ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕ್ರಿಕೆಟ್ ಆಡಲು ದೇಶವನ್ನೇ ತೊರೆಯಲು ಸಿದ್ಧ ಎಂದ ಶ್ರೀಶಾಂತ್

Stung by life ban, S Sreesanth hints he might play for another country

ನವದೆಹಲಿ, ಅಕ್ಟೋಬರ್ 20: ಮತ್ತೆ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಲು ಹಾತೊರೆಯುತ್ತಿರುವ ಭಾರತದ ಮಾಜಿ ವೇಗಿ ಎಸ್. ಶ್ರೀಶಾಂತ್ ದೇಶವನ್ನೇ ತೊರೆಯಲು ಮುಂದಾಗಿದ್ದಾರೆ.

ಶ್ರೀಶಾಂತ್ ಕ್ರಿಕೆಟ್ ಆಡುವ ಆಸೆಗೆ ತಣ್ಣೀರುಶ್ರೀಶಾಂತ್ ಕ್ರಿಕೆಟ್ ಆಡುವ ಆಸೆಗೆ ತಣ್ಣೀರು

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ಕೇರಳ ವೇಗಿ ಎಸ್. ಶ್ರೀಶಾಂತ್ ಬೇರೆ ದೇಶದ ಕ್ರಿಕೆಟ್ ತಂಡದ ಪರವಾಗಿ ಆಡುವ ಸುಳಿವು ನೀಡಿದ್ದಾರೆ.

ಬಿಸಿಸಿಐ ಆಜೀವ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿರುವುದರಿಂದ ಆಕ್ರೋಶಗೊಂಡಿರುವ ಶ್ರೀಶಾಂತ್, 'ಬಿಸಿಸಿಐ ಮಾತ್ರ ನನಗೆ ನಿಷೇಧ ಹೇರಿದೆ. ಐಸಿಸಿ ಯಾವುದೇ ನಿಷೇಧ ಹೇರಿಲ್ಲ. ಹೀಗಾಗಿ ನಾನು ಬೇರೆ ಯಾವುದೇ ದೇಶದ ಪರ ಆಡುವ ಸ್ವಾತಂತ್ರ್ಯ ಹೊಂದಿರುವುದಾಗಿ' ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿದ್ದಾರೆ.

ಬಿಸಿಸಿಐ ನನ್ನ ಮೇಲೆ ನಿಷೇಧ ಹೇರಿದೆ. ಐಸಿಸಿ ಅಲ್ಲ. ಹಾಗಾಗಿ ಯಾವುದೇ ದೇಶದ ಪರ ನಾನು ಆಡಬಲ್ಲೆ. 34ರ ಹರೆಯದ ನಾನು ಗರಿಷ್ಠ ಆರು ವರ್ಷ ಆಡುವ ಸಾಮರ್ಥ್ಯ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

2013ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು.

Story first published: Wednesday, January 30, 2019, 20:15 [IST]
Other articles published on Jan 30, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X