ರಕ್ಷಣಾ ವೇದಿಕೆಯಿಂದ #NoHindiSlavery ಟ್ವೀಟ್ ಅಭಿಯಾನ
ಕರ್ನಾಟಕ ರಾಜ್ಯದಲ್ಲಿ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಯ ಹಾವಳಿಯೇ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಸಿಆರ್ಪಿಎಫ್ ಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಉಪಯೋಗಿಸದೆ ಕೇವಲ ಹಿಂದಿಯಲ್ಲಿ ನಿರೂಪಣೆ ಮಾಡಿ ಮತ್ತು ಹಿಂದಿ ಭಾಷೆಯಲ್ಲಿ ಬ್ಯಾನರುಗಳನ್ನು ಬಳಸಿದ್ದಾರೆ ಕನ್ನಡದ ಒಂದಕ್ಷರವೂ ಎಲ್ಲಿಯೂ ಇಲ್ಲ.
ಇದರಿಂದ ನಮ್ಮ ರಾಜ್ಯದಲ್ಲಿ ನಮ್ಮ ಭಾಷೆಯ ಕೊರತೆ ಕಾಣುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಎಲ್ಲರೂ ಉಪಯೋಗಿಸಬೇಕು ಅದು ಕಡ್ಡಾಯವಾಗಬೇಕು ಎಂದು ಅರ್ಥವಾಗದೆ ಇರುವುದು ಮೂರ್ಖತನದ ಪರಮಾವಧಿ. ನಮ್ಮ ನಾಡಲ್ಲಿ ಇತರ ಭಾಷೆ ಬಿಟ್ಟು ಕನ್ನಡ ಭಾಷೆ ಬಳಸಬೇಕು ಎಂಬ ಆದೇಶವನ್ನು ಸರ್ಕಾರ ತರಬೇಕು. ಈ ಭದ್ರಾವತಿಯ ಸಿಆರ್ಪಿಎಫ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಸಚಿವರು ,ಸದಸ್ಯರು ,ಭಾಗವಹಿಸಿದ್ದರು ಕನ್ನಡ ಭಾಷೆ ಯಾಕೆ ಉಪಯೋಗಿಸಿಲ್ಲ ಎಂದು ಯಾರೊಬ್ಬರೂ ಪ್ರಶ್ನೆ ಮಾಡಿಲ್ಲ ವೆಂಬುದು ಅತ್ಯಂತ ಬೇಸರದ ವಿಷಯ.

ಮೊದಲು ನಮ್ಮ ಸರ್ಕಾರಕ್ಕೆ ನಮ್ಮ ಭಾಷೆಯ ಮೇಲೆ ಗೌರವ ಪ್ರೀತಿ ಹೆಮ್ಮೆ ಬರಬೇಕು ಆಗ ಮಾತ್ರ ಕನ್ನಡಿಗರ ಮೇಲೆ ಮತ್ತು ಕನ್ನಡ ಭಾಷೆಯ ಮೇಲೆ ಹಿಂದಿಯ ದೌರ್ಜನ್ಯವನ್ನು ತಡೆಯಲಾಗುತ್ತದೆ. ಈ ದೌರ್ಜನ್ಯವನ್ನು ತಡೆಯಲು ನಾವೆಲ್ಲ ಕನ್ನಡಿಗರು ಒಂದಾಗಬೇಕು, ನಮ್ಮ ಭಾಷೆ ನಮ್ಮ ನಾಡನ್ನು ನಾವೆಂದಿಗೂ ಕೈಬಿಡಬಾರದು ನಾವು ಹಿಂದಿ ಗುಲಾಮರಾಗಬಾರದು ಇವತ್ತು ನಾವು ಈ ಹಿಂದಿ ಭಾಷೆಯನ್ನು ತಡೆಯದಿದ್ದರೆ ಮುಂದೊಂದು ದಿನ ನಮ್ಮ ನಾಡಲ್ಲಿ ಕನ್ನಡಕ್ಕಿಂತ ಹೆಚ್ಚಾಗಿ ಹಿಂದಿ ಆಡಳಿತ ಮತ್ತು ಭಾಷೆ ಹೆಚ್ಚಾಗಿರುತ್ತದೆ ಇದಕ್ಕೆ ನಾವು ಆಸ್ಪದವನ್ನು ಕೊಡಬಾರದು ಆದ್ದರಿಂದ ಇಂದು ಕರ್ನಾಟಕ ರಕ್ಷಣಾ ವೇದಿಕೆಯು ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿ ಕಂಡಿದ್ದಾರೆ.
ನಾಡಿನ ಎಲ್ಲಾ ಕನ್ನಡಿಗರು ಇದಕ್ಕೆ ಕೈಜೋಡಿಸಿ ಹಿಂದಿ ಗುಲಾಮಗಿರಿಬೇಡ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವಿಟರ್ ಅಭಿಯಾನದಲ್ಲಿ ಭಾಗವಹಿಸಿ ಕನ್ನಡವನ್ನು ಉಳಿಸುವುದಕ್ಕೆ ಕೈಜೋಡಿಸಿ. ಜೈ ಕರ್ನಾಟಕ ಜೈ ಭುವನೇಶ್ವರಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications