ನವದೆಹಲಿ, ಜೂನ್ 26: ಆಸ್ಟ್ರೇಲಿಯಾ ಪ್ರವಾಸ ತೆರಳಿರುವ ಭಾರತ 'ಎ' ತಂಡಕ್ಕೆ ಕರ್ನಾಟಕದ ಮನೀಶ್ ಪಾಂಡೆ ಹಾಗೂ ಕರುಣ್ ನಾಯರ್ ಆಯ್ಕೆಯಾಗಿದ್ದಾರೆ. ಆಗಸ್ಟ್ 14ರಿಂಡ ಆರಂಭವಾಗಲಿರುವ ಪ್ರವಾಸಕ್ಕೆ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ನಮನ್ ಓಜಾ ಅವರು ನಾಯಕರಾಗಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ವೇಳೆ ಭಾರತ 'ಎ' ತಂಡ 2 ಅನಧಿಕೃತ ಟೆಸ್ಟ್ ಪಂದ್ಯಗಳು ಹಾಗೂ ಚತುಷ್ಕೋನ ಏಕದಿನ ಕ್ರಿಕೆಟ್ ಸರಣಿಯಲ್ಲಿ ಆಡಲಿದೆ. ರಾಹುಲ್ ದ್ರಾವಿಡ್ ಅವರು ತಂಡದ ಕೋಚ್ ಆಗಿ ಮುಂದುವರಿಯಲಿದ್ದಾರೆ.
ನಂತರ ಆಸ್ಟ್ರೇಲಿಯಾ ಎ ತಂಡದ ವಿರುದ್ಧ ಸೆಪ್ಟೆಂಬರ್ 8ರಿಂದ 11 ಹಾಗೂ ಸೆ.15ರಿಂದ 18ರವರೆಗೆ ಬ್ರಿಸ್ಬೇನ್ನಲ್ಲಿ ಕ್ರಮವಾಗಿ ಮೊದಲ ಹಾಗೂ 2ನೇ ಚತುರ್ದಿನ ಪಂದ್ಯಗಳು ನಡೆಯಲಿವೆ.
ಭಾರತ ಎ ತಂಡ: ನಮನ್ ಓಜಾ (ವಿಕೆಟ್ ಕೀಪರ್ ಹಾಗೂ ನಾಯಕ), ಫೈಯಾಜ್ ಫಜಲ್, ಅಖಿಲ್ ಹೆರ್ವಾಡ್ಕರ್, ಶ್ರೇಯಸ್ ಅಯ್ಯರ್, ಕರುಣ್ ನಾಯರ್, ಮನೀಷ್ ಪಾಂಡೆ, ಕೇದರ್ ಜಾಧವ್, ವಿಜಯ್ ಶಂಕರ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಧವಳ್ ಕುಲಕರ್ಣಿ, ಜಯದೇವ್ ಉನಾದ್ಕತ್, ಬರೀಂದರ್ ಸ್ರಾನ್, ಶಹಬಾಜ್ ನದೀಮ್ ಮತ್ತು ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್).(ಪಿಟಿಐ)