ರಾಜಕಾರಣಿಗಳಿಗಿಂತ ನಾವೇ ಹೆಚ್ಚು ಕೆಟ್ಟುಹೋಗಿದ್ದೇವೆ!
ಕಲ್ಲು ದೇವರು ದೇವರಲ್ಲ,
ಮಣ್ಣು ದೇವರು ದೇವರಲ್ಲ,
ಮರ ದೇವರು ದೇವರಲ್ಲ,
ಪಂಚಲೋಹದಲ್ಲಿ ಮಾಡಿದ ದೇವರು ದೇವರಲ್ಲ,
ಸೇತುಬಂಧ, ರಾಮೇಶ್ವರ, ಕಾಶಿ,
ಗೋಕರ್ಣ, ಕೇದಾರ ಮೊದಲಾದ ಪುಣ್ಯತೀರ್ಥ ಕ್ಷೇತ್ರಗಳಲ್ಲಿಹ ದೇವರು ದೇವರಲ್ಲ.
ತನ್ನತಾನಾರೆಂದು ತಿಳಿದೆಡೆ ತಾನೇ
ದೇವನೋಡಾ ಅಪ್ರಮಾಣ ಕೂಡಲಸಂಗಮದೇವಾ..
ಸುಭದ್ರ ಸಮಾಜ ಮತ್ತು ದೇಶ ಕಟ್ಟುವಲ್ಲಿ ರಾಷ್ಟ್ರೀಯತೆ ಮತ್ತು ದೇಶಪ್ರೇಮ:
ನಮ್ಮಲ್ಲಿ ಈ ರಾಷ್ಟ್ರೀಯತೆ ಹಾಗೂ ದೇಶಪ್ರೇಮದ ಪರಿಕಲ್ಪನೆ ಬದಲಾಗಬೇಕು. ಅದಕ್ಕಾಗಿ ನಾವಿಂದು ಹೊಸ ಭಾಷೆ ಬರೆಯಬೇಕಾಗಿದೆ. ಜಾತಿ ಧರ್ಮದ ಹೆಸರಿನಲ್ಲಿ ಕೀಳು ಹಾಗೂ ತುಷ್ಟೀಕರಣದ ರಾಜಕೀಯ ಮಾಡುತ್ತಿರುವ ರಾಜಕಾರಿಣಿಗಳು ಹಾಗೂ ರಾಜಕೀಯ ಪಕ್ಷಗಳಿಂದ ನಾವು ದೂರ ಇರಬೇಕಾಗಿದೆ.
ಧರ್ಮ, ಜಾತಿ, ಬಹುಸಂಖ್ಯಾತ, ಅಲ್ಪಸಂಖ್ಯಾತ, ಓಲೈಕೆ, ತುಷ್ಟೀಕರಣ ಹಾಗೂ ಸತ್ಯ ಹೇಳುತ್ತೇವೆಂದು ಸುಳ್ಳು ಹೇಳುತ್ತಾ ಜನರ ಭಾವನೆಯೊಂದಿಗೆ ಆಟವಾಡುವವರನ್ನು ಬಹಿಷ್ಕರಿಸಬೇಕು. ಅಂತಹ ಜನರನ್ನು ಹಾಗೂ ರಾಜಕಾರಣಿಳನ್ನು ನಂಬಬಾರದು.

ನಮಗೆ ಬೇಕಾಗಿರುವುದು ಒಳ್ಳೆ ಆಡಳಿತ, ಸಮಾನತೆ, ರಕ್ಷಣೆ ಮತ್ತು ನಿರ್ಭಯ ವಾತಾವರಣ. ಸರಕಾರಗಳು ಇಷ್ಟು ಕೊಟ್ಟರೆ ಸಾಕು. ಉಳಿದದ್ದನ್ನು ನೋಡಿಕೊಳ್ಳುವಸ್ಟು ಜನ ಬುದ್ಧಿವಂತರಿದ್ದಾರೆ. ಆದರೆ ರಾಜಕರಿಣಿಗಳು ಜನರನ್ನು ವಿಭಜಿಸುವ ಕೆಲಸ ಬಿಟ್ಟು ತಮ್ಮ ಕರ್ತವ್ಯದ ಕಡೆ ಗಮನ ಹರಿಸಬೇಕು. ಅಂಥಹ ಒಂದು ಹೊಸ ರಾಜಕೀಯ ವ್ಯವಸ್ಥೆಯ ಅವಶ್ಯಕತೆ ಇಂದು ನಮಗಿದೆ.
ರಾಷ್ಟ್ರಪ್ರೇಮಿ ಅಂದರೆ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಬೇಕು, ಅಕ್ಕಪಕ್ಕದವವರನ್ನು ಗೌರವಿಸಬೇಕು, ಸಾರ್ವಜನಿಕರ ಆಸ್ತಿಗೆ ಹಾನಿಮಾಡಬಾರದು, ದಂಗೆ, ಘರ್ಷಣೆ ಹೆಸರಿನಲ್ಲಿ ಸರಕಾರದ ಸ್ವತ್ತುಗಳಿಗೆ ಹಾನಿ ಮಾಡಬಾರದು, ನನ್ನ ಸರಕಾರಕ್ಕೆ, ನನ್ನ ನೆಲ ಮತ್ತು ಜಲಕ್ಕೆ ಹಾಗೂ ಮಾಡುವ ಕೆಲಸಕ್ಕೆ ಸದಾ ಪ್ರಾಮಾಣಿಕ ಗೌರವ ಕೊಡಬೇಕು ಎಂದೂ ಮೋಸ ಮಾಡಬಾರದು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
ಇದನ್ನು ಬಿಟ್ಟು ಕೇವಲ ಭಾರತ ಮಾತಾಕಿ ಜೈ, ವಂದೇ ಮಾತರಂ, ಹಿಂದೂ, ಮುಸ್ಲಿಂ, ಅಲ್ಪಸಂಖ್ಯಾತರು ಎನ್ನುತ್ತಾ ಅಂತಾರಾಷ್ಟ್ರೀಯ ಕ್ರೀಡೆಗಳು ನಡೆವಾಗ ತ್ರಿವರ್ಣ ದ್ವಜ ಹಿಡಿದು ಕುಣಿದಾಡಿದರೆ ಸಾಲದು.
ರಾಜಕಾರಣಿಗಳು ಸುಳ್ಳು ಮಾತಾಡೋದನ್ನು, ಅತಿಯಾದ ಸೊಕ್ಕನ್ನು, ವ್ಯವಹಾರದಲ್ಲಿ ಹಣ ತೊಡಗಿಸಿ ಹಣ ಮಾಡೋ ವ್ಯವಹಾರವನ್ನು ಬಿಡಬೇಕು. ಹಳೆ ರಾಜಕೀಯ ಪಕ್ಷಗಳಿಂದ ಇದು ಸಾಧ್ಯವೇ?
ಆದರೆ ಭಾರತ ಉಳಿಯಬೇಕಾದರೆ ಈ ಬದಲಾವಣೆ ಬೇಕು. ರಾಜಕಾರಿಣಿಗಳಿಗಿಂತ ನಾವು ಸಾಮಾನ್ಯರು ಹೆಚ್ಚು ಕೆಟ್ಟು ಹೋಗಿದ್ದೇವೆ. ನಮಗೆ ಬೇಕಾದವರ ಎಲ್ಲ ತಪ್ಪುಗಳನ್ನು ಸುಳ್ಳನ್ನು ಸಮರ್ಥಿಸಿಕೊಳ್ಳುತ್ತ ನಮಗೆ ನಾವೇ ಮೋಸ ಮಾಡಿಕೊಳ್ಳುತ್ತಿದ್ದೇವೆ. ಬುದ್ದಿಜೀವಿಗಳು ಎಂಬ ಹಣೆ ಪಟ್ಟಿ ಕಟ್ಟಿಕೊಂಡು ಯಾರನ್ನೋ ಸಮಾಧಾನ ಪಡಿಸಿ ಪ್ರತಿಪಾಲಾಪೇಕ್ಷೆಯಿಂದ ನಮ್ಮನ್ನೇ ನಾವು ಮಾರಿಕೊಳ್ಳುತ್ತಿದ್ದೇವೆ.
ಸಮೃದ್ಧ ಸಮಾಜ ನಿರ್ಮಾಣಕ್ಕೆ, ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಹೊಸ ಹಾಗೂ ಪೂರ್ವಗ್ರಹ ಪೀಡಿತವಲ್ಲದ ಒಂದು ಹೊಸ ರಾಜಕೀಯ ವ್ಯವಸ್ಥೆಯ ಅವಶ್ಯಕತೆ ಇಂದು ನಮಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications