ಮುಂಬೈ, ಜೂನ್ 1: ದೆಹಲಿಯ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು, ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.
ಇದರೊಂದಿಗೆ, ಈ ಪ್ರತಿಷ್ಠಿತ ಹುದ್ದೆಗೇರಲು ಪೈಪೋಟಿಯಲ್ಲಿರುವವರ ಸಂಖ್ಯೆ 6ಕ್ಕೇರಿದೆ. ಮಾಜಿ ಕ್ರಿಕೆಟಿಗರಾದ ಲಾಲ್ ಚಂದ್ ರಜಪೂತ್, ಕರ್ನಾಟಕದ ದೊಡ್ಡ ಗಣೇಶ್, ಟಾಮ್ ಮೂಡಿ ಹಾಗೂ ರಿಚರ್ಡ್ ಪೈಬಸ್ ಅವರೂ ಅರ್ಜಿ ಸಲ್ಲಿಸಿದ್ದಾರೆ. ಇನ್ನು, ಹಾಲಿ ಕೋಚ್ ಅನಿಲ್ ಕುಂಬ್ಳೆ ಕೂಡಾ ಈ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.[ಕುಂಬ್ಳೆಯಿಂದ ಕೊಹ್ಲಿ ಜತೆಗಿನ ಖಾಸಗಿ ಚಾಟ್ ಬಹಿರಂಗ?]
ಹಾಲಿ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರ ಸೇವಾವಧಿ ಜೂ. 22ರಂದು ಕೊನೆಗೊಳ್ಳಲಿದೆ. 2016ರ ಜೂನ್ 23ರಂದು ಅವರು ಈ ಹುದ್ದೆಗೆ ನೇಮಿಸಲ್ಪಟ್ಟಿದ್ದರು.[ಭಾರತ -ಪಾಕ್ ಪಂದ್ಯ ಎಲ್ಲಿ ನೋಡ್ತೀರಿ ನನಗೆ ತಿಳಿಸಿ : ಸೆಹ್ವಾಗ್]
ಮುಖ್ಯ ತರಬೇತುದಾರರ ಹುದ್ದೆಗಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ವೈಯಕ್ತಿಕ ಸಂದರ್ಶನಗಳನ್ನು ನಡೆಸಿದ ಮೇಲೆ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ ಅವರುಳ್ಳ ಬಿಸಿಸಿಐ ಸಲಹಾ ಸಮಿತಿಯು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆ.