ವಿದ್ಯಾಗಮ ಯೋಜನೆ ತರದಿರಲಿ ಅಪಾಯ, ಮುಂದೂಡಿಕೆಯೇ ಉಪಾಯ!
ಇಂದು ರಾಜ್ಯದಲ್ಲಿ ಅಧಿಕವಾಗಿ ವಿರೋಧ ವ್ಯಕ್ತಪಡಿಸಿತ್ತಿರುವ ವಿಷಯ ವೆಂದರೆ ಅದು ವಿದ್ಯಾಗಮ ಯೋಜನೆ. ಇದಕ್ಕೆ ವಠಾರ ಶಾಲೆ ಎಂದು ಕೂಡ ಕರೆಯುತ್ತಾರೆ. ಶಿಕ್ಷಕರೇ ಸ್ವತಃ ಮಕ್ಕಳ ಬಳಿ ಹೋಗಿ ಪಾಠ ಕಲಿಸುವ ವಿಧಾನ ಇದು. ವಿದ್ಯಾಗಮ ಯೋಜನೆ ಕಲಿಕೆ ಉದ್ದೇಶದಿಂದ ನೋಡಿದರೆ ಸರಿ. ಆದರೆ ಜೀವದ ವಿಷಯ ಬಂದರೆ ಯಾವುದು ದೊಡ್ಡದಲ್ಲ.
ಜೀವ ಇದ್ದರೇನೆ ಜೀವನ ಮತ್ತು ವಿದ್ಯೆ ಎಲ್ಲವೂ, ಆದ್ದರಿಂದ ಈ ಯೋಜನೆಯನ್ನು ವಿರೋಧಿಸುವ ಸಂದರ್ಭ ಬಂದಿದೆ. ಸದ್ಯದ ಸ್ಥಿತಿಯಲ್ಲಿ ಕೊರೊನಾ ಸಾಂಕ್ರಾಮಿಕಕ್ಕೆ ಲಸಿಕೆ ಇನ್ನು ಲಭ್ಯ ವಾಗಿಲ್ಲ ಇಂತಹ ಸಮಯದಲ್ಲಿ ವಿದ್ಯಾಗಮ ಜಾರಿ ಮಾಡುವುದು ಸರಿಯಲ್ಲ. ಈ ಯೋಜನೆಗೆ ಪೋಷಕರೇ ಅತಿ ಹೆಚ್ಚು ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ, ಅಷ್ಟೇ ಅಲ್ಲದೆ ಮಕ್ಕಳು ಶಿಕ್ಷಕರು ಸೇರಿ ವಿರೋಧ ಮಾಡುತ್ತಿದ್ದಾರೆ.
ಈಗಾಗಲೇ ಈ ಯೋಜನೆ ಹಲವೆಡೆ ಆರಂಭವಾಗಿದ್ದು ಇದಕ್ಕೆ ಶಿಕ್ಷಕರ ಪರವಾಗಿ ಸರ್ಕಾರವು ಕೊರೊನಾ ಪ್ಯಾಕೇಜ್ ನೀಡಲು ಘೋಷಣೆ ಮಾಡಬೇಕು, ಇದರಿಂದ ಒಂದು ಮಟ್ಟದಲ್ಲಿ ಶಿಕ್ಷಕರು ಸಮಾಧಾನದಿಂದ ಇರುತ್ತಾರೆ. ಇದು ಬರೀ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ ಇಡೀ ರಾಜ್ಯಕ್ಕೆ ಅಪಾಯಕಾರಿ. ಲಸಿಕೆ ಲಭ್ಯವಾಗುವವರೆಗೂ ತಾತ್ಕಾಲಿಕವಾಗಿ ಈ ಯೋಜನೆಯನ್ನು ನಿಲ್ಲಸಬೇಕು.

ಇನ್ನೂ ಖಾಸಗಿ ವಲಯದ ಎರಡು ಲಕ್ಷಕ್ಕೂ ಹೆಚ್ಚು ಶಿಕ್ಷಕರು ವೇತನೆ ಸಿಗದೆ ಪರದಾಡುತ್ತಿದ್ದಾರೆ. ಇವರು ಸರ್ಕಾರಕ್ಕೆ ಆರ್ಥಿಕ ಅನುಕೂಲ ಸಹಾಯವನ್ನು ಕೋರಿದ್ದಾರೆ ಇದಕ್ಕೂ ಕೂಡ ಸರ್ಕಾರ ಆದಷ್ಟು ಬೇಗ ಪರಿಹಾರ ನೀಡಬೇಕು. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸರ್ಕಾರವು ಸಾರ್ವಜನಿಕರ ಸುರಕ್ಷಿತ ದೃಷ್ಟಿಯಿಂದ ಈ ಯೋಜನೆ ಬಗ್ಗೆ ಹೆಚ್ಚು ಪರಿಶೀಲಿಸಿ ಇದಕ್ಕೆ ಸೂಕ್ತವಾದ ನಿರ್ಧಾರ ಕೈಗೊಳ್ಳಬೇಕು.
ದಿವ್ಯಶ್ರೀ. ವಿ
ಬೆಂಗಳೂರು
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications