ವಿದ್ಯಾಗಮ ಯೋಜನೆ ತರದಿರಲಿ ಅಪಾಯ, ಮುಂದೂಡಿಕೆಯೇ ಉಪಾಯ!
ಇಂದು ರಾಜ್ಯದಲ್ಲಿ ಅಧಿಕವಾಗಿ ವಿರೋಧ ವ್ಯಕ್ತಪಡಿಸಿತ್ತಿರುವ ವಿಷಯ ವೆಂದರೆ ಅದು ವಿದ್ಯಾಗಮ ಯೋಜನೆ. ಇದಕ್ಕೆ ವಠಾರ ಶಾಲೆ ಎಂದು ಕೂಡ ಕರೆಯುತ್ತಾರೆ. ಶಿಕ್ಷಕರೇ ಸ್ವತಃ ಮಕ್ಕಳ ಬಳಿ ಹೋಗಿ ಪಾಠ ಕಲಿಸುವ ವಿಧಾನ ಇದು. ವಿದ್ಯಾಗಮ ಯೋಜನೆ ಕಲಿಕೆ ಉದ್ದೇಶದಿಂದ ನೋಡಿದರೆ ಸರಿ. ಆದರೆ ಜೀವದ ವಿಷಯ ಬಂದರೆ ಯಾವುದು ದೊಡ್ಡದಲ್ಲ.
ಜೀವ ಇದ್ದರೇನೆ ಜೀವನ ಮತ್ತು ವಿದ್ಯೆ ಎಲ್ಲವೂ, ಆದ್ದರಿಂದ ಈ ಯೋಜನೆಯನ್ನು ವಿರೋಧಿಸುವ ಸಂದರ್ಭ ಬಂದಿದೆ. ಸದ್ಯದ ಸ್ಥಿತಿಯಲ್ಲಿ ಕೊರೊನಾ ಸಾಂಕ್ರಾಮಿಕಕ್ಕೆ ಲಸಿಕೆ ಇನ್ನು ಲಭ್ಯ ವಾಗಿಲ್ಲ ಇಂತಹ ಸಮಯದಲ್ಲಿ ವಿದ್ಯಾಗಮ ಜಾರಿ ಮಾಡುವುದು ಸರಿಯಲ್ಲ. ಈ ಯೋಜನೆಗೆ ಪೋಷಕರೇ ಅತಿ ಹೆಚ್ಚು ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ, ಅಷ್ಟೇ ಅಲ್ಲದೆ ಮಕ್ಕಳು ಶಿಕ್ಷಕರು ಸೇರಿ ವಿರೋಧ ಮಾಡುತ್ತಿದ್ದಾರೆ.
ಈಗಾಗಲೇ ಈ ಯೋಜನೆ ಹಲವೆಡೆ ಆರಂಭವಾಗಿದ್ದು ಇದಕ್ಕೆ ಶಿಕ್ಷಕರ ಪರವಾಗಿ ಸರ್ಕಾರವು ಕೊರೊನಾ ಪ್ಯಾಕೇಜ್ ನೀಡಲು ಘೋಷಣೆ ಮಾಡಬೇಕು, ಇದರಿಂದ ಒಂದು ಮಟ್ಟದಲ್ಲಿ ಶಿಕ್ಷಕರು ಸಮಾಧಾನದಿಂದ ಇರುತ್ತಾರೆ. ಇದು ಬರೀ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ ಇಡೀ ರಾಜ್ಯಕ್ಕೆ ಅಪಾಯಕಾರಿ. ಲಸಿಕೆ ಲಭ್ಯವಾಗುವವರೆಗೂ ತಾತ್ಕಾಲಿಕವಾಗಿ ಈ ಯೋಜನೆಯನ್ನು ನಿಲ್ಲಸಬೇಕು.

ಇನ್ನೂ ಖಾಸಗಿ ವಲಯದ ಎರಡು ಲಕ್ಷಕ್ಕೂ ಹೆಚ್ಚು ಶಿಕ್ಷಕರು ವೇತನೆ ಸಿಗದೆ ಪರದಾಡುತ್ತಿದ್ದಾರೆ. ಇವರು ಸರ್ಕಾರಕ್ಕೆ ಆರ್ಥಿಕ ಅನುಕೂಲ ಸಹಾಯವನ್ನು ಕೋರಿದ್ದಾರೆ ಇದಕ್ಕೂ ಕೂಡ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಬೇಕು. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸರ್ಕಾರವು ಸಾರ್ವಜನಿಕರ ಸುರಕ್ಷಿತ ದೃಷ್ಟಿಯಿಂದ ಈ ಯೋಜನೆ ಬಗ್ಗೆ ಹೆಚ್ಚು ಪರಿಶೀಲಿಸಿ ಇದಕ್ಕೆ ಸೂಕ್ತವಾದ ನಿರ್ಧಾರ ಕೈಗೊಳ್ಳಬೇಕು.
ದಿವ್ಯಶ್ರೀ. ವಿ
ಬೆಂಗಳೂರು
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications