ಸಿದ್ದು ವೀಕೆಂಡ್ ಟೆಂಟ್ ಸಿನಿಮಾ ಗಂಭೀರವಾಗಿ ತಗೊಂಡಿಲ್ಲ
ಬೆಂಗಳೂರು, ಜೂನ್ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೀ ಕನ್ನಡ ವಾಹಿನಿಯ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಾಧಕರ ಸೀಟಿನಲ್ಲಿ ಕಾಣಿಸಿಕೊಂಡು, ಮಿಂಚಿ, ಅದರ ಬಗ್ಗೆ ಮಾತನಾಡಿಕೊಂಡಿದ್ದರ ಬಗ್ಗೆ ನಿಮ್ಮ ಗಮನಕ್ಕೆ ಬಂದಿರುತ್ತದೆ ಆ ಇಡೀ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಹೇಳಿಕೊಂಡ ಕೆಲವು ಮುಖ್ಯ ವಿಚಾರಗಳ ಬಗ್ಗೆ ಒನ್ ಇಂಡಿಯಾ ಕನ್ನಡದಲ್ಲಿ ವರದಿ ಆಗಿತ್ತು.
ಇನ್ನು ಆ ವರದಿಯನ್ನು ಆಧರಿಸಿ ಹಾಗೂ ಕಾರ್ಯಕ್ರಮದ ಬಗ್ಗೆ ಒನ್ ಇಂಡಿಯಾ ಓದುಗರಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ವೀಕೆಂಡ್ ವಿತ್ ರಮೇಶ್ ಬಗ್ಗೆ ನಿಮ್ಮ ಅನಿಸಿಕೆ ಏನು ಎಂದು ಕೇಳಲಾಗಿತ್ತು. ಅದರ ಫಲಿತಾಂಶವನ್ನು ನಿಮ್ಮೆದುರು ಇಡುತ್ತಿದ್ದೇವೆ.

ಜೂನ್ ಇಪ್ಪತ್ತೇಳರ ಸಂಜೆ ವೇಳೆ ಮೂರು ಸಾವಿರದ ಐವತ್ತೆಂಟು ಓದುಗರು ಮತ ಚಲಾವಣೆ ಆಗಿದೆ. ಆ ಪೈಕಿ ಸಾವಿರದ ಇಪ್ಪತ್ಮೂರು ಮತಗಳು ಬಿದ್ದಿರುವುದು ನಾವಿದನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂಬ ಆಯ್ಕೆಗೆ. ಇನ್ನು ಈ ಕಾರ್ಯಕ್ರಮವೇ ಮೊದಲು ಸಿದ್ಧ ಮಾಡಿಟ್ಟುಕೊಂಡ ಪ್ರಶ್ನೋತ್ತರ ಎಂದು ಎಂಟು ನೂರಾ ತೊಂಬತ್ಮೂರು ಮತ ಬಂದಿವೆ.
ವರ್ಚಸ್ಸು ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ ಅವರಿಗೆ ಒಂದೊಳ್ಳೆ ವೇದಿಕೆ ಆಯಿತು ಎಂದು ಆರುನೂರಾ ಮೂವತ್ತೆರಡು ಮತ ಬಿದ್ದಿವೆ. ಜನರನ್ನು ತಲುಪೋದಿಕ್ಕೆ ಹೀಗೊಂದು ಅವಕಾಶ ಎಂಬ ಆಯ್ಕೆಗೆ ಐನೂರಾ ಹತ್ತು ಮತ ಬಿದ್ದಿವೆ. ಈ ಕಾರ್ಯಕ್ರಮವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂಬುದಕ್ಕೆ ಹೆಚ್ಚು ಮತ ಬಿದ್ದಿವೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications