ನವದೆಹಲಿ, ಡಿ. 03 : ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾ ಈಗ ಅಂತಿಮ ಟೆಸ್ಟ್ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ. ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಕೊಂಡರೂ ಹೆಚ್ಚಿನ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ. ದಿನದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 231ರನ್ ಗಳಿಸಿದೆ.
ಶಿಖರ್ ಧವನ್ 33 ರನ್ ಗಳಿಸಿ ಔಟಾದರೆ, ಮುರಳಿ ವಿಜಯ್ 12 ರನ್ ಗಳಿಸಿ ಔಟಾಗಿದ್ದಾರೆ. ನಂತರ ಬಂದ ಚೇತೇಶ್ವರ್ ಪೂಜಾರಾ 14 ರನ್ ಗಳಿಸಿ 30ನೇ ಓವರ್ ನಲ್ಲಿ ಅಬಾಟ್ ಗೆ ವಿಕೆಟ್ ಒಪ್ಪಿಸಿದರು. ನಾಯಕ ವಿರಾಟ್ ಕೊಹ್ಲಿ 44ರನ್ ಗಳಿಸಿ ಔಟಾದರು.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ವೇಗಿ ಉಮೇಶ್ ಯಾದವ್ ಅವರು ಅಮಿತ್ ಮಿಶ್ರಾ ಬದಲಿಗೆ ಸ್ಥಾನ ಪಡೆದುಕೊಂಡಿದ್ದಾರೆ.