ಪತ್ರ: ಉನ್ನಾವೋ, ಕತುವಾ ಅತ್ಯಾಚಾರ ದೇಶವೇ ತಲೆತಗ್ಗಿಸುವಂಥದ್ದು
ದೇಶವನ್ನೇ ಬೆಚ್ಚಿಬೀಳಿಸುವ ಎರಡು ಪೈಶಾಚಿಕ ಘಟನೆಗಳು ಇತ್ತೀಚೆಗೆ ನಡೆದಿವೆ. ಜಮ್ಮುವಿನ ಅಲೆಮಾರಿ ಜನಾಂಗದ ಎಂಟು ವರ್ಷದ ಅಮಾಯಕ ಬಾಲೆಯೊಬ್ಬಳನ್ನು ಅಪಹರಿಸಿ, ನಾಲ್ಕು ದಿನಗಳ ಕಾಲ ದೇವಸ್ಥಾನವೊಂದರಲ್ಲಿ ಕೂಡಿ ಹಾಕಿ ಸರಣಿ, ಸಾಮೂಹಿಕ ಅತ್ಯಾಚಾರವೆಸಗಿ ಕೊಂದ ಹೀನಾತಿಹೀನ, ಮನುಕುಲವೇ ತಲೆ ತಗ್ಗಿಸುವಂತಹ ಹೇಯಕರ ಘಟನೆ.
ಇನ್ನೊಂದೆಡೆ ಉತ್ತರಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು, ಸ್ಥಳೀಯ ಬಿಜೆಪಿ ಶಾಸಕನ ಮೇಲೆಯೆ ಆರೋಪ ಮಾಡಲಾಗಿದೆ. ಮಾತ್ರವಲ್ಲದೆ ಸಂತ್ರಸ್ತೆಯ ತಂದೆ ಪೋಲಿಸ್ ಠಾಣೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಮೇಲಿನ ಎರಡೂ ಘಟನೆಗಳು ಭಾರತೀಯ ಸಮಾಜವೇ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ.
ದೇಶದಲ್ಲಿ ಇಂಥ ಘೋರ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಗಿದೆ.

ಜಮ್ಮುವಿನ ಕತುವಾದಲ್ಲಿ ನಡೆದ ಪೈಶಾಚಿಕ ಘಟನೆಗೆ ಕೋಮು ಆಯಾಮವೂ ಇರುವಂತೆ ಕಂಡು ಬರುತ್ತಿದ್ದು, ಒಂದು ವೇಳೆ ಇದು ನಿಜವೇ ಆಗಿದ್ದಲ್ಲಿ ಇದು ನಾಚಿಕೆಗೇಡಿನ ಸಂಗತಿ. ಪ್ರಪಂಚದ ಯಾವುದೇ ಧರ್ಮವೂ, ಯಾವುದೇ ದೇವರೂ ಇಂತಹ ಹೀನ ಕೃತ್ಯವನ್ನು ಕ್ಷಮಿಸುವುದಿಲ್ಲ.
ಆಮ್ ಆದ್ಮಿ ಪಕ್ಷವು ಮೇಲಿನ ಎರಡೂ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತದೆ. ಹಾಗೂ ದುಷ್ಟರ ರಕ್ಷಣೆ ಮಾಡುತ್ತಿರುವ ಉತ್ತರ ಪ್ರದೇಶದ ಸರ್ಕಾರ ಮತ್ತು ಕಾಶ್ಮೀರದ ಪಿಡಿಪಿ-ಬಿಜೆಪಿ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಗೃಹ ಇಲಾಖೆಯನ್ನು ಒತ್ತಾಯಿಸುತ್ತದೆ. ಮಾತ್ರವಲ್ಲದೇ ಎರಡೂ ಘಟನೆಗಳ ಸ್ವತಂತ್ರ ನ್ಯಾಯಾಂಗ ತನಿಖೆ ನಡೆದು ಆರೋಪಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸುತ್ತದೆ. ಹಾಗೂ ಅತ್ಯಾಚಾರಿಗಳು, ದುರಾಚಾರಿಗಳು, ಕಾಮುಕರ ರಕ್ಷಣೆಗೆ ಪಣತೊಟ್ಟು ನಿಂತಿರುವ ದುಷ್ಟಪಕ್ಷಗಳನ್ನು ಚುನಾವಣೆಯಲ್ಲಿ ಸಾರಸಗಟಾಗಿ ತಿರಸ್ಕರಿಸ ತಕ್ಕ ಪಾಠ ಕಲಿಸಬೇಕೆಂದು ಕರ್ನಾಟಕದ ಜನತೆಗೆ ಮನವಿ ಮಾಡುತ್ತದೆ.
(ಲೇಖಕರು: ಆಮ್ ಆದ್ಮಿ ಪಕ್ಷದ ರಾಜ್ಯ ವಕ್ತಾರರು ಮತ್ತು ಸಹಸಂಚಾಲಕರು)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications