ಪತ್ರ: ಉನ್ನಾವೋ, ಕತುವಾ ಅತ್ಯಾಚಾರ ದೇಶವೇ ತಲೆತಗ್ಗಿಸುವಂಥದ್ದು
ದೇಶವನ್ನೇ ಬೆಚ್ಚಿಬೀಳಿಸುವ ಎರಡು ಪೈಶಾಚಿಕ ಘಟನೆಗಳು ಇತ್ತೀಚೆಗೆ ನಡೆದಿವೆ. ಜಮ್ಮುವಿನ ಅಲೆಮಾರಿ ಜನಾಂಗದ ಎಂಟು ವರ್ಷದ ಅಮಾಯಕ ಬಾಲೆಯೊಬ್ಬಳನ್ನು ಅಪಹರಿಸಿ, ನಾಲ್ಕು ದಿನಗಳ ಕಾಲ ದೇವಸ್ಥಾನವೊಂದರಲ್ಲಿ ಕೂಡಿ ಹಾಕಿ ಸರಣಿ, ಸಾಮೂಹಿಕ ಅತ್ಯಾಚಾರವೆಸಗಿ ಕೊಂದ ಹೀನಾತಿಹೀನ, ಮನುಕುಲವೇ ತಲೆ ತಗ್ಗಿಸುವಂತಹ ಹೇಯಕರ ಘಟನೆ.
ಇನ್ನೊಂದೆಡೆ ಉತ್ತರಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು, ಸ್ಥಳೀಯ ಬಿಜೆಪಿ ಶಾಸಕನ ಮೇಲೆಯೆ ಆರೋಪ ಮಾಡಲಾಗಿದೆ. ಮಾತ್ರವಲ್ಲದೆ ಸಂತ್ರಸ್ತೆಯ ತಂದೆ ಪೋಲಿಸ್ ಠಾಣೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಮೇಲಿನ ಎರಡೂ ಘಟನೆಗಳು ಭಾರತೀಯ ಸಮಾಜವೇ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ.
ದೇಶದಲ್ಲಿ ಇಂಥ ಘೋರ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಗಿದೆ.

ಜಮ್ಮುವಿನ ಕತುವಾದಲ್ಲಿ ನಡೆದ ಪೈಶಾಚಿಕ ಘಟನೆಗೆ ಕೋಮು ಆಯಾಮವೂ ಇರುವಂತೆ ಕಂಡು ಬರುತ್ತಿದ್ದು, ಒಂದು ವೇಳೆ ಇದು ನಿಜವೇ ಆಗಿದ್ದಲ್ಲಿ ಇದು ನಾಚಿಕೆಗೇಡಿನ ಸಂಗತಿ. ಪ್ರಪಂಚದ ಯಾವುದೇ ಧರ್ಮವೂ, ಯಾವುದೇ ದೇವರೂ ಇಂತಹ ಹೀನ ಕೃತ್ಯವನ್ನು ಕ್ಷಮಿಸುವುದಿಲ್ಲ.
ಆಮ್ ಆದ್ಮಿ ಪಕ್ಷವು ಮೇಲಿನ ಎರಡೂ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತದೆ. ಹಾಗೂ ದುಷ್ಟರ ರಕ್ಷಣೆ ಮಾಡುತ್ತಿರುವ ಉತ್ತರ ಪ್ರದೇಶದ ಸರ್ಕಾರ ಮತ್ತು ಕಾಶ್ಮೀರದ ಪಿಡಿಪಿ-ಬಿಜೆಪಿ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಗೃಹ ಇಲಾಖೆಯನ್ನು ಒತ್ತಾಯಿಸುತ್ತದೆ. ಮಾತ್ರವಲ್ಲದೇ ಎರಡೂ ಘಟನೆಗಳ ಸ್ವತಂತ್ರ ನ್ಯಾಯಾಂಗ ತನಿಖೆ ನಡೆದು ಆರೋಪಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸುತ್ತದೆ. ಹಾಗೂ ಅತ್ಯಾಚಾರಿಗಳು, ದುರಾಚಾರಿಗಳು, ಕಾಮುಕರ ರಕ್ಷಣೆಗೆ ಪಣತೊಟ್ಟು ನಿಂತಿರುವ ದುಷ್ಟಪಕ್ಷಗಳನ್ನು ಚುನಾವಣೆಯಲ್ಲಿ ಸಾರಸಗಟಾಗಿ ತಿರಸ್ಕರಿಸ ತಕ್ಕ ಪಾಠ ಕಲಿಸಬೇಕೆಂದು ಕರ್ನಾಟಕದ ಜನತೆಗೆ ಮನವಿ ಮಾಡುತ್ತದೆ.
(ಲೇಖಕರು: ಆಮ್ ಆದ್ಮಿ ಪಕ್ಷದ ರಾಜ್ಯ ವಕ್ತಾರರು ಮತ್ತು ಸಹಸಂಚಾಲಕರು)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications