ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅಂಪೈರ್ ತೀರ್ಪು ಪ್ರಶ್ನಿಸಿದ ರವೀಂದ್ರ ಜಡೇಜಗೆ ವಾರ್ನಿಂಗ್!

By ಕ್ರಿಕೆಟ್ ಡೆಸ್ಕ್

ರಾಜ್ ಕೋಟ್, ಮೇ 02 : ಗುಜರಾತ್ ಲಯನ್ಸ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜ ಅವರು ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿದಕ್ಕಾಗಿ ಮ್ಯಾಚ್ ರೆಫ್ರಿ ಅವರ ಕೆಂಗಣ್ಣಿಗೆ ಗುರಿಯಾಗಿ ಛೀಮಾರಿ ಹಾಕಿಸಿಕೊಂಡಿದ್ದಾರೆ.

ಐಪಿಎಲ್ 2016: ವೇಳಾಪಟ್ಟಿ | ಯಾವ ತಂಡದಲ್ಲಿ ಯಾವ ಆಟಗಾರರು | ಗ್ಯಾಲರಿ

ಮೇ 1 ರಂದು ಭಾನುವಾರ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ತಂಡದ ಅಕ್ಷರ್ ಪಟೇಲ್ ಅವರ ಬೌಲಿಂಗ್ ನಲ್ಲಿ ಜಡೇಜ ಔಟ್ ಆಗಿದ್ದರು. [ವಿಡಿಯೋ ನೋಡಿ : ಫೀಲ್ಡಲ್ಲಿ ರಾಯುಡು-ಹರ್ಭಜನ್ ಬೈದಾಟ]

Ravindra Jadeja reprimanded for showing dissent at umpire's decision

ಅಂಪೈರ್ ನೀಡಿದ್ದ ತೀರ್ಪಿಗೆ ಜಡ್ಡು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಐಪಿಎಲ್ ನಿಯಮ level 1 offence (Article 2.1.5 of the IPL Code of Conduct for Players and Team Officials) ವನ್ನು ಉಲ್ಲಂಘಿಸಿದರು. ಜಡೇಜ ಅವರಿಗೆ ಮುಂದೆ ಇದೇ ರೀತಿ ಮಾಡದಂತೆ ಮ್ಯಾಚ್ ರೆಫ್ರಿ ಎಚ್ಚರಿಕೆ ನೀಡಿದ್ದಾರೆ.[ಬ್ರಾವೊ ಡ್ಯಾನ್ಸ್ ಗೆ ಫಿದಾ ಆಗಿದ್ದು ಒಬ್ರ, ಇಬ್ರ!]

ಅಕ್ಷರ್ ಪಟೇಲ್ ಅವರು ಈ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಲ್) 2016 ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಭಾಜನರಾದರು.



ಇನ್ನು ಈ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 23 ರನ್ ಗಳ ಅಮೋಘ ಜಯಗಳಿಸಿತು. ನಾಯಕನಾಗಿ ಮುರಳಿ ವಿಜಯ್ ಅವರು ಮೊದಲ ಪಂದ್ಯದಲ್ಲೇ ಗೆಲುವು ದಾಖಲಿಸಿದರು. (ಪಿಟಿಐ)

Story first published: Wednesday, January 3, 2018, 10:03 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X