ಮೌಢ್ಯ ನಿಷೇಧ ಕಾಯ್ದೆ ಸ್ವಾಗತಿಸಿದ ಹುಲಿಕಲ್ ನಟರಾಜ್
ಪಟ್ಟಭದ್ರ ಹಿತಾಶಕ್ತಿಗಳ ಮಾತಿಗೆ ಮನ್ನಣೆ ಹಾಕದೆ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಮೌಢ್ಯ ನಿಷೇಧ ಜಾರಿಗೆ ತರುತ್ತಿರುವುದನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕಾರ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ್ ಅವರು ಸ್ವಾಗತಿಸಿದ್ದಾರೆ.
'ನಾನು 25 ವರ್ಷಗಳಿಂದ ಸತತವಾಗಿ ಮೂಢನಂಬಿಕೆಗಳ ವಿರುದ್ದ ಜನ ಜಾಗೃತಿ ಕೈಂಕರ್ಯದಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ಕಂಡು ಕೊಂಡದ್ದು ಮುಗ್ಧ, ವಿದ್ಯಾವಂತ, ಅಮಾಯಕ ಅವಿದ್ಯಾವಂತರೆನ್ನದೆ ಮೋಸ ಹೋಗಿ ತಮ್ಮ ಆಸ್ತಿ, ಹಣ, ಕಳೆದುಕೊಂಡಿದ್ದಲ್ಲದೆ ಮಾನಸಿಕ ದೈಹಿಕ ಜೀವಂತ ಶವವಾಗಿ ನರಳುತ್ತಿರುವ ಅದಷ್ಟೋ ಜನರು ಇಂದಿಗೂ ನಮ್ಮ ನಿಮ್ಮ ನಡುವೆ ಇದ್ದಾರೆ.
ಮೌಢ್ಯತೆಯ ಹೆಮ್ಮಾರಿಯಿಂದ ನರಳುತ್ತಿದ್ದ ಮಂದಿ ಹೊರಬಂದು ತೃಪ್ತಿಕರ ನೆಮ್ಮದಿ ಜೀವನ ಮಾಡುವಂತೆ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದೇನೆ. ಆದರೂ ಇನ್ನೂ ಅನೇಕ ಜನ ಅದರಲ್ಲೇ ಮುಳುಗಿ ಹೊರ ಬರಲಾಗದೆ ಸಾವನ್ನಪ್ಪುತ್ತಿದ್ದಾರೆ. ಮೌಢ್ಯತೆಯ ಮಾರಿಯಿಂದ ಹೊರಬರಬೇಕಾದರೆ ಮೌಢ್ಯ ನಿಷೇಧ ಕಾಯಿದೆಯಲ್ಲಿ ಇವುಗಳನ್ನೂ ಪರಿಗಣಿಸುವುದು ಉತ್ತಮ.
ಶೂನ್ಯದಿಂದ ವಸ್ತುಗಳ ಸೃಷ್ಟಿ: ಡೋಂಗಿ ದೇವಮಾನವರು ಮಾಡುವ ಪವಾಡಗಳು ಅಂದರೆ ಶೂನ್ಯದಿಂದ ವಸ್ತುಗಳ ಸೃಷ್ಟಿ ಮಾಡಿ( ವಿಭೂತಿ, ಚೈನ್, ಹಣ, ಹೂ, ಹಣ್ಣುಗಳು ಇತ್ಯಾದಿ) ಜನರನ್ನು ನಂಬಿಸುವುದು. ಅದಕ್ಕೆ ಮುಗ್ಧ ಜನ ಬಲಿಯಾಗಿ ತಮ್ಮ ಜೀವಮಾನ ಪೂರ್ತಿ ಅವರ ದಾಸರಾಗುವುದು.

ವಾಮಾಚಾರ ಬಗ್ಗೆ ಹುಲಿಕಲ್ ನಟರಾಜ್
ವಾಮಾಚಾರದ ಹೆಸರಿನಲ್ಲಿ ಮುಗ್ದ ಮಕ್ಕಳ ಬಲಿ, ಅಂಗಾಂಗ ಕತ್ತರಿಸಿಕೊಳ್ಳುವಂತೆ ಪ್ರೇರಣೆ, ಇಡೀ ರಾತ್ರಿ ಮಸಣದಲ್ಲಿ ಬೆತ್ತಲೆ ಪೂಜೆ, ದೈಹಿಕ ದಂಡನೆ ಮಾಡಿಸುವುದು, ಮಳೆ ಬಾರದಿದ್ದರೆ ಹೂತಿಟ್ಟ ಹೆಣಗಳನ್ನು ಹೊರ ತೆಗೆದು ಪೂಜೆ ಮಾಡುವುದು. ಮನೆ, ಜಮೀನು,ಮುಂತಾದ ಕಡೆ ವಾಮಾಚಾರದ ವಸ್ತುಗಳನ್ನು ಹಾಕುವುದು ಮನೆಯ ಮುಂದೆ ಪ್ರಾಣಿಗಳನ್ನು ಕತ್ತರಿಸಿ ವಾಮಾಚಾರದ ವಸ್ತುಗಳನ್ನು ಹಾಕುವುದರಿಂದ ದುರ್ಬಲ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದಲ್ಲದೆ. ಪೂಜೆಯ ಹೆಸರಿನಲ್ಲಿ ಮತ್ತಷ್ಟೂ ಹೆದರಿಸುವುದು.

