ಓದುಗರ ಪತ್ರ: ಅಧಿಕಾರದ ಆಸೆಗೆ ಮಹಿಳೆಯ ತೇಜೋವಧೆ ಮಾಡಿದ ಎಚ್ಡಿಕೆ
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೆ, ನಿನ್ನೆ(ಏಪ್ರಿಲ್ 10) ನಡೆದ ಕುಮಾರಪರ್ವ ಕಾರ್ಯಕ್ರಮದಲ್ಲಿ ಅಧಿಕಾರದ ಆಸೆಗೆ ತಮ್ಮ ನಾಲಿಗೆಯನ್ನು ಹರಿಬಿಟ್ಟುರುವುದು ನಿಮ್ಮ ಘನತೆಯನ್ನು ತೋರಿಸುತ್ತದೆ.
ತಮ್ಮ ಸ್ವಾರ್ಥದ ರಾಜಕೀಯ ಮತಗಳಿಗಾಗಿ ಚುನಾವಣಾ ಪ್ರಚಾರದ ಮಧ್ಯೆ ದಿವಂಗತ ಕಲ್ಲಪ್ಪ ಹಂಡಿಭಾಗ ಅವರ ಕುಟುಂಬದ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದೀರಿ. ಇಡೀ ಹೆಣ್ಣು ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದೀರಿ.
ನೀವು ರಾಜಕೀಯ ಮಾಡಲು ಹೋದವರು, ರಾಜಕೀಯ ಮಾಡಿ, ವೋಟ್ ಕೇಳಿ ಬರಬೇಕು. ಅದನ್ನು ಬಿಟ್ಟು 'ಕಲ್ಲಪ್ಪ ಹಂಡಿಬಾಗ್ ಧರ್ಮಪತ್ನಿಯವರಿಗೆ ನಾನು ಕೆಲಸ ಕೊಡಿಸಿದೆ, ನಾನು ಕೆಲಸ ಕೊಡಿಸದಿದ್ದರೆ, ಅವರು ಮೈಮಾರಿಕೊಂಡು ಬದುಕಬೇಕಿತ್ತು' ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಏಕೆ?

ಮಾಜಿ ಮುಖ್ಯಮಂತ್ರಿ ಎಂದು ನಿಮ್ಮ ಮೇಲಿದ್ದ ಗೌರವವನ್ನು ನೀವೇ ಕಳೆದುಕೊಳ್ಳುತ್ತಿದ್ದೀರಿ. ಕುಮಾರಸ್ವಾಮಿಯವರೇ ಇನ್ನಾದರೂ ನಿಮ್ಮ ಘನತೆಗೆ ತಕ್ಕ ಹಾಗೆ ಮಾತನಾಡಿ. ಯಾರೊನ್ನೋ ಮೆಚ್ಚಿಸಲು ತಮ್ಮತನವನ್ನು ಬಿಟ್ಟು ಕೀಳು ರಾಜಕೀಯ ಮಾಡಬೇಡಿ. ಈ ಎಲ್ಲಾ ಘಟನೆಗಳು ಕರ್ನಾಟಕ ಪ್ರಜ್ಞಾವಂತ ಮತದಾರರ ಮೇಲೆ ಪ್ರಭಾವ ಬೀರುವುದು ನಿಶ್ಚಿತ.
ಕಳೆದ ಸುಮಾರು ವರ್ಷಗಳಿಂದಲೂ ಕುರುಬರ ಮೇಲೆ ದ್ವೇಷದ ರಾಜಕಾರಣ ಮಾಡುತ್ತ ಬರಲಾಗಿದೆ. ಕುರುಬ ಸಮುದಾಯಕ್ಕೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಬೆರಳಣಿಕೆಯಷ್ಟೇ ಟಿಕೆಟ್ ನೀಡಿ ಅವಮಾನ ಮಾಡಲಾಗಿದೆ. ಕುರುಬರು ಕರ್ನಾಟಕದ ದೊಡ್ಡ ಸಮುದಾಯಗಳಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಅವರಿಗೆ ರಾಜಕೀಯ ವಾಗಿಯೂ ತಕ್ಕುದಾದ ಸ್ಥಾನಮಾನ ನೀಡಿಲ್ಲ. ಅಲ್ಲದೆ ಕೆಂಪಯ್ಯ ಅವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಕೂಡ ಇಕ್ಕಟ್ಟಿನಲ್ಲಿ ಸಿಕ್ಕಿಸಲು ಸಂಚು ಮಾಆಡಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಮಾನ್ಯ ಕುಮಾರಸ್ವಾಮಿಯವರೇ, ಹೀಗೆ ಕುರುಬ ಸಮಾಜದ ಬಗ್ಗೆ ತೋಜೋವಧೆ, ಮಲತಾಯಿ ಧೋರಣೆ ಮುಂದುವರಿಸಿದರೆ, ಇಡೀ ಕುರುಬ ಸಮಾಜ ತಕ್ಕ ಪಾಠ ಕಲಿಸಲಿದೆ ಎಚ್ಚರ!
(ಲೇಖಕರು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟ (ರಿ)ದ ರಾಜ್ಯ ಸಂಘಟನಾ ಕಾರ್ಯದರ್ಶಿ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications