಒತ್ತಾಯಿಸಬೇಕು.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications