ರಾಜ್ ಕೋಟ್, ಮೇ 02 : ಗುಜರಾತ್ ಲಯನ್ಸ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜ ಅವರು ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿದಕ್ಕಾಗಿ ಮ್ಯಾಚ್ ರೆಫ್ರಿ ಅವರ ಕೆಂಗಣ್ಣಿಗೆ ಗುರಿಯಾಗಿ ಛೀಮಾರಿ ಹಾಕಿಸಿಕೊಂಡಿದ್ದಾರೆ.
ಐಪಿಎಲ್ 2016: ವೇಳಾಪಟ್ಟಿ | ಯಾವ ತಂಡದಲ್ಲಿ ಯಾವ ಆಟಗಾರರು | ಗ್ಯಾಲರಿ
ಮೇ 1 ರಂದು ಭಾನುವಾರ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ತಂಡದ ಅಕ್ಷರ್ ಪಟೇಲ್ ಅವರ ಬೌಲಿಂಗ್ ನಲ್ಲಿ ಜಡೇಜ ಔಟ್ ಆಗಿದ್ದರು. [ವಿಡಿಯೋ ನೋಡಿ : ಫೀಲ್ಡಲ್ಲಿ ರಾಯುಡು-ಹರ್ಭಜನ್ ಬೈದಾಟ]
ಅಕ್ಷರ್ ಪಟೇಲ್ ಅವರು ಈ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಲ್) 2016 ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಭಾಜನರಾದರು.
M28: GL vs KXIP – Axar Patel Hat-trick https://t.co/76uPj3gdsh #IPL
— DC Sports (@_DCSports) May 2, 2016