ನವದೆಹಲಿ, ಜುಲೈ 15: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್ ಆರ್) ತಂಡಗಳನ್ನು ಮತ್ತೊಮ್ಮೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಮತ್ತೆ ಪ್ರವೇಶಿಸಲು ಈಗ ಅರ್ಹವಾಗಿದ್ದು, ಎರಡು ತಂಡಕ್ಕೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸ್ವಾಗತ ಕೋರಿದೆ.
ನ್ಯಾ. ಲೋಧಾ ಸಮಿತಿಯ ವರದಿಯಂತೆ ಭ್ರಷ್ಟಾಚಾರದ ಆರೋಪದ ಮೇಲೆ ಎರಡು ವರ್ಷಗಳ ಕಾಲ ನಿಷೇಧಕ್ಕೆ ಒಳಗಾಗಿದ್ದ ಚೆನ್ನೈ ಹಾಗೂ ರಾಜಸ್ಥಾನ ತಂಡಗಳ ಮೇಲೆ ವಿಧಿಸಲಾಗಿದ್ದ ಶಿಕ್ಷೆ ಅವಧಿ ಪೂರ್ಣಗೊಂಡಿದೆ. ಈ ಬಾರಿಯ ಐಪಿಎಲ್ ನಲ್ಲಿ ಆಡಲು ಉತ್ಸುಕವಾಗಿವೆ.