ನವದೆಹಲಿ, ಜುಲೈ 12:ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಟಿ.ವಿ. ಪ್ರಸಾರದ ಹಕ್ಕುಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾರಾಟ ಮಾಡುತ್ತಿರುವ ರೀತಿಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಂದ್ಯಗಳ ಪ್ರಸಾರ ಹಕ್ಕು ಮಾರಾಟ ಪ್ರಕ್ರಿಯೆ ಎಲ್ಲವೂ ಇ-ಹರಾಜು ಮಾಡುವಂತೆ ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಹಾಕಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ತಿಳಿಸಿದೆ.
ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ಮತ್ತು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ, ಈ ಬಗ್ಗೆ ಇನ್ನಷ್ಟು ಪರಿಶೀಲನೆ ಅಗತ್ಯ ಎಂದಿದ್ದಾರೆ.
ಜುಲೈ 17ರಂದು ಐಪಿಎಲ್ ಪ್ರಸಾರದ ಹಕ್ಕುಗಳ ಹರಾಜು ಪ್ರಕ್ರಿಯೆ ನಡೆಯಲಿದೆ. ಸುಮಾರು ₹ 30 ಸಾವಿರ ಕೋಟಿ ಮೌಲ್ಯದ ವ್ಯವಹಾರ ಇದಾಗಿದೆ. ಆದ್ದರಿಂದ ಇ-ಹರಾಜು ಪದ್ಧತಿಯನ್ನು ಅಳವಡಿಸುವುದರಿಂದ ಪಾರದರ್ಶಕತೆ ಸಾಧ್ಯವಾಗುತ್ತದೆ' ಎಂದು ಸ್ವಾಮಿ ಅವರು ಅರ್ಜಿ ಹಾಕಿದ್ದಾರೆ.