ಬೆಂಗಳೂರು, ಸೆ. 05: ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿನ ಪಾತ್ರ ಮಹತ್ವ ಅನನ್ಯವಾಗಿದೆ. ನಮ್ಮಲ್ಲಿರುವ ಅಜ್ಞಾನದಿಂದ ಹೊರಗೆ ಹಾಕಲು ಶಿಕ್ಷಕರು ಮಾರ್ಗದರ್ಶಿಯಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವೂ ಇದನ್ನೇ ಹೇಳುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧಕರನ್ನು ಸೃಷ್ಟಿಸಿದ ಗುರುಗಳನು ಇಂದು ಸ್ಮರಿಸಲಾಗಿದೆ.
ಶಿಷ್ಯಂದಿರು ಗುರು ಹೇಳಿಕೊಟ್ಟದ್ದನ್ನು ಸರಿಯಾಗಿ ಆಲಿಸಿ, ನಂತರ ಅದನ್ನು ಮನನ ಮಾಡಿ ಅದರ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯೋಗ್ಯವಾದ ಗುರುವನ್ನು ಆರಿಸುವ ಹಕ್ಕು ಶಿಷ್ಯನಿಗೆ ಇರುತ್ತದೆ
ಭಾರತದಲ್ಲಿ ಗುರುವನ್ನು ನೆನಪಿಕೊಳ್ಳುವಂತೆ ಮಾಡಿದ ಕೀರ್ತಿ ರಾಷ್ಟ್ರಾಧ್ಯಕ್ಷರಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣರಿಗೆ ಸಲ್ಲುತ್ತದೆ. ಉದಾರ ಮನೋಭಾವನೆಯಿಂದ ತಾವು ಹುಟ್ಟಿದ ದಿನವನ್ನು (ಸೆಪ್ಟೆಂಬರ್ 5) ಶಿಕ್ಷಕರ ದಿನವೆಂದು ಆಚರಿಸಲು ತಮ್ಮ ಶಿಷ್ಯ ವೃಂದಕ್ಕೆ ಕರೆಯನ್ನಿತ್ತರು.
ತಾಯಿಯ ಮಮತೆಯನ್ನು, ತಂದೆಯಂತೆ ಜವಾಬ್ದಾರಿಯಿಂದ ಪೋಷಣೆ ಮಾಡಬಲ್ಲವನೇ ನಿಜವಾದ ಗುರು. ಗುರುವಾದವನು ತನ್ನ ಶಿಷ್ಯನಿಗೆ ತಂದೆ-ತಾಯಿ ಎರಡೂ ಆಗಬಲ್ಲ. ಒಳ್ಳೆಯ ಮಾರ್ಗದಲ್ಲಿ ನಡೆಯುವವರು, ನಡೆದವರು, ನಡೆಯಬಯಸುವವರು ಇನ್ನಾದರೂ ತಮ್ಮ ಮಾರ್ಗದರ್ಶಕರನ್ನು ಮರೆಯದೇ ನೆನಪಿಸಿಕೊಳ್ಳುವುದು ಅಗತ್ಯ..
ಟ್ವಿಟ್ಟರ್ ನಲ್ಲಿಯೂ ಇಂದು ಹಲವರು ಶಿಕ್ಷಕರ ದಿನದಂದು ತಮ್ಮ ನೆಚ್ಚಿನ ಶಿಕ್ಷಕರನ್ನು ನೆನಪಿಸಿಕೊಂಡು ಶುಭಹಾರೈಸಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು ಶುಭ ಹಾರೈಸಿದ್ದು ಹೀಗೆ:
Happy #TeachersDay! The lessons you taught me have always served me well. Sharing an incident with you all that changed my life! pic.twitter.com/J1izUvPG3C
— sachin tendulkar (@sachin_rt) September 5, 2017
ಬಾಡ್ಮಿಂಟನ್ ತಾರೆ ಪಿ ವಿ ಸಿಂಧು ಅವರ ವಿಡಿಯೋ ಸಂದೇಶ, ಕೋಚ್ ಗೋಪಿಚಂದ್ ಅವರನ್ನು ದ್ವೇಷಿಸುತ್ತೇನೆ ಎಂದಿದ್ದೇಕೆ?
I HATE MY TEACHER, Gopichand. Watch the video to know why! #sweatforgold @GatoradeIndia https://t.co/dBN4dDtRqT
— Pvsindhu (@Pvsindhu1) September 4, 2017
ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬೂಮ್ರಾ ಅವರ ಸಂದೇಶ:
Coming from a teaching family background I realise the importance of teachers . Their teachings only make us better. Happy teachers day.😀😀 pic.twitter.com/OjqM6QfS3c
— Jasprit bumrah (@Jaspritbumrah93) September 5, 2017