ಫಲ ಭವಿಷ್ಯ ಬಗ್ಗೆ ನಟರಾಜ್
ಫಲ ಭವಿಷ್ಯ : ಪ್ರತೀ ತಾಲ್ಲೂಕಿನ ಮನೆ, ಕೊಠಡಿ ಲಾಡ್ಜ್ ಗಳಲ್ಲಿ ವಾಸಮಾಡಿಕೊಂಡು ಜ್ಯೋತಿಷ್ಯ ಕುಟ್ಟಿ ಚೇತನ, ಜನ, ಪಶು ಹಣ, ಸ್ತ್ರೀ. ಪುರುಷ, ಬೇತಾಳ, ಸಂತಾನಸಿದ್ದಿ, ವಶೀಕರಣ ಹಾಗೂ ಕೆಂಡ ಮಾಲಿನಿ,ಕುಂಡ ಮಾಲಿನಿ, ರುಂಡ ಮಾಲಿನಿ, ಅಘೋರಗಳ ಹೆಸರಿನಲ್ಲಿ ಪೂಜೆ ಮಾಡಿ ಲಕ್ಷಾಂತರ ರೂಗಳ ವಂಚನೆ, ರಾಸಾಯನಿಕ ವಸ್ತುಗಳು ಹಾಗೂ ಗಿಡ ಮೂಲಿಕೆಗಳನ್ನು ಬಳಸಿ ಪ್ರಜ್ಞೆ ತಪ್ಪಿಸಿ ಲೈಂಗಿಕ ಕಿರುಕುಳ ನೀಡುವುದಲ್ಲದೆ ಹಣ ದೋಚುವುದು.

ಜನ್ಮಾಂತರ ಕಾರ್ಯಕ್ರಮ ವಿವಾದ
ಮಾಧ್ಯಮಗಳಲ್ಲಿ ಪ್ರತಿ ದಿನ ಜನ್ಮಾಂತರದ ಹೆಸರಿನಲ್ಲಿ ಹಗಲು ದರೋಡೆ ನಡೆಯುತ್ತಿದೆ ಇದು ವೈಜ್ಞಾನಿಕವಾಗಿ ಎಲ್ಲಿಯೂ ಸಾಬಿತಾಗಿಲ್ಲ ಆದರೂ ಪ್ರತಿ ನಿತ್ಯ ಪಾಯೋಜಿತ ಕಾರ್ಯಕ್ರಮವಾಗಿ ಜನರನ್ನು ಮರಳು ಮಾಡುವ ಸುಳ್ಳು ಹೇಳಿ ಮುಗ್ದ ಜನರನ್ನು ವಂಚಿಸುವ ಬಹಿರಂಗ ದಂಧೆ ನಡೆಯುತ್ತಲೇ ಇರುತ್ತದೆ.
ದುರ್ಬಲ ಮನಸ್ಸಿನ ಮುಗ್ದ ವಿದ್ಯಾವಂತ ಬುದ್ದಿವಂತರನ್ನೂ ತಮ್ಮ ಸುಳ್ಳಿನ ಮೋಡಿಯಿಂದ ಮೋಸ ಮಾಡಿ ಮೌಢ್ಯದ ಬೀಜ ಬಿತ್ತುವುದನ್ನು ಪೊಳ್ಳು ಫಲ ಭವಿಷ್ಯವನ್ನು ನಿಷೇಧಿಸಬೇಕು.

ಭಯ ಹುಟ್ಟಿಸುವ ವಾಣಿ ನಿಷೇಧಿಸಬೇಕು
ಎಲೆ, ಕಡವೆ ಆಂಜನ, ಸಜೀವಿಗಳ ಸೃಷ್ಟಿ, ಕೇರ ಬೀಜಗಳನ್ನು ಬಳಸಿಕೊಂಡು ಕೇರ ಬೀಳಿಸುವುದು, ಸ್ವಾರ್ಥ ಮನಸ್ಸಿನಿಂದ ವಸ್ತುಗಳನ್ನು ಹತ್ತಿಸುವುದು, ನಾನೇ ದೇವರು ನನ್ನ ಮೈಮೇಲೆ ದೇವರು ಬಂದಿದೆ ಎಂದು ತಾನೇ ದೈಹಿಕ ದಂಡನೆ ಮಾಡಿಕೊಳ್ಳುವುದು ಮಧ್ಯ ರಾತ್ರಿ ಬೆತ್ತಲೆ ಬಂದು ಭಯ ಹುಟ್ಟಿಸುವ ವಾಣಿ ನುಡಿಯುವುದು, ಸೂತಕದ ಮನೆಯಲ್ಲಿ ಮಾನಸಿಕ ಹಿಂಸೆ ನೀಡುವ ಆಚರಣೆಗಳನ್ನು ಮಾಡಿ ಮತ್ತಷ್ಠು ಮಾನಸಿಕ ಸೂತಕವನ್ನುಂಟು ಮಾಡುವುದು ಎಲ್ಲವೂ ನಿಷೇಧವಾಗಬೇಕಿದೆ
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications