ಮುಂಬೈ, ಜೂನ್ 29: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಅವರು ನೇರವಾಗಿ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ವಿರುದ್ಧ ಕಿಡಿಕಾರಿದ್ದಾರೆ. ರವಿಶಾಸ್ತ್ರಿ ಅವರಿಗೆ ಟೀಂ ಇಂಡಿಯಾ ಕೋಚ್ ಹುದ್ದೆ ತಪ್ಪಿಸಲು ಗಂಗೂಲಿಯೇ ಕಾರಣ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸ್ತ್ರಿ, ಗಂಗೂಲಿ ನಡೆ ಅಗೌರವದಿಂದ ಕೂಡಿದೆ, ಇನ್ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಎಂಬ ಭರವಸೆ ಇದೆ ಎಂದಿದ್ದಾರೆ.
ಬ್ಯಾಂಕಾಕ್ ಪ್ರವಾಸದಿಂದ ಹಿಂದಿರುಗಿ ಬಂದಿರುವ ರವಿಶಾಸ್ತ್ರಿ ಅವರು ಸುದ್ದಿಗಾರರ ಜತೆ ಮಾತನಾಡುತ್ತಾ, ತಂಡದ ನಾಯಕನ ಆಯ್ಕೆ ಪ್ರಕ್ರಿಯೆ ಮತ್ತು ಕೋಚ್ ಆಗುವ ಅವಕಾಶ ಕೈತಪ್ಪಿದ್ದರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.[ಟೀಂ ಇಂಡಿಯಾ ಕೋಚ್ ಆಗಿ ಅನಿಲ್ ಕುಂಬ್ಳೆ ಆಯ್ಕೆ]
ಅನಿಲ್ ಕುಂಬ್ಳೆ ಸರ್ವಕಾಲಿಕ ಶ್ರೇಷ್ಠ ಕ್ರಿಕೆಟರ್ ನಿಜ, ಆದರೆ, ಈಗ ಶ್ರೇಷ್ಠ ತಂಡವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ ಎಂದಿದ್ದಾರೆ. (ಐಎಎನ್ಎಸ್)