ಓದುಗರ ಪತ್ರ: ಅಧಿಕಾರದ ಆಸೆಗೆ ಮಹಿಳೆಯ ತೇಜೋವಧೆ ಮಾಡಿದ ಎಚ್ಡಿಕೆ
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೆ, ನಿನ್ನೆ(ಏಪ್ರಿಲ್ 10) ನಡೆದ ಕುಮಾರಪರ್ವ ಕಾರ್ಯಕ್ರಮದಲ್ಲಿ ಅಧಿಕಾರದ ಆಸೆಗೆ ತಮ್ಮ ನಾಲಿಗೆಯನ್ನು ಹರಿಬಿಟ್ಟುರುವುದು ನಿಮ್ಮ ಘನತೆಯನ್ನು ತೋರಿಸುತ್ತದೆ.
ತಮ್ಮ ಸ್ವಾರ್ಥದ ರಾಜಕೀಯ ಮತಗಳಿಗಾಗಿ ಚುನಾವಣಾ ಪ್ರಚಾರದ ಮಧ್ಯೆ ದಿವಂಗತ ಕಲ್ಲಪ್ಪ ಹಂಡಿಭಾಗ ಅವರ ಕುಟುಂಬದ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದೀರಿ. ಇಡೀ ಹೆಣ್ಣು ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದೀರಿ.
ನೀವು ರಾಜಕೀಯ ಮಾಡಲು ಹೋದವರು, ರಾಜಕೀಯ ಮಾಡಿ, ವೋಟ್ ಕೇಳಿ ಬರಬೇಕು. ಅದನ್ನು ಬಿಟ್ಟು 'ಕಲ್ಲಪ್ಪ ಹಂಡಿಬಾಗ್ ಧರ್ಮಪತ್ನಿಯವರಿಗೆ ನಾನು ಕೆಲಸ ಕೊಡಿಸಿದೆ, ನಾನು ಕೆಲಸ ಕೊಡಿಸದಿದ್ದರೆ, ಅವರು ಮೈಮಾರಿಕೊಂಡು ಬದುಕಬೇಕಿತ್ತು' ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಏಕೆ?

ಮಾಜಿ ಮುಖ್ಯಮಂತ್ರಿ ಎಂದು ನಿಮ್ಮ ಮೇಲಿದ್ದ ಗೌರವವನ್ನು ನೀವೇ ಕಳೆದುಕೊಳ್ಳುತ್ತಿದ್ದೀರಿ. ಕುಮಾರಸ್ವಾಮಿಯವರೇ ಇನ್ನಾದರೂ ನಿಮ್ಮ ಘನತೆಗೆ ತಕ್ಕ ಹಾಗೆ ಮಾತನಾಡಿ. ಯಾರೊನ್ನೋ ಮೆಚ್ಚಿಸಲು ತಮ್ಮತನವನ್ನು ಬಿಟ್ಟು ಕೀಳು ರಾಜಕೀಯ ಮಾಡಬೇಡಿ. ಈ ಎಲ್ಲಾ ಘಟನೆಗಳು ಕರ್ನಾಟಕ ಪ್ರಜ್ಞಾವಂತ ಮತದಾರರ ಮೇಲೆ ಪ್ರಭಾವ ಬೀರುವುದು ನಿಶ್ಚಿತ.
ಕಳೆದ ಸುಮಾರು ವರ್ಷಗಳಿಂದಲೂ ಕುರುಬರ ಮೇಲೆ ದ್ವೇಷದ ರಾಜಕಾರಣ ಮಾಡುತ್ತ ಬರಲಾಗಿದೆ. ಕುರುಬ ಸಮುದಾಯಕ್ಕೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಬೆರಳಣಿಕೆಯಷ್ಟೇ ಟಿಕೆಟ್ ನೀಡಿ ಅವಮಾನ ಮಾಡಲಾಗಿದೆ. ಕುರುಬರು ಕರ್ನಾಟಕದ ದೊಡ್ಡ ಸಮುದಾಯಗಳಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಅವರಿಗೆ ರಾಜಕೀಯ ವಾಗಿಯೂ ತಕ್ಕುದಾದ ಸ್ಥಾನಮಾನ ನೀಡಿಲ್ಲ. ಅಲ್ಲದೆ ಕೆಂಪಯ್ಯ ಅವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಕೂಡ ಇಕ್ಕಟ್ಟಿನಲ್ಲಿ ಸಿಕ್ಕಿಸಲು ಸಂಚು ಮಾಆಡಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಮಾನ್ಯ ಕುಮಾರಸ್ವಾಮಿಯವರೇ, ಹೀಗೆ ಕುರುಬ ಸಮಾಜದ ಬಗ್ಗೆ ತೋಜೋವಧೆ, ಮಲತಾಯಿ ಧೋರಣೆ ಮುಂದುವರಿಸಿದರೆ, ಇಡೀ ಕುರುಬ ಸಮಾಜ ತಕ್ಕ ಪಾಠ ಕಲಿಸಲಿದೆ ಎಚ್ಚರ!
(ಲೇಖಕರು ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟ (ರಿ)ದ ರಾಜ್ಯ ಸಂಘಟನಾ ಕಾರ್ಯದರ್ಶಿ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications