'ಅಲೋಕ್ ಅವರೇ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ'
ನಿಮ್ಮೊಬ್ಬರದೇ ಅಲ್ಲಾ ಸ್ವಾಮಿ ಈ ಸಮಸ್ಯೆ. ಇಡೀ ನಮ್ಮ ರಾಜ್ಯ, ನಮ್ಮ ದೇಶ, ನಮ್ಮ ಈ ಭೂಮಿಯ ಮೇಲಿನ ಮನುಷ್ಯರೆಲ್ಲರೂ ಸ್ವಾರ್ಥಿಗಳೇ ಆಗಿರುವುದರಿಂದ, ಇಲ್ಲಿ ಸತ್ಯವಂತರಿಗೆ ಕಾಲವಿಲ್ಲ. 'ವೇದಾಂತ ಹೇಳಕ್ಕೇ ಇರೋದು, ಬದನೇಕಾಯಿ ತಿನ್ನಕ್ಕೇ ಇರೋದು' ಅಂತಾರಲ್ಲಾ ಹಾಗೆ.
ನಮ್ಮನ್ನು ನಾವು ಕಾಪಾಡಿಕೊಳ್ಳಲು ಸದಾ ಹೋರಾಡುತ್ತಿರಲೇಬೇಕು, ಸದಾ ಜಾಗೃತರಾಗಿರಲೇಬೇಕು. ಸ್ವಲ್ಪ ಯಾಮಾರಿದರೂ ಸಾಕು, ನಮ್ಮ ಬುಡವನ್ನೇ ಕಿತ್ತುಕೊಂಡು ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಬಿಡುತ್ತಾರೆ ದುರುಳರು, ಅಧಮರು, ಕಿರಾತಕರು, ತಲೆ ಹಿಡುಕರು.

You have to fight for your right. ನನ್ನ ಸ್ನೇಹಿತರಾಗಿದ್ದ ಗಂಧವಾಲೆ ಅನ್ನುವ ಅಧಿಕಾರಿಯೊಬ್ಬರು ಹೇಳುತ್ತಿದ್ದ ನುಡಿ ಮುತ್ತೊಂದು ನನಗೀಗ ಜ್ಞಾಪಕ ಬರುತ್ತಿದೆ. 'Offense is the best defense' ಅಂತ.
ಸಹೋದ್ಯೋಗಿಗಳೇ ಇರಲಿ, ಯಾರೇ ಆಗಲೀ, 'Be courteous to all, make friendship with few, try those few well and then give your confidence' ಈ ನಾಣ್ನುಡಿಯಂತೆ ನಮ್ಮನ್ನು ನಾವೇ ಜಾಗ್ರತೆಯಿಂದ ಕಾಪಾಡಿಕೊಳ್ಳುತ್ತಿರಲೇಬೇಕು - ನಮ್ಮ ಕಡೆಯ ಉಸಿರಿರುವರೆಗೆ.
ಕಲಿಯುಗದಲ್ಲಿ ಸ್ವಾರ್ಥಿಗಳೇ ತುಂಬಿ ಹೋಗಿರುವಾಗ ಸಂಭಾವಿತರೆಲ್ಲಿ ಸಿಗುತ್ತಾರೆ, ಸ್ವಾಮೀ ಅಲೋಕ್ ಕುಮಾರ್ ರವರೇ. ನೀವು ನಿಮ್ಮತನವನ್ನು ಕಾಪಾಡಿಕೊಳ್ಳಿ. ನಿಮ್ಮನ್ನು ನೀವು ಕಾಪಾಡಿಕೊಳ್ಳಿ. ಕೆಳಗೆ ಬಿದ್ದಾಗ ತಲೆಯ ಮೇಲೆ ಕಲ್ಲು ಹಾಕುವವರೇ ಈ ಲೋಕದಲ್ಲಿ ತುಂಬಿತುಳುಕುತ್ತಿರುವಾಗ, ಸ್ನೇಹ ಸಂಬಂಧಗಳು ಅರ್ಥ ಕಳೆದುಕೊಂಡು ದಶಕಗಳೇ ಆಗಿ ಹೋಗಿವೆ.
ತಮ್ಮ ಕೆಲಸ ಕಾರ್ಯಗಳ ಬಗ್ಗೆ ನಮಗೆ ಸಂತೋಷವಿದೆ. ತಮಗೆ ನನ್ನ ಹೃದಯಪೂರ್ವಕ ಆಶೀರ್ವಾದಗಳು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications