ಸಂಪಾದಕರಿಗೆ ಪತ್ರ: ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದರೆ ಬರೀ ತೊಂದರೆ
ಬಿ.ಎಸ್ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಎಂಬ ನೂತನ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಬಳ್ಳಾರಿ ಜಿಲ್ಲಾ ಕೇಂದ್ರದಿಂದ ಕೆಲವೊಂದು ಪ್ರದೇಶಗಳು 200 ಕಿ.ಮೀ ದೂರ ಇದ್ದು, ಜನ ಸಾಮಾನ್ಯರಿಗೆ ತೊಂದರೆಯುಂಟಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಹೀಗಾಗಿ, ಆಡಳಿತ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆ ವಿಭಜನೆಗೆ ಸರ್ಕಾರ ಮುಂದಾಗಿದೆ.
ಬಳ್ಳಾರಿಯಲ್ಲಿ ಕುರುಗೋಡು, ಸಿರಗುಪ್ಪ, ಸಂಡೂರು ಹಾಗೂ ಕೂಡ್ಲಿಗಿ ತಾಲೂಕು ಉಳಿಸಿಕೊಳ್ಳಲಾಗುತ್ತದೆ. ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ಕೊಟ್ಟೂರು, ಹಡಗಲಿ ತಾಲೂಕುಗಳಿರಲಿವೆ.

ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹಡಗಲಿ ಸೇರಿ, ಹೊಸಪೇಟೆ ಯನ್ನು ಕೇಂದ್ರವಾಗಿಟ್ಟುಕೊಂಡು ಜಿಲ್ಲೆ ಮಾಡಿದ್ದಲ್ಲಿ, ಹಡಗಲಿ, ಹರಪನಹಳ್ಳಿ, ಕೊಟ್ಟೂರು ಭಾಗದ ಜನರು ತಮ್ಮ ಅಮೂಲ್ಯ ಸಮಯವನ್ನು ಮತ್ತದೇ ಸಂಚಾರದಲ್ಲಿ ಕಳೆಯ ಬೇಕಾದೀತು.
ಹೊಸಪೇಟೆ ಗಡಿ ಉದ್ದೇಶಿತ ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಇದ್ದು, ಒಂದು ಮೈ ಕೊಪ್ಪಳ ಜಿಲ್ಲೆ, ಇನ್ನೊಂದು ಮೈ ತುಂಗಭದ್ರಾ ನದಿ, ಮತ್ತೊಂದು ಮೈ ಗುಡ್ಡಗಳು, Archeological Survey of India ನಿಯಂತ್ರಿತ ಹಂಪಿ ಪ್ರದೇಶ ಜಿಲ್ಲಾ ಕೇಂದ್ರದ ಬೆಳವಣಿಗೆಗೆ ಅಡ್ಡಿ ಹಾಗೂ ಹಡಗಲಿ, ಹರಪನಹಳ್ಳಿ, ಕೊಟ್ಟೂರು ನಿಂದ ಅತೀ ದೂರದಲ್ಲಿದ್ದು ಹೊಸಪೇಟೆಯ ನ್ನು ಜಿಲ್ಲಾ ಕೇಂದ್ರವಾಗಿ ಮಾಡುವುದು ಅವೈಜ್ಞಾನಿಕ.
ಉದ್ದೇಶಿತ ಜಿಲ್ಲೆಯ ಮಧ್ಯ ಹಗರಬೊಮ್ಮನಹಳ್ಳಿ , ಇದು ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹಡಗಲಿ, ಹೊಸಪೇಟೆ ಗೆ ಸಮಾನ ದೂರದಲ್ಲಿದ್ದು, ಜಿಲ್ಲಾ ಕೇಂದ್ರಕ್ಕೆ ಬೇಕಾದ ಭೌಗೋಳಿಕ ಅರ್ಹತೆ ಹೊಂದಿದೆ.
ಉದ್ದೇಶಿತ ಜಿಲ್ಲೆಯ ಶಾಸಕರು, ಜನ ಪ್ರತಿನಿಧಿಗಳು, ಜನರು ಈ ಬಗ್ಗೆ ಗಮನ ಹರಿಸಬೇಕು. ಯಾವುದೇ ಚರ್ಚೆ ಇಲ್ಲದೇ ಹೊಸಪೇಟೆ ಯನ್ನೇ ಕೇಂದ್ರ ಮಾಡಬೇಕೆಂಬ ಹಿತಾಸಕ್ತಿಗಳ ಆಸೆಗೆ ಸ್ವಲ್ಪ ಬಿಸಿ ಮುಟ್ಟಿಸಬೇಕು.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications