ಬಜೆಟ್ ಕುರಿತು ಒನ್ಇಂಡಿಯಾ ಓದುಗರ ವಸ್ತುನಿಷ್ಠ ಕಾಮೆಂಟ್
ಬೆಂಗಳೂರು, ಫೆಬ್ರವರಿ 02 : ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಂಡಿಸಿರುವ 2018-19ನೇ ಸಾಲಿನ ಬಜೆಟ್ ಹೇಗಿದೆ? ಸಂಸಸದರು, ರಾಜಕಾರಣಿಗಳು, ಹಣಕಾಸು ತಜ್ಞರು ಮುಂತಾದವರು ತಾವು ಅರ್ಥೈಸಿಕೊಂಡಂತೆ ವಿಶ್ಲೇಷಣೆ ಮಾಡುತ್ತಲೇ ಇದ್ದಾರೆ.
ಒನ್ಇಂಡಿಯಾ ಕನ್ನಡ ಓದುಗರು ಕೂಡ ತಮ್ಮ ವಸ್ತುನಿಷ್ಠ ಅಭಿಪ್ರಾಯಗಳನ್ನು ಮಂಡಿಸಿದ್ದು, ಹಲವರು ಇದರಲ್ಲಿ ಚುನಾವಣೆಯ ರಾಜಕೀಯದ ವಾಸನೆ ಹೊಡೆಯುತ್ತಿದೆ ಎಂದರೆ, ಕೆಲವರು ದಿಕ್ಕುದೆಸೆಯಿಲ್ಲದ ಅರ್ಥಹೀನ ಬಜೆಟ್. ಇದರಲ್ಲಿ ಶ್ರೀಸಾಮಾನ್ಯರಿಗೆ (ಮಧ್ಯಮ ವರ್ಗದವರಿಗೆ) ಏನೂ ಕೊಟ್ಟಿಲ್ಲ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ.
ಬಜೆಟ್ ಅಂದರೆ ಎಲ್ಲರಿಗೂ ಮೆಚ್ಚುಗೆಯಾಗಬೇಕಿಲ್ಲ. ಮೆಚ್ಚುಗೆ ಪಡೆಯುವುದು ಕಷ್ಟವೇ. ಆಡಳಿತ ಪಕ್ಷದವರು ಶಭಾಸ್ ಎಂದರೆ ವಿರೋಧಿಗಳು ಟೀಕೆ ಸುರಿಮಳೆಗರೆಯುತ್ತಿರುತ್ತಾರೆ. ಯಾವುದೇ ಬಜೆಟ್ ಮಂಡನೆಯ ನಂತರ ಕಂಡುಬರುವ ವಿದ್ಯಮಾನವಿದು. ನಮ್ಮ ಓದುಗರು ಏನಂತಾರೆ ಮುಂದೆ ಓದಿರಿ.

***
ಅಚ್ಛೇ ದಿನ್ ಬರಲಿಲ್ಲ, ವ್ಯಥೆ ಮುಗಿಯಲಿಲ್ಲ, ರೈತರ ಬಡವರ ಬವಣೆ ಕಳೆಯಲಿಲ್ಲ. ಕೇಂದ್ರದಿಂದ ಬರೀ ಬವಣೆ ಭಾಗ್ಯ ಮಾತ್ರ, ರಾಜ್ಯದಿಂದ ಕೊಲೆ ಭಾಗ್ಯ ಮಾತ್ರ ಸಿಕ್ಕಿರುವುದು. ನಮ್ಮನ್ನು ದೇವರೇ ಕಾಪಾಡಬೇಕು. ಅಯ್ಯೋ ಶಿವನೇ ಎಲ್ಲಿದ್ದೀಯ ಬೇಗ ಬಾ.
ಬಸವೇಶ್
***
ಇದರಲ್ಲಿ ಪುಗಸಟ್ಟೆ ಭಾಗ್ಯಗಳು ಒಂದೂ ಇಲ್ಲ. ಅದಕ್ಕೆ ಇದು ಜನರಿಗೆ ಅದರಲ್ಲೂ ಆರ್ಥಿಕ (ಕಾಂಗ್ರೆಸ್) ತಜ್ಞರಿಗೆ ಸರಿಯಾಗಿ ಕಾಣಿಸುತ್ತಿಲ್ಲ.
ದೇವರಾಜ ಜಿ
***
ಮಾನ್ಯ ಹಣಕಾಸು ಮಂತ್ರಿಗಳೇ, ನನ್ನದೊಂದು ಸಣ್ಣ ಸಲಹೆ. ಕೈಲಾದರೆ ಸರಕಾರಕ್ಕೆ ಕೆಲಸ ಮಾಡುವ (ಅಂದುಕೊಂಡಿದೀನಿ) ಶಾಸಕರು ಮಂತ್ರಿಗಳು ಎಲ್ಲರನ್ನೂ ಈ ಟ್ಯಾಕ್ಸ್ (ಸುಂಕ) ಕಟ್ಟೋಕ್ಕೆ ಹೇಳಿ. ಕೆಲಸ ಅಂತೂ ಮಾಡಲ್ಲ, ಇನ್ನು ಕೆಲಸ ಮಾಡೋರಿಗೆ ಯಾಕೆ ಈ ಸುಂಕ? ಇದು ಭಾರತೀಯರಾಗಿ ಬ್ರಿಟಿಷರಂತಹ ದಬ್ಬಾಳಿಕೆ ಬೇರೆ.
ಕಾಂತರಾಜು
***
ಅಲ್ಲ ಸಿದ್ದರಾಮಯ್ಯ ಅವರೇ, ಕರ್ನಾಟಕ ರಾಜ್ಯಕ್ಕೆ ಬಜೆಟ್ನಲ್ಲಿ ಏನೂ ವಿಶೇಷ ಕೊಡುಗೆ ಸಿಕ್ಕಿಲ್ಲ ಅಂತ ಹೇಳುತ್ತೀರಾ ಅಲ್ವಾ? ಕೇಂದ್ರ ಬಜೆಟ್ ಯಾವಾಗಲೂ ದೇಶದ ಹಿತದೃಷ್ಟಿಯಿಂದ ತಾನೇ ಮಂಡಿಸುವುದು? ಇದರಲ್ಲಿ ಪ್ರತೀ ರಾಜ್ಯಕ್ಕೆ ಅಂತ ಬೇರೆ ಬೇರೆ ಬಜೆಟ್ ಮಾಡುತ್ತಾರಾ? ನಿಮ್ಮದು ಎಂಥ ತಲೆ ಮಾರಾಯ್ರೆ?
ಶ್ರೀಕಾಂತ್
***
ಮತ ಗಳಿಸಲು ಬಜೆಟ್ ಮೂಲಕ ಬಿಜೆಪಿ ಯಾವ ಕಸರತ್ತು ಮಾಡಿಲ್ಲ. ಕರ್ನಾಟಕ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಸೋಲು ಗ್ಯಾರಂಟಿ.
ಕುಮಾರ್
***
ನಿಮ್ಮ ಸರ್ಕಾರ ಬಂದ್ರೆ ತ್ರಿಗುಣ ಮಾಡ್ತಿರಾ ಮನ್ಮೋಹನ್ ಜಿ? ಲೂಟಿ ಹೊಡೆದು ಹೋದ್ರಲಾ ಸ್ವಾಮಿ ನಿಮ್ಮ ಸರ್ಕಾರ ಇದ್ದಾಗ, ನಿಮ್ಮ ಪಕ್ಷದ ಮಿನಿಸ್ಟರ್ ಗಳು/ಗಾಂಧಿ ಕುಟುಂಬದವರು (ನೀವು ಅಂತ ಹೇಳ್ತಾಇಲ್ಲ, ನಿಮ್ಮ ಬಗ್ಗೆ ಗೌರವ ಇದೆ). ತಾಳ್ಮೆಯಿದ ನೋಡಿ, ಮೋದಿ ಏನ್ ಮಾಡಬಹುದು ಅಂತ. ಪ್ರಶ್ನೆ ಮಾಡೊದು ಬಿಟ್ಟು ಬೇಕಾದ್ರೆ ಅವರಿಗೆ ಮಾರ್ಗದರ್ಶನ ಮಾಡಿ.
ರಾಜ್
***
ಈ ಪ್ರಧಾನಿಯನ್ನು ಟೀ ಮಾರಲಿಕ್ಕೆ ಮತ್ತು ಈ ಹಣಕಾಸು ಮಂತ್ರಿಯನ್ನು ಪಕೋಡ ಮಾಡೋಕೆ ಕಳುಯಿಸಿರಿ. ಅವರಿಬ್ಬರೂ ಅದಕ್ಕೆ ಯೋಗ್ಯರಾಗಿದ್ದಾರೆ.
ಕರುನಾಡು ಪಾರ್ಟಿ
***
ಇನ್ನ ಬಿಜೆಪಿ ಮುಂದೆ ಲೋಕಸಭೆಗೆ ಬರೋದು ಕನಸೇ. ಜೇಟ್ಲಿಗೆ ಪಕೋಡಾ ಮಾರಲಿಕ್ಕೆ ಹೇಳಿ.
ವಿಜಯ್ ಕುಮಾರ್
***
ತುಂಬಾ ಕಳಪೆ ಬಜೆಟ್ ಮತ್ತು ನಿರಾಶಾದಾಯಕ 2018.
ಚೇತನ್
***
ಮೊದಲು ನಿನಗೆ (ಬೃಂದಾ ಕಾರಟ್) ನಾಚಿಕೆ ಆಗಬೇಕು. ನೀನು ಪ್ರೆಸ್ ಮೀಟ್ ಮಾಡಿದ ಮಣಿಪುರದ ಅಗರ್ತಾಲ ಅರವತ್ತು ವರ್ಷಗಳಿಂದ ಯಾವುದೇ ಅಭಿವೃದ್ಧಿ ಹೊಂದಿಲ್ಲ. ಅದರ ಬಗ್ಗೆ ಮಾತಾಡೋ ಯೋಗ್ಯತೆ ಇಲ್ಲದ ನಿನಗೆ, ದೇಶದ ರೈತರ ಬಗ್ಗೆ ಮಾತಾಡೋ ಯೋಗ್ಯತೆ ಇದೆಯಾ? ಸುಮಾರು ಹದಿನೇಳು ವರ್ಷಗಳ ಹಿಂದೆ ನೀಡಿದ ಸ್ವಾಮಿನಾಥನ್ ವರದಿಯನ್ನು ಇಷ್ಟು ವರ್ಷ ಕಾಂಗ್ರೆಸ್ ಸರ್ಕಾರ ಮಾಡದಿದ್ದು ಈಗ ಮೋದಿ ಸರ್ಕಾರ ಅನುಷ್ಠಾನ ಮಾಡುವುದು ನಿನ್ನಂತಹ ಕವಳಗೀರಾಕಿಗಳಿಗೆ ಬೇಕಿಲ್ಲ ಅನ್ನುವುದು ಸ್ಪಷ್ಟವಾಗಿ ಗೋಚರಿಸುತ್ತದೆ.
ಲಯನ್ ಸಾಗರ್
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications