ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶ್ವಟಿ20 ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?

By Mahesh

ಸುಬ್ರಹ್ಮಣ್ಯ, ಫೆ.17: ಭಾರತ ಕ್ರಿಕೆಟ್ ತಂಡ ಬಲಿಷ್ಠ ತಂಡವಾಗಿದೆ. ಅನುಭವಿ ಮತ್ತು ಪ್ರತಿಭಾನ್ವಿತ ಆಟಗಾರರು ತಂಡದಲ್ಲಿದ್ದಾರೆ.ಟಿ-20 ವಿಶ್ವಕಪ್‌ನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ಕಪ್ ಎತ್ತುವ ವಿಶ್ವಾಸವಿದೆ ಎಂದು ಮಾಜಿ ಕ್ರಿಕೆಟರ್ ರವಿಶಾಸ್ತ್ರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೇಳಿದ್ದಾರೆ.

ಭಾರತ ತಂಡವೂ ಎದುರಾಳಿ ಬಲಿಷ್ಠ ತಂಡಗಳನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ. ಮುಂದಿನ ಟಿ-20 ವಿಶ್ವಕಪ್‌ನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ತೋರುವ ವಿಶ್ವಾವಿದೆ ಎಂದು ಮಾಜಿ ಕ್ರಿಕೆಟಿಗ ಮತ್ತು ಭಾರತೀಯ ಕ್ರಿಕೆಟ್ ತಂಡದ ನಿರ್ದೇಶಕ ರವಿಶಾಸ್ತ್ರಿ ಹೇಳಿದರು.[ವಿಶ್ವ ಟಿ20 ಸಮರಕ್ಕೆ ಸಜ್ಜಾದ ತಂಡಗಳ ಪಟ್ಟಿ]

Ravi Shastri

ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಸೇವೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಟೆಸ್ಟ್ ಮತ್ತು ಟಿ-20ಯಲ್ಲಿ ಭಾರತ ತಂಡ ಒಂದನೇ ಸ್ಥಾನದಲ್ಲಿದ್ದು, ಸಶಕ್ತ ತಂಡವಾಗಿದೆ ಎಂದರು. ನಂತರ ಕಾರ್ಕಳದ ಎರ್ಲಪಾಡಿಯ ನಾಗನ ಗುಡಿಯಲ್ಲಿ ಆಶ್ಲೇಷ ಬಲಿ ಪೂಜೆ ನಡೆಸಿದರು.[ವಿಶ್ವಟಿ20 ಸಂಪೂರ್ಣ ವೇಳಾಪಟ್ಟಿ]

ರಚನಾತ್ಮಕವಾಗಿ ಮೈದಾನದಲ್ಲಿ ಉತ್ತಮ ಪ್ರದರ್ಶನ ತೋರಿದರೆ ತಂಡಕ್ಕೆ ಗೆಲುವು ಕಷ್ಟವಾಗಲಾರದು. ಮುಂಬರುವ ಟಿ-20 ವಿಶ್ವಕಪ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ತೋರುವ ಎಲ್ಲಾ ಸಾಧ್ಯತೆ ಕಾಣುತ್ತಿದೆ. ಟಿ-20ಯಲ್ಲಿ ನಿರಂತರ ವಿಜಯ ಸಾಧಿಸುತ್ತಿರುವುದರಿಂದ ಇದೇ ಸಾಧನೆ ಮುಂದೆಯೂ ಮುಂದುವರೆಯಲಿದೆ ಎನ್ನುವುದು ನನ್ನ ವಿಶ್ವಾಸವಾಗಿದೆ ಎಂದು ಹೇಳಿದರು.

Story first published: Wednesday, January 3, 2018, 10:03 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X